ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಹತ್ಯೆ ; ಸೇನಾಪಡೆ ಗುಂಡಿಗೆ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರ ಬಲಿ 

15-06-22 10:46 am       HK News Desk   ದೇಶ - ವಿದೇಶ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಬುಧವಾರ ಹತ್ಯೆಗೈಯಲಾಗಿದೆ.

ಶ್ರೀನಗರ, ಜೂ 15: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಬುಧವಾರ ಹತ್ಯೆಗೈಯಲಾಗಿದೆ.

ಇತ್ತೀಚೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರರು, ಶೋಪಿಯಾನ್‌ನ ಕಂಜಿಯುಲಾರ್‌ನಲ್ಲಿ ಪ್ರದೇಶದಲ್ಲಿ ಅಡಗಿರುವ ಬಗೆಗಿನ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಈ ವೇಳೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.

Jammu and Kashmir: 2 terrorists killed in Shopian encounter, one terrorist  was involved in the murder of a bank manager from Rajasthan -  News8Plus-Realtime Updates On Breaking News & Headlines

ಹತ್ಯೆಯಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಶೋಪಿಯಾನ್‌ನ ಜಾನ್ ಮೊಹಮ್ಮದ್ ಲೋನ್ ಎಂದು ಗುರುತಿಸಲಾಗಿದೆ. ಇತರ ಭಯೋತ್ಪಾದಕ ಅಪರಾಧಗಳ ಜೊತೆಗೆ, ಅವರು ಕುಲ್ಗಾಮ್ ಜಿಲ್ಲೆಯಲ್ಲಿ ಜೂ. 6 ರಂದು ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

2 Lashkar Terrorists Killed In Shopian Encounter In Jammu And Kashmir –  Latest News, Breaking News Today News Bollywood, Cricket, Business,  Politics.

ಮಂಗಳವಾರವೂ ಶ್ರೀನಗರದಲ್ಲಿ ಎಲ್‌ಇಟಿಗೆ ಸಂಬಂಧಿಸಿದ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿತ್ತು. ಈ ವೇಳೆ ಓರ್ವ ಪೊಲೀಸ್ ಪೇದೆಯೂ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಭಯೋತ್ಪಾದಕರನ್ನು ಪಾಕಿಸ್ತಾನಿ ಹ್ಯಾಂಡ್ಲರ್‌ಗಳು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

Two Lashkar-e-Taiba militants were killed in an encounter with security forces in Shopian district of Jammu and Kashmir on Wednesday, police said.The encounter broke out between the militants and security forces at Kanjiular in Shopian after the personnel launched a cordon and search operation in the area, they said.Inspector General of Police, Kashmir zone, Vijay Kumar said one of the slain militants was identified as Jan Mohammad Lone, who was allegedly involved in the killing of a bank manager in Kulgam district recently.