ಬ್ರೇಕಿಂಗ್ ನ್ಯೂಸ್
17-06-22 06:07 pm HK News Desk ದೇಶ - ವಿದೇಶ
ಕೊಲೊಂಬೊ, ಜೂ 17: ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇದೀಗ ಪೆಟ್ರೋಲ್, ಡೀಸೆಲ್ ಅಭಾವದಿಂದಾಗಿ, ಸಾರಿಗೆ ವ್ಯವಸ್ಥೆ ಸ್ಥಗಿತಗೊಳ್ಳುವಂತಾಗಿದೆ. ಅಲ್ಲದೇ ಶ್ರೀಲಂಕಾಕ್ಕೆ ಇಂಧನ ಸರಬರಾಜಾಗುವ ಲಕ್ಷಣ ಕಡಿಮೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಪೆಟ್ರೋಲ್, ಡೀಸೆಲ್ ಅಭಾವದ ಹಿನ್ನೆಲೆಯಲ್ಲಿ ಶ್ರೀಲಂಕಾ ಸರ್ಕಾರ ಶುಕ್ರವಾರ ಸರ್ಕಾರಿ ಕಚೇರಿ ಮತ್ತು ಶಾಲೆಗಳಿಗೆ ರಜೆ ಘೋಷಿಸಿದೆ. ಇದರಿಂದಾಗಿ ರಾಜಧಾನಿ ಕೊಲಂಬೊ ಮತ್ತು ಸುತ್ತಮುತ್ತಲಿನ ಪ್ರದೇಶಗಳು ನಿರ್ಜನವಾಗಿದೆ.
ಮತ್ತೊಂದೆಡೆ ಇಂಧನಕ್ಕಾಗಿ ಕಿಲೋ ಮೀಟರ್ ಗಳಷ್ಟು ದೂರ ವಾಹನಗಳು ಮತ್ತು ಚಾಲಕರು ಸರದಿ ಸಾಲಿನಲ್ಲಿ ನಿಂತು ಕಾಯುತ್ತಿರುವ ದೃಶ್ಯ ಕಂಡು ಬಂದಿರುವುದಾಗಿ ವರದಿ ವಿವರಿಸಿದೆ.
"ಸರ್ಕಾರಿ ಸ್ವಾಮ್ಯದ ಸಿಲೋನ್ ಪೆಟ್ರೋಲಿಯಂ ಕಾರ್ಪೋರೇಶನ್ ಇಂಧನ ದಾಸ್ತಾನು ಮಾಡಿಕೊಳ್ಳುವ ಬಗ್ಗೆ ಟೆಂಡರ್ ಅನ್ನು ಪಡೆದಿಲ್ಲ. ಇದಕ್ಕೆ ಕಾರಣ ಹಿಂದಿನ ಬಾಕಿ ಪಾವತಿ ಮಾಡದಿರುವುದಕ್ಕೆ ಇಂಧನ ಸರಬರಾಜು ತಡೆ ಹಿಡಿದಿರುವುದಾಗಿ ಶ್ರೀಲಂಕಾದ ವಿದ್ಯುತ್ ಮತ್ತು ಇಂಧನ ಸಚಿವ ಕಾಂಚನ ವಿಜೆಶೇಖರ ತಿಳಿಸಿದ್ದಾರೆ.
ಇಂಧನ ಆಮದು ಮಾಡಿಕೊಳ್ಳಲು ಭಾರತದ ಸರ್ಕಾರದ 500 ಮಿಲಿಯನ್ ಡಾಲರ್ ಸಾಲದ ನಿರೀಕ್ಷೆಯಲ್ಲಿರುವುದಾಗಿ ಶ್ರೀಲಂಕಾ ಸರ್ಕಾರ ಹೇಳಿದೆ. ಶ್ರೀಲಂಕಾದ ಆರ್ಥಿಕ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದ್ದು, ಇದು ದ್ವೀಪರಾಷ್ಟ್ರದ ಇತಿಹಾಸದ ಕರಾಳ ದಿನಗಳಾಗಿದೆ ಎಂದು ವರದಿ ತಿಳಿಸಿದೆ.
ಪ್ರಧಾನಿ ರನಿಲ್ ವಿಕ್ರಮಸಿಂಘೆ ಪ್ರಕಾರ, ಅಂತಾರಾಷ್ಟ್ರೀಯ ಹಣಕಾಸು ನಿಧಿ ಮತ್ತು ಭಾರತ, ಚೀನಾ ಸೇರಿದಂತೆ ಅಂದಾಜು 6 ಬಿಲಿಯನ್ ಡಾಲರ್ ಶತಕೋಟಿ ಮೊತ್ತದ ನೆರವಿನ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು, ರಾಜಕೀಯ ಅಸ್ಥಿರತೆಯಿಂದ ಕಂಗೆಟ್ಟಿರುವ ಜನರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಜನರು ಪರದಾಡುವಂತಾಗಿದೆ ಎಂದು ಬ್ಲೂಮ್ ಬರ್ಗ್ ಎಕಾನಾಮಿಕ್ಸ್ ತಿಳಿಸಿದೆ.
With economic activity coming to near halt in Sri Lanka, the government on Friday declared a holiday to stop vehicular movement in a bid to save fuel, news agency Bloomberg said in a report.The decision from the Ranil Wickremesinghe-led government came after government fuel deposits ran out of stock with chances of fresh supplies unlikely.Following the announcement, streets around the capital city of Colombo were deserted. Queues of thousands of vehicles stretching for dozens of miles were seen outside petrol stations as they waited for them to be refilled.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm