ಬ್ರೇಕಿಂಗ್ ನ್ಯೂಸ್
08-06-22 10:58 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 8 : ಮಾರಣಾಂತಿಕ ಎಂದೇ ಪರಿಗಣಿಸಲ್ಪಟ್ಟ ಕ್ಯಾನ್ಸರ್ ಕಾಯಿಲೆಗೆ ಅಮೆರಿಕದಲ್ಲಿ ಹೊಸ ಔಷಧಿ ಕಂಡುಹಿಡಿಯಲಾಗಿದೆ. ಹೊಸ ಔಷಧಿಯನ್ನು ನೀಡುವ ಮೂಲಕ ಕ್ಯಾನ್ಸರ್ ಪೀಡಿತರನ್ನು ಶಸ್ತ್ರಚಿಕಿತ್ಸೆ ಇಲ್ಲದೆ ಗುಣಪಡಿಸಲಾಗಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.
ಅಮೆರಿಕದ ವಿಜ್ಞಾನಿಗಳು ಡೋಸ್ಟಾರ್ಲಿಮಾಬ್ ಎನ್ನುವ ಏಂಟಿ ಬಯಾಟಿಕ್ ಔಷಧಿಯನ್ನು ನೀಡುವ ಮೂಲಕ ಕ್ಯಾನ್ಸರ್ ಗಡ್ಡೆಯನ್ನು ನಿವಾರಣೆ ಮಾಡಿದ್ದಾರೆ. ಈ ಹೊಸ ಔಷಧಿಯನ್ನು ನ್ಯೂಯಾರ್ಕ್ನ ಮೆಮೋರಿಯಲ್ ಸ್ಲೋನ್ ಕ್ಯಾಟರಿಂಗ್ ಸೆಂಟರ್ ನಲ್ಲಿ 12 ರೋಗಿಗಳಿಗೆ ಪ್ರಯೋಗ ಮಾಡಲಾಗಿದ್ದು ಯಶಸ್ಸು ಪಡೆದಿದ್ದಾರೆ.

ಒಬ್ಬ ಭಾರತ ಮೂಲದ ವ್ಯಕ್ತಿ ಸೇರಿ 12 ಮಂದಿ ಗುದನಾಳದ ಕ್ಯಾನ್ಸರ್ ಇದ್ದ ರೋಗಿಗಳಿಗೆ ಈ ಹೊಸ ಔಷಧಿಯನ್ನು ನೀಡಲಾಗಿದೆ. ಎರಡು ಮತ್ತು ಮೂರನೇ ಹಂತದಲ್ಲಿದ್ದ ಇವರಿಗೆ ಈ ಔಷಧಿಯನ್ನು ಮೂರು ವಾರಗಳಿಗೊಮ್ಮೆ ಆರು ತಿಂಗಳ ವರೆಗೆ ನೀಡಲಾಗಿತ್ತು. ಆನಂತರ ಗುದನಾಳದಲ್ಲಿದ್ದ ಗಡ್ಡೆ ಪೂರ್ತಿಯಾಗಿ ನಿವಾರಣೆ ಆಗಿದೆ ಎನ್ನುವ ಮಾಹಿತಿಯನ್ನು ವೈದ್ಯರು ಹಂಚಿಕೊಂಡಿದ್ದಾರೆ.
ಚಿಕಿತ್ಸೆ ನಂತರ ಈ ರೋಗಿಗಳನ್ನು ವಿವಿಧ ಪರೀಕ್ಷೆಗೆ ಒಳಪಡಿಸಿದ್ದು ಅವರಲ್ಲಿ ಗಡ್ಡೆಯ ಲಕ್ಷಣಗಳು ಕಾಣಿಸಿಲ್ಲ. ಕ್ಯಾನ್ಸರ್ ಗಡ್ಡೆಗಳಿಗೆ ವಿಕಿರಣ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಕಿಮೋಥೆರಪಿ ಇತ್ಯಾದಿ ಬದಲು ಡೋಸ್ಟಾರ್ಲಿಮಾಬ್ ಔಷಧಿಯನ್ನು ನೀಡಲು ಸಾಧ್ಯವೇ ಅನ್ನುವ ಬಗ್ಗೆ ಹೆಚ್ಚಿನ ಅಧ್ಯಯನವನ್ನು ವೈದ್ಯರು ಕೈಗೊಂಡಿದ್ದಾರೆ. ಶಸ್ತ್ರಚಿಕಿತ್ಸೆ ಇಲ್ಲದೆ, ಗಡ್ಡೆಯನ್ನು ನಿವಾರಣೆ ಮಾಡಿರುವುದು ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಎನ್ನುವ ಮೆಚ್ಚುಗೆ ವ್ಯಕ್ತವಾಗಿದೆ.
In a medical trial that has shown unprecedented results, twelve rectal cancer patients were completely cured of the disease without any surgery or chemotherapy, according to a study published in the New England Journal of Medicine.The study, done by doctors from the Memorial Sloan Kettering Cancer Centre in New York, used a monoclonal antibody called dostarlimab every three weeks for a period of six months for the treatment of a particular kind of stage two or three rectal cancer.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm