ಬ್ರೇಕಿಂಗ್ ನ್ಯೂಸ್
29-09-20 05:20 pm Bangalore Correspondent ದೇಶ - ವಿದೇಶ
ಬೆಂಗಳೂರು, ಸೆಪ್ಟಂಬರ್ 29: ಚೀನಾದಲ್ಲಿ ಹುಟ್ಟಿಕೊಂಡ ಕೊರೊನಾ ವೈರಸ್, ಇಡೀ ಜಗತ್ತನ್ನೇ ತತ್ತರಿಸುವಂತೆ ಮಾಡಿರುವ ಬೆನ್ನಲ್ಲೇ ಈಗ ಚೀನಾದಿಂದ ಮತ್ತೊಂದು ರೀತಿಯ ವೈರಸ್ ಭಾರತಕ್ಕೆ ಲಗ್ಗೆ ಇಟ್ಟಿರುವುದು ದೃಢಪಟ್ಟಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ಕ್ಯಾಟ್ ಕ್ಯೂ ವೈರಸ್ (CQV - Cat Que Virus) ಎಂದು ಹೆಸರಿಸಲಾಗಿರುವ ಈ ವೈರಸ್ ಚೀನಾ ಮತ್ತು ವಿಯೆಟ್ನಾಂ ದೇಶಗಳ ಹಲವರಲ್ಲಿ ಸೋಂಕಿಗೆ ಕಾರಣವಾಗಿದೆ. ಇದೇ ವೇಳೆ, ಭಾರತದಲ್ಲೂ ಈ ವೈರಸ್ ಕಾಣಿಸಿಕೊಂಡಿದ್ದು ಪತ್ತೆಯಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ನಡೆಸಿದ ಅಧ್ಯಯನದಲ್ಲಿ ಎರಡು ಸಿಕ್ಯೂವಿ ಸೋಂಕು ಪ್ರಕರಣ ಭಾರತದಲ್ಲಿ ಪತ್ತೆಯಾಗಿದೆ. ಆ ಎರಡೂ ಪ್ರಕರಣ ಕರ್ನಾಟಕದಲ್ಲೇ ಇರುವುದು ಆತಂಕ ಮೂಡಿಸಿದೆ. ಚೀನಾ ಮತ್ತು ವಿಯೆಟ್ನಾನಲ್ಲಿ ಸೊಳ್ಳೆ ಮತ್ತು ಹಂದಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ. ಭಾರತದಲ್ಲೂ ಕೆಲವು ಜಾತಿಯ ಸೊಳ್ಳೆಗಳು ಈ ವೈರಸ್ ಸೋಂಕಿಗೆ ಸುಲಭವಾಗಿ ತುತ್ತಾಗುತ್ತವೆಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಹಾಗೆಯೇ, ಹಂದಿಗಳಿಗೂ ಸೋಂಕು ಬೇಗ ಹರಡಲಿದೆ. ಹಂದಿ ಮತ್ತು ಸೊಳ್ಳೆಗಳ ಮೂಲಕ ಮನುಷ್ಯನಿಗೆ ರೋಗ ಹರಡುತ್ತದೆ ಎನ್ನುತ್ತಾರೆ ಐಸಿಎಂಆರ್ ವಿಜ್ಞಾನಿಗಳು.

ಕ್ಯಾಟ್ ಕ್ಯೂ ವೈರಸ್ ಸೋಂಕು ತಗುಲಿದವರಿಗೆ ಉಸಿರಾಟದ ತೊಂದರೆ, ಎದೆ ನೋವು, ನುಂಗಲು ತೊಂದರೆ, ಮಿದುಳು ಪೊರೆಯಲ್ಲಿ ಊತ, ಮಕ್ಕಳ ಮಿದುಳಿನಲ್ಲಿ ಊತ ಮೊದಲಾದ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಚೀನಾದಲ್ಲಿ ಹೊಸ ಸೋಂಕು ಬೆಳಕಿಗೆ ಬಂದ ನಂತರ ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಯ ವಿಜ್ಞಾನಿಗಳು ದೇಶಾದ್ಯಂತ 883 ವ್ಯಕ್ತಿಗಳ ರಕ್ತದ ಮಾದರಿಗಳನ್ನ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದ್ದಾರೆ. ಯಾರಲ್ಲೂ ವೈರಸ್ ಸಿಕ್ಕಿಲ್ಲವಾದರೂ ಇಬ್ಬರಲ್ಲಿ ಈ ವೈರಾಣುವಿನ ಪ್ರತಿಕಾಯಗಳ(Anti-bodies) ಉಪಸ್ಥಿತಿ ಕಂಡುಬಂದಿದೆ. ಅಂದರೆ ಈ ಇಬ್ಬರಲ್ಲಿ ಸೋಂಕು ಬಂದು ಹೋಗಿದ್ದರ ಕುರುಹು ಇದು ಎನ್ನಲಾಗಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm