ಬ್ರೇಕಿಂಗ್ ನ್ಯೂಸ್
08-06-22 10:58 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 8 : ಮಾರಣಾಂತಿಕ ಎಂದೇ ಪರಿಗಣಿಸಲ್ಪಟ್ಟ ಕ್ಯಾನ್ಸರ್ ಕಾಯಿಲೆಗೆ ಅಮೆರಿಕದಲ್ಲಿ ಹೊಸ ಔಷಧಿ ಕಂಡುಹಿಡಿಯಲಾಗಿದೆ. ಹೊಸ ಔಷಧಿಯನ್ನು ನೀಡುವ ಮೂಲಕ ಕ್ಯಾನ್ಸರ್ ಪೀಡಿತರನ್ನು ಶಸ್ತ್ರಚಿಕಿತ್ಸೆ ಇಲ್ಲದೆ ಗುಣಪಡಿಸಲಾಗಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.
ಅಮೆರಿಕದ ವಿಜ್ಞಾನಿಗಳು ಡೋಸ್ಟಾರ್ಲಿಮಾಬ್ ಎನ್ನುವ ಏಂಟಿ ಬಯಾಟಿಕ್ ಔಷಧಿಯನ್ನು ನೀಡುವ ಮೂಲಕ ಕ್ಯಾನ್ಸರ್ ಗಡ್ಡೆಯನ್ನು ನಿವಾರಣೆ ಮಾಡಿದ್ದಾರೆ. ಈ ಹೊಸ ಔಷಧಿಯನ್ನು ನ್ಯೂಯಾರ್ಕ್ನ ಮೆಮೋರಿಯಲ್ ಸ್ಲೋನ್ ಕ್ಯಾಟರಿಂಗ್ ಸೆಂಟರ್ ನಲ್ಲಿ 12 ರೋಗಿಗಳಿಗೆ ಪ್ರಯೋಗ ಮಾಡಲಾಗಿದ್ದು ಯಶಸ್ಸು ಪಡೆದಿದ್ದಾರೆ.
ಒಬ್ಬ ಭಾರತ ಮೂಲದ ವ್ಯಕ್ತಿ ಸೇರಿ 12 ಮಂದಿ ಗುದನಾಳದ ಕ್ಯಾನ್ಸರ್ ಇದ್ದ ರೋಗಿಗಳಿಗೆ ಈ ಹೊಸ ಔಷಧಿಯನ್ನು ನೀಡಲಾಗಿದೆ. ಎರಡು ಮತ್ತು ಮೂರನೇ ಹಂತದಲ್ಲಿದ್ದ ಇವರಿಗೆ ಈ ಔಷಧಿಯನ್ನು ಮೂರು ವಾರಗಳಿಗೊಮ್ಮೆ ಆರು ತಿಂಗಳ ವರೆಗೆ ನೀಡಲಾಗಿತ್ತು. ಆನಂತರ ಗುದನಾಳದಲ್ಲಿದ್ದ ಗಡ್ಡೆ ಪೂರ್ತಿಯಾಗಿ ನಿವಾರಣೆ ಆಗಿದೆ ಎನ್ನುವ ಮಾಹಿತಿಯನ್ನು ವೈದ್ಯರು ಹಂಚಿಕೊಂಡಿದ್ದಾರೆ.
ಚಿಕಿತ್ಸೆ ನಂತರ ಈ ರೋಗಿಗಳನ್ನು ವಿವಿಧ ಪರೀಕ್ಷೆಗೆ ಒಳಪಡಿಸಿದ್ದು ಅವರಲ್ಲಿ ಗಡ್ಡೆಯ ಲಕ್ಷಣಗಳು ಕಾಣಿಸಿಲ್ಲ. ಕ್ಯಾನ್ಸರ್ ಗಡ್ಡೆಗಳಿಗೆ ವಿಕಿರಣ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಕಿಮೋಥೆರಪಿ ಇತ್ಯಾದಿ ಬದಲು ಡೋಸ್ಟಾರ್ಲಿಮಾಬ್ ಔಷಧಿಯನ್ನು ನೀಡಲು ಸಾಧ್ಯವೇ ಅನ್ನುವ ಬಗ್ಗೆ ಹೆಚ್ಚಿನ ಅಧ್ಯಯನವನ್ನು ವೈದ್ಯರು ಕೈಗೊಂಡಿದ್ದಾರೆ. ಶಸ್ತ್ರಚಿಕಿತ್ಸೆ ಇಲ್ಲದೆ, ಗಡ್ಡೆಯನ್ನು ನಿವಾರಣೆ ಮಾಡಿರುವುದು ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಎನ್ನುವ ಮೆಚ್ಚುಗೆ ವ್ಯಕ್ತವಾಗಿದೆ.
In a medical trial that has shown unprecedented results, twelve rectal cancer patients were completely cured of the disease without any surgery or chemotherapy, according to a study published in the New England Journal of Medicine.The study, done by doctors from the Memorial Sloan Kettering Cancer Centre in New York, used a monoclonal antibody called dostarlimab every three weeks for a period of six months for the treatment of a particular kind of stage two or three rectal cancer.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm