ಬ್ರೇಕಿಂಗ್ ನ್ಯೂಸ್
25-06-22 04:39 pm HK News Desk ದೇಶ - ವಿದೇಶ
ವಯನಾಡ್, ಜೂನ್ 25: ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್ ಸಂಸತ್ ಕ್ಷೇತ್ರದ ಕಚೇರಿಗೆ ನುಗ್ಗಿ ಎಸ್ಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕಚೇರಿಯ ಸಿಬಂದಿಗೆ ಹಲ್ಲೆಗೈದು ಪೀಠೋಪಕರಣಗಳನ್ನು ಪುಡಿ ಮಾಡಿದ್ದಾರೆ. ಘಟನೆ ಸಂಬಂಧಿಸಿ ಪೊಲೀಸರು ಹತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಉದ್ಯಾನವನ, ಸಂರಕ್ಷಿತ ಪ್ರದೇಶಗಳ ಸುತ್ತ ಇರುವ ಒಂದು ಕಿಮೀ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ವಲಯ ಎಂದು ಸುಪ್ರೀಂ ಕೋರ್ಟ್ ಘೋಷಣೆ ಮಾಡಿದ್ದನ್ನು ವಿರೋಧಿಸಿ ರಾಹುಲ್ ಗಾಂಧಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ವಯನಾಡಿನಲ್ಲಿ ರಾಷ್ಟ್ರೀಯ ಸಂರಕ್ಷಿತ ಪ್ರದೇಶದ ಸುತ್ತಮುತ್ತ ಹಲವಾರು ಮನೆಗಳು, ಜನವಸತಿ ಪ್ರದೇಶಗಳಿದ್ದು, ಈ ತೀರ್ಪಿನಿಂದ ತಮಗೆ ತೊಂದರೆಯಾಗುತ್ತೆ ಎನ್ನುವ ಭಯದಿಂದ ಪ್ರತಿಭಟನೆ ನಡೆಸಿದ್ದಾರೆ.






ವಯನಾಡ್ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಈ ಬಗ್ಗೆ ಕ್ಷೇತ್ರವನ್ನು ಪ್ರತಿನಿಧಿಸುವ ರಾಹುಲ್ ಗಾಂಧಿ ಧ್ವನಿ ಎತ್ತಬೇಕು ಎಂದು ಕಮ್ಯುನಿಸ್ಟ್ ಪರ ಸಂಘಟನೆಗಳು ಒತ್ತಾಯಿಸುತ್ತಿವೆ. ರಾಹುಲ್ ಗಾಂಧಿ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಈ ರೀತಿಯ ನಿರ್ಬಂಧವನ್ನು ತೆರವುಗೊಳಿಸಲು ಪ್ರಯತ್ನಿಸಬೇಕು ಎಂದು ಒತ್ತಾಯಿಸಿದ್ದಾರೆ. ಆದರೆ ರಾಹುಲ್ ಗಾಂಧಿ ನಮ್ಮ ನೋವಿಗೆ ಸ್ಪಂದಿಸಿಲ್ಲ ಎಂದು ಕಮ್ಯುನಿಸ್ಟ್ ವಿದ್ಯಾರ್ಥಿ ಸಂಘಟನೆ ಎಸ್ಎಫ್ಐ ಕಾರ್ಯಕರ್ತರು ಶುಕ್ರವಾರ ರಾಹುಲ್ ಗಾಂಧಿಯ ಸಂಸತ್ ಸದಸ್ಯರ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಕಚೇರಿಯಲ್ಲಿದ್ದ ಆಗಸ್ಟಿನ್ ಎಂಬ ಸಿಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಪರಿಸರ ಸೂಕ್ಷ್ಮ ಪ್ರದೇಶ ಎಂದು 2011ರಲ್ಲಿ ಆದೇಶ ಆಗಿದ್ದು, ಆನಂತರ ಇಷ್ಟೂ ವರ್ಷಗಳಲ್ಲಿ ಸ್ಥಳೀಯರು ಹಲವು ಸಂದರ್ಭಗಳಲ್ಲಿ ಪ್ರತಿಭಟನೆ ನಡೆಸುತ್ತ ಬಂದಿದ್ದರು. ಹೀಗೆ ಗುರುತಿಸಲ್ಪಟ್ಟ ಪ್ರದೇಶ ಜನನಿಬಿಡವಾಗಿದ್ದು ಜನರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ನಡೆಸಲು ಸಾಧ್ಯವಾಗದೇ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆ ಭಾಗದಲ್ಲಿ ಗಣಿಗಾರಿಕೆ, ಅಭಿವೃದ್ಧಿ ಚಟುವಟಿಕೆ ನಡೆಸುವುದಕ್ಕೆ ತೊಂದರೆಯಾಗಿದ್ದು, ಇದೇ ರೀತಿಯ ಸಮಸ್ಯೆ ಅನುಭವಿಸುತ್ತಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಇಡುಕ್ಕಿ, ವಯನಾಡ್, ಪತ್ತನಂತಿಟ್ಟ, ಕೊಟ್ಟಾಯಂ ಜಿಲ್ಲೆಗಳ ಜನರು ಹರತಾಳ ನಡೆಸುತ್ತಿದ್ದಾರೆ.
The Students' Federation of India (SFI) took out a march and vandalised Congress MP Rahul Gandhi's office in Wayanad, Kerala. They barged into the office and destroyed pieces of equipment inside.The protest was carried out against Rahul Gandhi for allegedly not interfering in the Supreme Court order on the eco-sensitive zone (ESZ). After the protest, Congress stated that his office staff was also injured in the clash.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm