ಬ್ರೇಕಿಂಗ್ ನ್ಯೂಸ್
15-06-22 06:07 pm HK News Desk ದೇಶ - ವಿದೇಶ
ಮುಂಬೈ, ಜೂನ್ 15: ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾಂಗ್ರೆಸ್ ನಾಯಕನೊಬ್ಬ ಪ್ರಧಾನಿ ಮೋದಿಯನ್ನು, ಬೀದಿ ನಾಯಿ ರೀತಿ ಸಾಯಲಿದ್ದಾರೆ ಎಂದು ಮೂದಲಿಸಿದ ವಿಚಾರದಲ್ಲಿ ಬಿಜೆಪಿ ನಾಯಕರು ಪೊಲೀಸ್ ದೂರು ನೀಡಿದ್ದಾರೆ. ಅಲ್ಲದೆ, 48 ಗಂಟೆಯೊಳಗೆ ಆತನನ್ನು ಬಂಧಿಸಬೇಕು ಎಂದು ಗಡುವು ನೀಡಿದ್ದಾರೆ.
ನಾಗಪುರ ಇಡಿ ಕಚೇರಿ ಮುಂದೆ ಜೂನ್ 13ರಂದು ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಶೇಖ್ ಹುಸೇನ್ ಎಂಬ ಕಾಂಗ್ರೆಸ್ ನಾಯಕ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಜೈಸೆ ಕುತ್ತೇ ಕಿ ಮೌತ್ ಹೋತೀ ಹೈ, ಜೈಸೇ ನರೇಂದ್ರ ಮೋದಿ ಕೀ ಮೌತ್ ಹೋಗೀ (ಯಾವ ರೀತಿ ಬೀದಿ ನಾಯಿಗಳು ಸಾಯುತ್ತವೋ, ಅದೇ ರೀತಿ ನರೇಂದ್ರ ಮೋದಿಯೂ ಸಾಯಲಿದ್ದಾರೆ) ಎಂದು ಶೇಖ್ ಹುಸೇನ್ ಬಹಿರಂಗ ವೇದಿಕೆಯಲ್ಲಿ ಹೇಳಿಕೆ ನೀಡಿದ್ದರು.

ಮಹಾರಾಷ್ಟ್ರದ ವಿದರ್ಭ ಭಾಗದಲ್ಲಿ ಹಲವಾರು ಕಡೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ, ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಶೇಖ್ ಹುಸೇನ್ ನೀಡಿರುವ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿರುವ ಬಿಜೆಪಿ ನಾಯಕರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮಹಾ ವಿಘಾಡಿ ಸರಕಾರ ಪೊಲೀಸರ ಮೇಲೆ ಎಫ್ಐಆರ್ ಮಾಡದಂತೆ ಒತ್ತಡ ಹೇರಿದೆ. ಆದರೆ ನಾವು ಎರಡು ದಿನಗಳ ಗಡುವು ನೀಡುತ್ತೇವೆ. ಎಫ್ಐಆರ್ ದಾಖಲಿಸಿ, ಪೊಲೀಸರು ಬಂಧಿಸದಿದ್ದರೆ ಕಾನೂನು ಕದ ತಟ್ಟಲಿದ್ದೇವೆ. ಜೊತೆಗೆ ಪ್ರತಿಭಟನೆಯನ್ನೂ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ನಾಯಕರು ಮುಂದಿನ ಲೋಕಸಭೆ ಚುನಾವಣೆ ವರೆಗೂ ನಾವು ನಿರಂತರ ಮೋದಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
On Wednesday, the Bharatiya Janata Party (BJP) registered a complaint against Congress leader Sheikh Hussain at the Gittikhadan Police Station for using derogatory comments against Prime Minister Narendra Modi in Nagpur. The BJP leaders have sought strict action against Hussain and also demanded his arrest within 48 hours, failing which they will launch an intense agitation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm