ಬ್ರೇಕಿಂಗ್ ನ್ಯೂಸ್
15-06-22 01:13 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 15: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಸತತ ಮೂರನೇ ದಿನವೂ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಸೋದರಿ ಪ್ರಿಯಾಂಕ ಗಾಂಧಿ ಜೊತೆಗೆ ಇಡಿ ಕಚೇರಿಗೆ ಆಗಮಿಸಿದ ರಾಹುಲ್, ವಿಚಾರಣಾ ಕೊಠಡಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ವಿರೋಧದ ನಡುವೆಯೇ ಇಡಿ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.
ಮಂಗಳವಾರ ರಾಹುಲ್ ಗಾಂಧಿಯನ್ನು ಸತತ ಹತ್ತು ಗಂಟೆಗಳ ಕಾಲ ಕುಳ್ಳಿರಿಸಿ, ಇಡಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ವಿವಿಧ ಪ್ರಶ್ನೆಗಳನ್ನು ಮುಂದಿಟ್ಟು ಹೇಳಿಕೆ ದಾಖಲು ಮಾಡಿದ್ದಾರೆ. ಇದೇ ವೇಳೆ, ದೆಹಲಿಯ ಕಾಂಗ್ರೆಸ್ ಕಚೇರಿ ಸೇರಿದಂತೆ ಹಲವು ಕಡೆ ದೇಶದ ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರು ಆಗಮಿಸಿ ಪ್ರತಿಭಟನೆಗೆ ಮುಂದಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಐಸಿಸಿ ಕಚೇರಿ ಆವರಣದಲ್ಲಿ ಸೆಕ್ಷನ್ 144 ಹೇರಲಾಗಿದ್ದು ಕಾರ್ಯಕರ್ತರು ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ನೀಡಿಲ್ಲ. ಹೀಗಾಗಿ ಅಲ್ಲಿಗೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸಂಸದರನ್ನು ಪೊಲೀಸರು ಅರ್ಧ ದಾರಿಯಲ್ಲೇ ತಡೆದು ಹಿಂದಕ್ಕೆ ಕಳಿಸುತ್ತಿದ್ದಾರೆ. ಇದೇ ವೇಳೆ, ಅಕ್ಬರ್ ರೋಡ್ ನಿಂದ ಇಡಿ ಕಚೇರಿಗೆ ಪ್ರತಿಭಟನಾ ಧರಣಿ ನಡೆಸಲು ತಯಾರಿ ನಡೆಸಿದ್ದ ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಿಳಾ ಪೊಲೀಸರು ಸುತ್ತವರಿದು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ತುಂಬಿಸಿ ಒಯ್ದಿದ್ದಾರೆ.
ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಕರೆದು ಕಿರುಕುಳ ನೀಡುತ್ತಿರುವುದಕ್ಕೆ ಮುಂದೆ ಬೆಲೆ ತೆರಬೇಕಾಗಬಹುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಾವು ನಮ್ಮ ಪಕ್ಷದ ಕಚೇರಿಗೆ ತೆರಳುವುದಕ್ಕೂ ಪೊಲೀಸರು ಅನುಮತಿ ನೀಡುತ್ತಿಲ್ಲ. ನಾವು ಇಬ್ಬರು ಮುಖ್ಯಮಂತ್ರಿಗಳಿದ್ದೇವೆ, ಪಕ್ಷದ ಕಚೇರಿಗೆ ತೆರಳಲು ಬಿಡಿ ಎಂದರೂ ಪೊಲೀಸರು ಕೇಳುತ್ತಿಲ್ಲ ಎಂದು ಛತ್ತೀಸ್ ಗಢ ಸಿಎಂ ಭೂಪೇಶ್ ಬಾಘೇಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಹುಲ್ ವಿಚಾರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಹೈಡ್ರಾಮಾ ನಡೆಸಿದ್ದಾರೆ.
After over 20 hours of grilling, Rahul Gandhi is back at the Enforcement Directorate (ED) office for the 3rd straight day of questioning.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm