ಬ್ರೇಕಿಂಗ್ ನ್ಯೂಸ್
07-06-22 09:04 pm HK News Desk ದೇಶ - ವಿದೇಶ
ನವದೆಹಲಿ, ಜೂ 07: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಪತ್ನಿ ಪೂನಂ ಜೈನ್ ಹಾಗೂ ಸಹಚರರ ಮನೆಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಶೋಧ ಕಾರ್ಯ ನಡೆಸಿ, 2.85 ಕೋಟಿ ರೂ. ನಗದು ಹಾಗೂ 1.8 ಕೆಜಿಯಷ್ಟು ಚಿನ್ನವನ್ನು ವಶಪಡಿಸಿಕೊಂಡಿದೆ.
ಸತ್ಯೇಂದ್ರ ಜೈನ್ ತಮ್ಮ ಪತ್ನಿ, ಪುತ್ರಿಯರು, ಸ್ನೇಹಿತರು ಹಾಗೂ ಸಹಚರರ ಸಹಾಯದಿಂದ 16 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಹೊತ್ತಿದ್ದಾರೆ. ಮೇ 20 ರಂದು ಸತ್ಯೇಂದ್ರ ಜೈನ್ ಅವರನ್ನು ಇಡಿ ಬಂಧಿಸಿತ್ತು. ಪ್ರಸ್ತುತ ಸತ್ಯೇಂದ್ರ ಜೈನ್ ಇಡಿ ವಶದಲ್ಲಿದ್ದಾರೆ.


ಶೋಧ ಕಾರ್ಯದ ವೇಳೆ ಸಿಕ್ಕಿರುವ 500 ಹಾಗೂ 2,000 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳನ್ನು ಜೋಡಿಸಿ `ಇಡಿ’ ಎಂದು ವಿನ್ಯಾಸಗೊಳಿಸಲಾಗಿದೆ. ನೋಟಿನ ಕಂತೆಗಳಿಂದಲೇ ಇಡಿ ಎಂದು ವಿನ್ಯಾಸಗೊಳಿಸಿ ತೆಗೆದಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
![]()
2015 ಫೆಬ್ರವರಿಯಿಂದ 2017ರ ಮೇ ತಿಂಗಳಿನ ವರೆಗೆ ದೆಹಲಿ ಸರ್ಕಾರದ ಸಚಿವರಾಗಿದ್ದ ಸತ್ಯೇಂದ್ರ ಜೈನ್ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿ, 2018ರಲ್ಲಿ ಪ್ರಕರಣ ದಾಖಲಿಸಿತ್ತು. ಇದೀಗ ಇಡಿ, ಸಿಬಿಐ ದಾಖಲಿಸಿರುವ ಎಫ್ಐಆರ್ ಆಧಾರದ ಮೇಲೆ ಐಪಿಸಿ ಸೆಕ್ಷನ್ 109 ಹಾಗೂ ಸೆಕ್ಷನ್ 13(2)ರ ಅಡಿ ತನಿಖೆ ನಡೆಸುತ್ತಿದೆ.
ಪ್ರಧಾನಿ ಮೋದಿ ಆಪ್ ಸರ್ಕಾರಗಳ ಹಿಂದೆ ಬಿದ್ದಿದ್ದಾರೆ:

ಪ್ರಧಾನಿ ನರೇಂದ್ರ ಮೋದಿ ಆಮ್ ಆದ್ಮಿ ಪಕ್ಷ ಮತ್ತು ರಾಷ್ಟ್ರ ರಾಜಧಾನಿ ನವದೆಹಲಿ, ಪಂಜಾಬಿನಲ್ಲಿನ ಆಪ್ ಸರ್ಕಾರಗಳ ಹಿಂದೆ ಬಿದ್ದಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಆರೋಪಿಸಿದ್ದಾರೆ.
![]()
ಈ ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್, ಸತ್ಯೇಂದ್ರ ಜೈನ್ ವಿರುದ್ಧ ಆರೋಪ ಸುಳ್ಳು ಎಂದಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ಬಲದೊಂದಿಗೆ ಪ್ರಧಾನಿ ಮೋದಿ ಆಪ್ ಪಕ್ಷ ಮತ್ತು ದೆಹಲಿ ಮತ್ತು ಪಂಜಾಬಿನ ಸರ್ಕಾರಗಳ ಹಿಂದೆ ಬಿದ್ದಿದ್ದಾರೆ. ಸುಳ್ಳಿನ ನಂತರ ಸುಳ್ಳು, ಸುಳ್ಳಿನ ನಂತರ ಸುಳ್ಳು ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ನೀವು( ಪ್ರಧಾನಿ) ಎಲ್ಲಾ ತನಿಖಾ ತಂಡಗಳ ಬಲವನ್ನು ಹೊಂದಿದ್ದೀರಿ ಆದರೆ, ದೇವರು ನಮ್ಮೊಂದಿಗೆ ಇದ್ದಾನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
The Enforcement Directorate (ED) on Monday conducted searches at Delhi Health Minister Satyendar Jain's residence and other locations in the national capital in connection with a money laundering case filed against the minister.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
13-09-26 08:10 pm
HK News
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm