ಬ್ರೇಕಿಂಗ್ ನ್ಯೂಸ್
25-06-22 04:39 pm HK News Desk ದೇಶ - ವಿದೇಶ
ವಯನಾಡ್, ಜೂನ್ 25: ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್ ಸಂಸತ್ ಕ್ಷೇತ್ರದ ಕಚೇರಿಗೆ ನುಗ್ಗಿ ಎಸ್ಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕಚೇರಿಯ ಸಿಬಂದಿಗೆ ಹಲ್ಲೆಗೈದು ಪೀಠೋಪಕರಣಗಳನ್ನು ಪುಡಿ ಮಾಡಿದ್ದಾರೆ. ಘಟನೆ ಸಂಬಂಧಿಸಿ ಪೊಲೀಸರು ಹತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ರಾಷ್ಟ್ರೀಯ ಉದ್ಯಾನವನ, ಸಂರಕ್ಷಿತ ಪ್ರದೇಶಗಳ ಸುತ್ತ ಇರುವ ಒಂದು ಕಿಮೀ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ವಲಯ ಎಂದು ಸುಪ್ರೀಂ ಕೋರ್ಟ್ ಘೋಷಣೆ ಮಾಡಿದ್ದನ್ನು ವಿರೋಧಿಸಿ ರಾಹುಲ್ ಗಾಂಧಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ವಯನಾಡಿನಲ್ಲಿ ರಾಷ್ಟ್ರೀಯ ಸಂರಕ್ಷಿತ ಪ್ರದೇಶದ ಸುತ್ತಮುತ್ತ ಹಲವಾರು ಮನೆಗಳು, ಜನವಸತಿ ಪ್ರದೇಶಗಳಿದ್ದು, ಈ ತೀರ್ಪಿನಿಂದ ತಮಗೆ ತೊಂದರೆಯಾಗುತ್ತೆ ಎನ್ನುವ ಭಯದಿಂದ ಪ್ರತಿಭಟನೆ ನಡೆಸಿದ್ದಾರೆ.
ವಯನಾಡ್ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಈ ಬಗ್ಗೆ ಕ್ಷೇತ್ರವನ್ನು ಪ್ರತಿನಿಧಿಸುವ ರಾಹುಲ್ ಗಾಂಧಿ ಧ್ವನಿ ಎತ್ತಬೇಕು ಎಂದು ಕಮ್ಯುನಿಸ್ಟ್ ಪರ ಸಂಘಟನೆಗಳು ಒತ್ತಾಯಿಸುತ್ತಿವೆ. ರಾಹುಲ್ ಗಾಂಧಿ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಈ ರೀತಿಯ ನಿರ್ಬಂಧವನ್ನು ತೆರವುಗೊಳಿಸಲು ಪ್ರಯತ್ನಿಸಬೇಕು ಎಂದು ಒತ್ತಾಯಿಸಿದ್ದಾರೆ. ಆದರೆ ರಾಹುಲ್ ಗಾಂಧಿ ನಮ್ಮ ನೋವಿಗೆ ಸ್ಪಂದಿಸಿಲ್ಲ ಎಂದು ಕಮ್ಯುನಿಸ್ಟ್ ವಿದ್ಯಾರ್ಥಿ ಸಂಘಟನೆ ಎಸ್ಎಫ್ಐ ಕಾರ್ಯಕರ್ತರು ಶುಕ್ರವಾರ ರಾಹುಲ್ ಗಾಂಧಿಯ ಸಂಸತ್ ಸದಸ್ಯರ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಕಚೇರಿಯಲ್ಲಿದ್ದ ಆಗಸ್ಟಿನ್ ಎಂಬ ಸಿಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ.
ಪರಿಸರ ಸೂಕ್ಷ್ಮ ಪ್ರದೇಶ ಎಂದು 2011ರಲ್ಲಿ ಆದೇಶ ಆಗಿದ್ದು, ಆನಂತರ ಇಷ್ಟೂ ವರ್ಷಗಳಲ್ಲಿ ಸ್ಥಳೀಯರು ಹಲವು ಸಂದರ್ಭಗಳಲ್ಲಿ ಪ್ರತಿಭಟನೆ ನಡೆಸುತ್ತ ಬಂದಿದ್ದರು. ಹೀಗೆ ಗುರುತಿಸಲ್ಪಟ್ಟ ಪ್ರದೇಶ ಜನನಿಬಿಡವಾಗಿದ್ದು ಜನರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ನಡೆಸಲು ಸಾಧ್ಯವಾಗದೇ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆ ಭಾಗದಲ್ಲಿ ಗಣಿಗಾರಿಕೆ, ಅಭಿವೃದ್ಧಿ ಚಟುವಟಿಕೆ ನಡೆಸುವುದಕ್ಕೆ ತೊಂದರೆಯಾಗಿದ್ದು, ಇದೇ ರೀತಿಯ ಸಮಸ್ಯೆ ಅನುಭವಿಸುತ್ತಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಇಡುಕ್ಕಿ, ವಯನಾಡ್, ಪತ್ತನಂತಿಟ್ಟ, ಕೊಟ್ಟಾಯಂ ಜಿಲ್ಲೆಗಳ ಜನರು ಹರತಾಳ ನಡೆಸುತ್ತಿದ್ದಾರೆ.
The Students' Federation of India (SFI) took out a march and vandalised Congress MP Rahul Gandhi's office in Wayanad, Kerala. They barged into the office and destroyed pieces of equipment inside.The protest was carried out against Rahul Gandhi for allegedly not interfering in the Supreme Court order on the eco-sensitive zone (ESZ). After the protest, Congress stated that his office staff was also injured in the clash.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm