ಬ್ರೇಕಿಂಗ್ ನ್ಯೂಸ್
15-06-22 06:07 pm HK News Desk ದೇಶ - ವಿದೇಶ
ಮುಂಬೈ, ಜೂನ್ 15: ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾಂಗ್ರೆಸ್ ನಾಯಕನೊಬ್ಬ ಪ್ರಧಾನಿ ಮೋದಿಯನ್ನು, ಬೀದಿ ನಾಯಿ ರೀತಿ ಸಾಯಲಿದ್ದಾರೆ ಎಂದು ಮೂದಲಿಸಿದ ವಿಚಾರದಲ್ಲಿ ಬಿಜೆಪಿ ನಾಯಕರು ಪೊಲೀಸ್ ದೂರು ನೀಡಿದ್ದಾರೆ. ಅಲ್ಲದೆ, 48 ಗಂಟೆಯೊಳಗೆ ಆತನನ್ನು ಬಂಧಿಸಬೇಕು ಎಂದು ಗಡುವು ನೀಡಿದ್ದಾರೆ.
ನಾಗಪುರ ಇಡಿ ಕಚೇರಿ ಮುಂದೆ ಜೂನ್ 13ರಂದು ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಶೇಖ್ ಹುಸೇನ್ ಎಂಬ ಕಾಂಗ್ರೆಸ್ ನಾಯಕ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಜೈಸೆ ಕುತ್ತೇ ಕಿ ಮೌತ್ ಹೋತೀ ಹೈ, ಜೈಸೇ ನರೇಂದ್ರ ಮೋದಿ ಕೀ ಮೌತ್ ಹೋಗೀ (ಯಾವ ರೀತಿ ಬೀದಿ ನಾಯಿಗಳು ಸಾಯುತ್ತವೋ, ಅದೇ ರೀತಿ ನರೇಂದ್ರ ಮೋದಿಯೂ ಸಾಯಲಿದ್ದಾರೆ) ಎಂದು ಶೇಖ್ ಹುಸೇನ್ ಬಹಿರಂಗ ವೇದಿಕೆಯಲ್ಲಿ ಹೇಳಿಕೆ ನೀಡಿದ್ದರು.
ಮಹಾರಾಷ್ಟ್ರದ ವಿದರ್ಭ ಭಾಗದಲ್ಲಿ ಹಲವಾರು ಕಡೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ, ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಶೇಖ್ ಹುಸೇನ್ ನೀಡಿರುವ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿರುವ ಬಿಜೆಪಿ ನಾಯಕರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮಹಾ ವಿಘಾಡಿ ಸರಕಾರ ಪೊಲೀಸರ ಮೇಲೆ ಎಫ್ಐಆರ್ ಮಾಡದಂತೆ ಒತ್ತಡ ಹೇರಿದೆ. ಆದರೆ ನಾವು ಎರಡು ದಿನಗಳ ಗಡುವು ನೀಡುತ್ತೇವೆ. ಎಫ್ಐಆರ್ ದಾಖಲಿಸಿ, ಪೊಲೀಸರು ಬಂಧಿಸದಿದ್ದರೆ ಕಾನೂನು ಕದ ತಟ್ಟಲಿದ್ದೇವೆ. ಜೊತೆಗೆ ಪ್ರತಿಭಟನೆಯನ್ನೂ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ನಾಯಕರು ಮುಂದಿನ ಲೋಕಸಭೆ ಚುನಾವಣೆ ವರೆಗೂ ನಾವು ನಿರಂತರ ಮೋದಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
On Wednesday, the Bharatiya Janata Party (BJP) registered a complaint against Congress leader Sheikh Hussain at the Gittikhadan Police Station for using derogatory comments against Prime Minister Narendra Modi in Nagpur. The BJP leaders have sought strict action against Hussain and also demanded his arrest within 48 hours, failing which they will launch an intense agitation.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm