ಬ್ರೇಕಿಂಗ್ ನ್ಯೂಸ್
29-09-20 05:20 pm Bangalore Correspondent ದೇಶ - ವಿದೇಶ
ಬೆಂಗಳೂರು, ಸೆಪ್ಟಂಬರ್ 29: ಚೀನಾದಲ್ಲಿ ಹುಟ್ಟಿಕೊಂಡ ಕೊರೊನಾ ವೈರಸ್, ಇಡೀ ಜಗತ್ತನ್ನೇ ತತ್ತರಿಸುವಂತೆ ಮಾಡಿರುವ ಬೆನ್ನಲ್ಲೇ ಈಗ ಚೀನಾದಿಂದ ಮತ್ತೊಂದು ರೀತಿಯ ವೈರಸ್ ಭಾರತಕ್ಕೆ ಲಗ್ಗೆ ಇಟ್ಟಿರುವುದು ದೃಢಪಟ್ಟಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ಕ್ಯಾಟ್ ಕ್ಯೂ ವೈರಸ್ (CQV - Cat Que Virus) ಎಂದು ಹೆಸರಿಸಲಾಗಿರುವ ಈ ವೈರಸ್ ಚೀನಾ ಮತ್ತು ವಿಯೆಟ್ನಾಂ ದೇಶಗಳ ಹಲವರಲ್ಲಿ ಸೋಂಕಿಗೆ ಕಾರಣವಾಗಿದೆ. ಇದೇ ವೇಳೆ, ಭಾರತದಲ್ಲೂ ಈ ವೈರಸ್ ಕಾಣಿಸಿಕೊಂಡಿದ್ದು ಪತ್ತೆಯಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ನಡೆಸಿದ ಅಧ್ಯಯನದಲ್ಲಿ ಎರಡು ಸಿಕ್ಯೂವಿ ಸೋಂಕು ಪ್ರಕರಣ ಭಾರತದಲ್ಲಿ ಪತ್ತೆಯಾಗಿದೆ. ಆ ಎರಡೂ ಪ್ರಕರಣ ಕರ್ನಾಟಕದಲ್ಲೇ ಇರುವುದು ಆತಂಕ ಮೂಡಿಸಿದೆ. ಚೀನಾ ಮತ್ತು ವಿಯೆಟ್ನಾನಲ್ಲಿ ಸೊಳ್ಳೆ ಮತ್ತು ಹಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ. ಭಾರತದಲ್ಲೂ ಕೆಲವು ಜಾತಿಯ ಸೊಳ್ಳೆಗಳು ಈ ವೈರಸ್ ಸೋಂಕಿಗೆ ಸುಲಭವಾಗಿ ತುತ್ತಾಗುತ್ತವೆಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಹಾಗೆಯೇ, ಹಂದಿಗಳಿಗೂ ಸೋಂಕು ಬೇಗ ಹರಡಲಿದೆ. ಹಂದಿ ಮತ್ತು ಸೊಳ್ಳೆಗಳ ಮೂಲಕ ಮನುಷ್ಯನಿಗೆ ರೋಗ ಹರಡುತ್ತದೆ ಎನ್ನುತ್ತಾರೆ ಐಸಿಎಂಆರ್ ವಿಜ್ಞಾನಿಗಳು.

ಕ್ಯಾಟ್ ಕ್ಯೂ ವೈರಸ್ ಸೋಂಕು ತಗುಲಿದವರಿಗೆ ಉಸಿರಾಟದ ತೊಂದರೆ, ಎದೆ ನೋವು, ನುಂಗಲು ತೊಂದರೆ, ಮಿದುಳು ಪೊರೆಯಲ್ಲಿ ಊತ, ಮಕ್ಕಳ ಮಿದುಳಿನಲ್ಲಿ ಊತ ಮೊದಲಾದ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಚೀನಾದಲ್ಲಿ ಹೊಸ ಸೋಂಕು ಬೆಳಕಿಗೆ ಬಂದ ನಂತರ ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಯ ವಿಜ್ಞಾನಿಗಳು ದೇಶಾದ್ಯಂತ 883 ವ್ಯಕ್ತಿಗಳ ರಕ್ತದ ಮಾದರಿಗಳನ್ನ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದ್ದಾರೆ. ಯಾರಲ್ಲೂ ವೈರಸ್ ಸಿಕ್ಕಿಲ್ಲವಾದರೂ ಇಬ್ಬರಲ್ಲಿ ಈ ವೈರಾಣುವಿನ ಪ್ರತಿಕಾಯಗಳ(Anti-bodies) ಉಪಸ್ಥಿತಿ ಕಂಡುಬಂದಿದೆ. ಅಂದರೆ ಈ ಇಬ್ಬರಲ್ಲಿ ಸೋಂಕು ಬಂದು ಹೋಗಿದ್ದರ ಕುರುಹು ಇದು ಎನ್ನಲಾಗಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm