ಬ್ರೇಕಿಂಗ್ ನ್ಯೂಸ್
22-06-22 09:41 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 22: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ 17 ಬ್ಯಾಂಕ್ಗಳ ಒಕ್ಕೂಟಕ್ಕೆ 34,615 ಕೋಟಿ ರುಪಾಯಿ ವಂಚಿಸಿದ ಆರೋಪದ ಮೇಲೆ ದಿವಾನ್ ಹೌಸಿಂಗ್ ಅಂಡ್ ಫೈನಾನ್ಸ್ ಲಿಮಿಟೆಡ್ನ (ಡಿಎಚ್ಎಫ್ಎಲ್) ಕಪಿಲ್ ಮತ್ತು ಧೀರಜ್ ವಾಧವನ್ ಅವರ ವಿರುದ್ಧ ಪ್ರಕರಣ ದಾಖಲಾದ ನಂತರ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಬುಧವಾರ ಮುಂಬೈನ 12 ಸ್ಥಳಗಳಲ್ಲಿ ದಾಳಿ ನಡೆಸಿದ್ದು ಇದು ದೇಶದ ಅತಿ ದೊಡ್ಡ ಬ್ಯಾಂಕ್ ವಂಚನೆ ಕೇಸ್ ಎಂದು ಸಿಬಿಐ ತಿಳಿಸಿದೆ.
ಸೋಮವಾರ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿದ ನಂತರ ಮಾಲಕ ವಾಧವಾನ್ಗಳ ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಎಫ್ಐಆರ್ನಲ್ಲಿ, ಡಿಎಚ್ಎಫ್ಎಲ್ನ ಪ್ರವರ್ತಕರು ಸಾರ್ವಜನಿಕ ಅಧಿಕಾರಿಗಳು ಸೇರಿದಂತೆ ಇತರರೊಂದಿಗೆ ಪಿತೂರಿ ನಡೆಸಿದ್ದಾರೆ ಮತ್ತು 2010 ಮತ್ತು 2018 ರ ನಡುವೆ 42,871 ಕೋಟಿ ರುಪಾಯಿ ಸಾಲ ಮಂಜೂರು ಮಾಡಲು ಬ್ಯಾಂಕ್ಗನ್ನು ಪ್ರೇರೇಪಿಸಿದ್ದಾರೆ ಎಂದು ಹೇಳಲಾಗಿದೆ.
ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್ (DHFL) ಸಂಸ್ಥೆಯ ಅಂದಿನ ಸಿಎಂಡಿ ಕಪಿಲ್ ವಾಧವಾನ್, ನಿರ್ದೇಶಕರಾದ ಧೀರಜ್ ವಾಧವನ್, ಸೇರಿದಂತೆ 6ಕ್ಕೂ ಅಧಿಕ ರಿಯಲ್ ಎಸ್ಟೇಟ್ ಸಂಸ್ಥೆಗಳ ಮೇಲೆ ಕ್ರಿಮಿನಲ್ ಸಂಚು ಆರೋಪ ಹೊರೆಸಲಾಗಿದ್ದು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಸಮೂಹ ಸಂಸ್ಥೆಗೆ ಮಾಡಿರುವ ವಂಚನೆ ಮೊತ್ತ 34,165 ಕೋಟಿ ರುಪಾಯಿ ಮೀರುತ್ತದೆ ಎಂದು ಸಿಬಿಐ ಮೂಲಗಳು ತಿಳಿಸಿದೆ.

ಹಲವು ಬ್ಯಾಂಕ್ಗಳಿಗೆ ವಂಚನೆ ;
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಅತಿ ಹೆಚ್ಚು ಅಂದರೆ 9898 ಕೋಟಿ ರುಪಾಯಿ ವಂಚನೆಯಾಗಿದೆ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ, ನಂತರದ ಸ್ಥಾನದಲ್ಲಿ ಬ್ಯಾಂಕ್ ಆಫ್ ಇಂಡಿಯಾ (4,044 ಕೋಟಿ ರು), ಕೆನರಾ ಬ್ಯಾಂಕ್ (4,022 ಕೋಟಿ ರು), ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (3,813 ಕೋಟಿ ರು), ಪಂಜಾಬ್ ನ್ಯಾಷನಲ್ ಬ್ಯಾಂಕ್ (3,802 ಕೋಟಿ ರು) ಮತ್ತು ಬ್ಯಾಂಕ್ ಆಫ್ ಬರೋಡಾ (2,036 ಕೋಟಿ ರು) ವಂಚನೆಯಾಗಿದೆ ಎಂದು ಉಲ್ಲೇಖಿಸಲಾಗಿದೆ.
ಬ್ಯಾಂಕ್ ಆಫ್ ಮಹಾರಾಷ್ಟ್ರ, ಫೆಡರಲ್ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಐಡಿಬಿಐ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಸೌತ್ ಇಂಡಿಯನ್ ಬ್ಯಾಂಕ್ ಮತ್ತು ಯುಸಿಒ ಸೇರಿದಂತೆ ಇತರೆ ಕನ್ಸೋರ್ಟಿಯಂ ಬ್ಯಾಂಕ್ಗಳು 71 ಕೋಟಿಯಿಂದ 1,499 ಕೋಟಿ ರುಪಾಯಿ ವಂಚನೆಗೊಳಗಾಗಿವೆ.
The CBI has booked Dewan Housing Finance Ltd, its former CMD Kapil Wadhawan, director Dheeraj Wadhawan and others for bank fraud of Rs 34,615 crore, making it the biggest such case probed by the agency, officials said Wednesday.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm