ಬ್ರೇಕಿಂಗ್ ನ್ಯೂಸ್
15-06-22 06:07 pm HK News Desk ದೇಶ - ವಿದೇಶ
ಮುಂಬೈ, ಜೂನ್ 15: ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾಂಗ್ರೆಸ್ ನಾಯಕನೊಬ್ಬ ಪ್ರಧಾನಿ ಮೋದಿಯನ್ನು, ಬೀದಿ ನಾಯಿ ರೀತಿ ಸಾಯಲಿದ್ದಾರೆ ಎಂದು ಮೂದಲಿಸಿದ ವಿಚಾರದಲ್ಲಿ ಬಿಜೆಪಿ ನಾಯಕರು ಪೊಲೀಸ್ ದೂರು ನೀಡಿದ್ದಾರೆ. ಅಲ್ಲದೆ, 48 ಗಂಟೆಯೊಳಗೆ ಆತನನ್ನು ಬಂಧಿಸಬೇಕು ಎಂದು ಗಡುವು ನೀಡಿದ್ದಾರೆ.
ನಾಗಪುರ ಇಡಿ ಕಚೇರಿ ಮುಂದೆ ಜೂನ್ 13ರಂದು ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಶೇಖ್ ಹುಸೇನ್ ಎಂಬ ಕಾಂಗ್ರೆಸ್ ನಾಯಕ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಜೈಸೆ ಕುತ್ತೇ ಕಿ ಮೌತ್ ಹೋತೀ ಹೈ, ಜೈಸೇ ನರೇಂದ್ರ ಮೋದಿ ಕೀ ಮೌತ್ ಹೋಗೀ (ಯಾವ ರೀತಿ ಬೀದಿ ನಾಯಿಗಳು ಸಾಯುತ್ತವೋ, ಅದೇ ರೀತಿ ನರೇಂದ್ರ ಮೋದಿಯೂ ಸಾಯಲಿದ್ದಾರೆ) ಎಂದು ಶೇಖ್ ಹುಸೇನ್ ಬಹಿರಂಗ ವೇದಿಕೆಯಲ್ಲಿ ಹೇಳಿಕೆ ನೀಡಿದ್ದರು.

ಮಹಾರಾಷ್ಟ್ರದ ವಿದರ್ಭ ಭಾಗದಲ್ಲಿ ಹಲವಾರು ಕಡೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ, ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಶೇಖ್ ಹುಸೇನ್ ನೀಡಿರುವ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿರುವ ಬಿಜೆಪಿ ನಾಯಕರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮಹಾ ವಿಘಾಡಿ ಸರಕಾರ ಪೊಲೀಸರ ಮೇಲೆ ಎಫ್ಐಆರ್ ಮಾಡದಂತೆ ಒತ್ತಡ ಹೇರಿದೆ. ಆದರೆ ನಾವು ಎರಡು ದಿನಗಳ ಗಡುವು ನೀಡುತ್ತೇವೆ. ಎಫ್ಐಆರ್ ದಾಖಲಿಸಿ, ಪೊಲೀಸರು ಬಂಧಿಸದಿದ್ದರೆ ಕಾನೂನು ಕದ ತಟ್ಟಲಿದ್ದೇವೆ. ಜೊತೆಗೆ ಪ್ರತಿಭಟನೆಯನ್ನೂ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ನಾಯಕರು ಮುಂದಿನ ಲೋಕಸಭೆ ಚುನಾವಣೆ ವರೆಗೂ ನಾವು ನಿರಂತರ ಮೋದಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
On Wednesday, the Bharatiya Janata Party (BJP) registered a complaint against Congress leader Sheikh Hussain at the Gittikhadan Police Station for using derogatory comments against Prime Minister Narendra Modi in Nagpur. The BJP leaders have sought strict action against Hussain and also demanded his arrest within 48 hours, failing which they will launch an intense agitation.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm