ಬ್ರೇಕಿಂಗ್ ನ್ಯೂಸ್
29-09-20 05:20 pm Bangalore Correspondent ದೇಶ - ವಿದೇಶ
ಬೆಂಗಳೂರು, ಸೆಪ್ಟಂಬರ್ 29: ಚೀನಾದಲ್ಲಿ ಹುಟ್ಟಿಕೊಂಡ ಕೊರೊನಾ ವೈರಸ್, ಇಡೀ ಜಗತ್ತನ್ನೇ ತತ್ತರಿಸುವಂತೆ ಮಾಡಿರುವ ಬೆನ್ನಲ್ಲೇ ಈಗ ಚೀನಾದಿಂದ ಮತ್ತೊಂದು ರೀತಿಯ ವೈರಸ್ ಭಾರತಕ್ಕೆ ಲಗ್ಗೆ ಇಟ್ಟಿರುವುದು ದೃಢಪಟ್ಟಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ಕ್ಯಾಟ್ ಕ್ಯೂ ವೈರಸ್ (CQV - Cat Que Virus) ಎಂದು ಹೆಸರಿಸಲಾಗಿರುವ ಈ ವೈರಸ್ ಚೀನಾ ಮತ್ತು ವಿಯೆಟ್ನಾಂ ದೇಶಗಳ ಹಲವರಲ್ಲಿ ಸೋಂಕಿಗೆ ಕಾರಣವಾಗಿದೆ. ಇದೇ ವೇಳೆ, ಭಾರತದಲ್ಲೂ ಈ ವೈರಸ್ ಕಾಣಿಸಿಕೊಂಡಿದ್ದು ಪತ್ತೆಯಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ನಡೆಸಿದ ಅಧ್ಯಯನದಲ್ಲಿ ಎರಡು ಸಿಕ್ಯೂವಿ ಸೋಂಕು ಪ್ರಕರಣ ಭಾರತದಲ್ಲಿ ಪತ್ತೆಯಾಗಿದೆ. ಆ ಎರಡೂ ಪ್ರಕರಣ ಕರ್ನಾಟಕದಲ್ಲೇ ಇರುವುದು ಆತಂಕ ಮೂಡಿಸಿದೆ. ಚೀನಾ ಮತ್ತು ವಿಯೆಟ್ನಾನಲ್ಲಿ ಸೊಳ್ಳೆ ಮತ್ತು ಹಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ. ಭಾರತದಲ್ಲೂ ಕೆಲವು ಜಾತಿಯ ಸೊಳ್ಳೆಗಳು ಈ ವೈರಸ್ ಸೋಂಕಿಗೆ ಸುಲಭವಾಗಿ ತುತ್ತಾಗುತ್ತವೆಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಹಾಗೆಯೇ, ಹಂದಿಗಳಿಗೂ ಸೋಂಕು ಬೇಗ ಹರಡಲಿದೆ. ಹಂದಿ ಮತ್ತು ಸೊಳ್ಳೆಗಳ ಮೂಲಕ ಮನುಷ್ಯನಿಗೆ ರೋಗ ಹರಡುತ್ತದೆ ಎನ್ನುತ್ತಾರೆ ಐಸಿಎಂಆರ್ ವಿಜ್ಞಾನಿಗಳು.

ಕ್ಯಾಟ್ ಕ್ಯೂ ವೈರಸ್ ಸೋಂಕು ತಗುಲಿದವರಿಗೆ ಉಸಿರಾಟದ ತೊಂದರೆ, ಎದೆ ನೋವು, ನುಂಗಲು ತೊಂದರೆ, ಮಿದುಳು ಪೊರೆಯಲ್ಲಿ ಊತ, ಮಕ್ಕಳ ಮಿದುಳಿನಲ್ಲಿ ಊತ ಮೊದಲಾದ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಚೀನಾದಲ್ಲಿ ಹೊಸ ಸೋಂಕು ಬೆಳಕಿಗೆ ಬಂದ ನಂತರ ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಯ ವಿಜ್ಞಾನಿಗಳು ದೇಶಾದ್ಯಂತ 883 ವ್ಯಕ್ತಿಗಳ ರಕ್ತದ ಮಾದರಿಗಳನ್ನ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದ್ದಾರೆ. ಯಾರಲ್ಲೂ ವೈರಸ್ ಸಿಕ್ಕಿಲ್ಲವಾದರೂ ಇಬ್ಬರಲ್ಲಿ ಈ ವೈರಾಣುವಿನ ಪ್ರತಿಕಾಯಗಳ(Anti-bodies) ಉಪಸ್ಥಿತಿ ಕಂಡುಬಂದಿದೆ. ಅಂದರೆ ಈ ಇಬ್ಬರಲ್ಲಿ ಸೋಂಕು ಬಂದು ಹೋಗಿದ್ದರ ಕುರುಹು ಇದು ಎನ್ನಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am