ಬ್ರೇಕಿಂಗ್ ನ್ಯೂಸ್
11-06-22 04:05 pm HK News Desk ದೇಶ - ವಿದೇಶ
ರಾಂಚಿ, ಜೂನ್ 11: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಮುಸ್ಲಿಮ್ ಮತೀಯರ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಉದ್ರಿಕ್ತರು ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಹಲವಾರು ವಾಹನಗಳಿಗೆ ಬೆಂಕಿ ಇಕ್ಕಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಸತ್ತಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಹಲವಾರು ಪೊಲೀಸರು ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದಾರೆ.
ಶುಕ್ರವಾರ ಬೆಳಗ್ಗಿನಿಂದಲೇ ರಾಂಚಿಯಲ್ಲಿ ಪ್ರತಿಭಟನೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿತ್ತು. ರಸ್ತೆಗಳಲ್ಲಿ ಟೈರ್ ಗೆ ಬೆಂಕಿ ಹಚ್ಚುವುದು, ನಿಲ್ಲಿಸಿರುವ ವಾಹನಗಳಿಗೆ ಬೆಂಕಿ ಹಚ್ಚುವ ಕೆಲಸ ನಡೆದಿದೆ. ಸಣ್ಣ ಮಕ್ಕಳು, ಹರೆಯದ ಹುಡುಗರನ್ನು ಪ್ರಚೋದಿಸಿ ಗಲಭೆಗೆ ಹಚ್ಚುವ ಕೆಲಸ ನಡೆದಿದೆ. ರಾಂಚಿಯ ಕೆಲವು ಏರಿಯಾಗಳಲ್ಲಿ ಪೊಲೀಸರ ಕೈಮೀರಿದ್ದು, ಕರ್ಫ್ಯೂ ಹೇರಲಾಗಿದೆ. ಜನರು ಮನೆಯಿಂದ ಹೊರಬರದಂತೆ ತಡೆಯುತ್ತಿದ್ದಾರೆ. ಸಿಆರ್ ಪಿಎಫ್ ಯೋಧರನ್ನು ಗಲಭೆ ಪೀಡಿತ ಪ್ರದೇಶಗಳಲ್ಲಿ ನಿಯೋಜನೆ ಮಾಡಲಾಗಿದೆ.
ರಾಂಚಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಹೇರಲಾಗಿದ್ದು, ಕೆಲವು ಕಡೆಗಳಲ್ಲಿ ಅಂಗಡಿ, ವ್ಯಾಪಾರಸ್ಥರು ಕೂಡ ಹೊರಗೆ ಬರುವಂತಿಲ್ಲ. ಅಂಗಡಿ ಓಪನ್ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಅಲ್ಲದೆ, ಸೋಶಿಯಲ್ ಮೀಡಿಯಾದ ಮೂಲಕ ಗಲಭೆಗೆ ಪ್ರೇರಣೆ ನೀಡುವ ಕೆಲಸ ಆಗುತ್ತಿರುವ ಶಂಕೆಯಲ್ಲಿ ರಾಂಚಿಯಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ. ಕೇವಲ ಫೋನ್ ಸಂಪರ್ಕ ಮಾತ್ರ ಸೌಲಭ್ಯ ನೀಡಲಾಗಿದೆ.
ಬಿಹಾರದ ಸಚಿವ ಬಿಜೆಪಿ ಮುಖಂಡ ನಿತಿನ್ ನವೀನ್ ಶುಕ್ರವಾರ ರಾಂಚಿಯಲ್ಲಿದ್ದು ರಸ್ತೆಯಲ್ಲಿ ಪೊಲೀಸ್ ಭದ್ರತೆಯಲ್ಲಿ ಬರುತ್ತಿದ್ದಾಗಲೇ ಪ್ರತಿಭಟನೆ ಎದುರಾಗಿದೆ. ಉದ್ರಿಕ್ತರು ಸಚಿವರ ವಾಹನಕ್ಕೆ ಕಲ್ಲುತೂರಿ ಹಾನಿಗೊಳಿಸಲು ಮುಂದಾಗಿದ್ದಾರೆ. ಈ ವೇಳೆ, ಸಚಿವ ನಿತಿನ್ ನವೀನ್ ಹಲ್ಲೆಕೋರರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಹಲ್ಲೆ, ಹಿಂಸಾಚಾರ ಘಟನೆ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳು ರಾಂಚಿಯಲ್ಲಿ ಹರತಾಳಕ್ಕೆ ಕರೆ ನೀಡಿದ್ದು, ಶನಿವಾರ ನಗರ ಪೂರ್ತಿ ಬಂದ್ ಆಗಿದೆ.
An uneasy calm prevailed in Jharkhand’s Ranchi on Saturday, less than 24 hours after a protest against suspended BJP spokesperson Nupur Sharma’s inflammatory remarks on Prophet Mohammad turned violent. Streets were deserted as prohibitory orders remained in force in parts of the cityprohibitory orders remained in force in parts of the city, and internet services were suspended. Announcements were being made through the public address system in all localities, warning citizens not to venture out, otherwise they would be taken into custody.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm