ಬ್ರೇಕಿಂಗ್ ನ್ಯೂಸ್
10-06-22 07:40 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 10: ಪ್ರವಾದಿ ಪೈಗಂಬರ್ ಬಗ್ಗೆ ಹೇಳಿಕೆ ನೀಡಿದ್ದ ಬಿಜೆಪಿ ನಾಯಕರಾದ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದ ಇಂದು ದೇಶಾದ್ಯಂತ ಮುಸ್ಲಿಮರು ಪ್ರತಿಭಟನೆ ನಡೆಸಿದ್ದಾರೆ. ರಾಜಧಾನಿ ದೆಹಲಿ, ಉತ್ತರ ಪ್ರದೇಶದ ಖಾನ್ಪುರ, ಲಕ್ನೋ, ಪ್ರಯಾಗರಾಜ್, ಕೊಲ್ಕತ್ತಾ, ಹೈದರಾಬಾದ್, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಶುಕ್ರವಾರ ಮಧ್ಯಾಹ್ನ ಪ್ರಾರ್ಥನೆಯ ಬಳಿಕ ಮುಸ್ಲಿಮರು ಪ್ರತಿಭಟನೆ ನಡೆಸಿದ್ದು ಹಲವು ಕಡೆಗಳಲ್ಲಿ ಹಿಂಸೆಗೆ ತಿರುಗಿದೆ.
ದೆಹಲಿಯ ಜಾಮಿಯಾ ಮಸೀದಿ ಮುಂದೆ ಭಾರೀ ಸಂಖ್ಯೆಯಲ್ಲಿ ಸೇರಿದ ಮುಸ್ಲಿಮರು ನೂಪುರ್ ಶರ್ಮಾ ಅವರನ್ನು ಬಂಧಿಸಲು ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶದ ಹಲವಾರು ಕಡೆಗಳಲ್ಲಿ ಪ್ರತಿಭಟನೆ ನಡೆದಿದ್ದು, ಜನರು ಸರಕಾರಿ ಬಸ್, ಕಟ್ಟಡಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನೆ ಹಿಂಸೆಗೂ ತಿರುಗಿದ್ದು, ಕಲ್ಲು ತೂರಾಟದಿಂದ ಹಲವರು ಗಾಯಗೊಂಡಿದ್ದಾರೆ. ಸಹರನ್ ಪುರ್, ಪ್ರಯಾಗರಾಜ್, ಫಿರೋಜಬಾದ್, ಮೊರಾದಬಾದ್ ನಗರದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಮ್ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಸರಕಾರ ಮತ್ತು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶದ ಹಲವು ಕಡೆಗಳಲ್ಲಿ ಉದ್ವಿಗ್ನ ಸ್ಥಿತಿ ಎದುರಾಗಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.


ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಪ್ರತಿಭಟನೆ ಹಿಂಸೆಗೆ ತಿರುಗಿದ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಪ್ರಯಾಗರಾಜ್ ನಲ್ಲಿ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಉದ್ರಿಕ್ತರನ್ನು ಚದುರಿಸಿದ್ದು, ಹಲವರಿಗೆ ಗಾಯಗಳಾಗಿರುವ ವರದಿಗಳಿವೆ.

ಮಹಾರಾಷ್ಟ್ರದ ಸೋಲಾಪುರದಲ್ಲಿ ಮಹಿಳೆಯರು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಮುಸ್ಲಿಂ ಮತೀಯರು ಬೀದಿಗಿಳಿದಿದ್ದು ಸರಕಾರ, ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗುತ್ತಾ ಸಾಗಿದ್ದಾರೆ. ಜಮ್ಮು ಕಾಶ್ಮೀರದ ಶ್ರೀನಗರ, ಶೋಪಿಯಾನ್ ಜಿಲ್ಲೆಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕಾಶ್ಮೀರ ಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ನಂತರ ಪೂರ್ತಿಯಾಗಿ ಬಂದ್ ಆಗಿತ್ತು. ಜನರು ಭೀತಿಯಿಂದ ಹೊರ ಬರುವುದನ್ನೇ ನಿಲ್ಲಿಸಿದ್ದರು. ಮುಸ್ಲಿಮರು ಬೀದಿಯಲ್ಲಿ ಮೆರವಣಿಗೆ ನಡೆಸಿದ್ದಾರೆ.

ತೆಲಂಗಾಣ ರಾಜ್ಯದ ಹೈದರಾಬಾದ್ ನಗರದ ಮೆಕ್ಕಾ ಮಸೀದಿ ಮುಂಭಾಗದಲ್ಲಿ ಸೇರಿದ ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ. ಕೆಲಕಾಲ ರಸ್ತೆ ಪೂರ್ತಿ ಬ್ಲಾಕ್ ಆದ ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಜನರನ್ನು ಮನವೊಲಿಸಿ ಸ್ಥಳದಿಂದ ತೆರವು ಮಾಡಿದ್ದಾರೆ.
#WATCH People in large numbers protest at Delhi's Jama Masjid over inflammatory remarks by suspended BJP leader Nupur Sharma & expelled leader Naveen Jindal, earlier today
— ANI (@ANI) June 10, 2022
No call for protest given by Masjid, says Shahi Imam of Jama Masjid. pic.twitter.com/Kysiz4SdxH
#WATCH Huge protest in UP's Saharanpur over inflammatory statements of suspended BJP leader Nupur Sharma and expelled BJP leader Naveen Kumar Jindal pic.twitter.com/H9z9sDvFWx
— ANI UP/Uttarakhand (@ANINewsUP) June 10, 2022
Anather Protest against #NupurSharma #NaveenJindal in
— call/me/meow🍂 (@Mazxx___) June 10, 2022
Saharanpur , U.P@AJArabic @zoo_bear @ZaaraSyedd pic.twitter.com/xJgWnZk7VN
Today multiple protests happening in different cities of India such as Lucknow, Saharanpur, Moradabad, Prayagraj, Kolkata, Firozabad, Delhi and Hyderabad demanding the arrest of BJP spokespersons Nupur Sharma & Naveen Jindal who made disgusting comments on Prophet Muhammad ﷺ pic.twitter.com/dILcWgk0ON
— Muslim Analyst (@muslimanalyst) June 10, 2022
The members of the Muslim community staged protests on Friday across the country over inflammatory remarks by suspended BJP leader Nupur Sharma and expelled leader Naveen Jindal against Prophet Muhammad. The protests broke out after Friday prayers in several cities including Delhi, Lucknow, Prayagraj, Shopian, Srinagar, Kolkata, etc. In Delhi, people gathered in large numbers outside Jama Masjid and demanded the arrest of Nupur Sharma.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm