ಬ್ರೇಕಿಂಗ್ ನ್ಯೂಸ್
30-09-20 09:55 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 30: ಕೇಂದ್ರ ಸರ್ಕಾರ ಅನ್ಲಾಕ್ 5ರ ಮಾರ್ಗಸೂಚಿ ಪ್ರಕಟಿಸಿದ್ದು, ಚಿತ್ರಮಂದಿರ ಮತ್ತು ಈಜುಕೊಳ ತೆರೆಯಲು ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಬಹುತೇಕ ಚಟುವಟಿಕೆಗಳಿಗೆ ಅಕ್ಟೋಬರ್ 15ರ ನಂತ್ರವೇ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಸಿನಿಮಾ ಮಂದಿರ, ಮಲ್ಟಿಪ್ಲೆಕ್ಸ್ಗಳು ಕಾರ್ಯರಂಭಕ್ಕೆ ಅವಕಾಶ ನೀಡಲಾಗಿದೆ. ಸಿನಿಮಾ ಮಂದಿರಗಳಲ್ಲಿ ಶೇ 50 ರಷ್ಟು ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಅಕ್ಟೋಬರ್ 15ರಿಂದ ಕಂಟೈನ್ಮೆಟ್ ಪ್ರದೇಶ ಹೊರತು ಪಡಿಸಿ ಬೇರೆ ಎಲ್ಲಾಕಡೆ ಇವುಗಳ ಕಾರ್ಯಚಾರಣೆಗೆ ಅವಕಾಶ ಕಲ್ಪಿಸಲಾಗಿದೆ.

ಇದೇ ವೇಳೆ ಶಾಲೆಗಳ ಪುನರಾರಂಭದ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ತೆಗೆದುಕೊಳ್ಳಲು ನಿಯಮಗಳನ್ನು ಸರಳಗೊಳಿಸಲಾಗಿದೆ. ಪೋಷಕರ ಲಿಖಿತ ಒಪ್ಪಂದದೊಂದಿಗೆ ವಿದ್ಯಾರ್ಥಿಗಳು ಹಾಜರಾಬಹುದು ಎಂದು ತಿಳಿಸಿದೆ. ಈ ವೇಳೆ ಹಾಜರಾತಿ ಕಡ್ಡಾಯವಲ್ಲ. ಬೇಕಾದಲ್ಲಿ ಆನ್ಲೈನ್ ಕ್ಲಾಸ್ಗಳನ್ನು ಮುಂದುವರೆಸಬಹುದು ಎಂದು ತಿಳಿಸಿದೆ. ಈ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಈ ಕುರಿತು ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಸೂಚಿಸಿದೆ.
ಜೊತೆಗೆ ವ್ಯವಹಾರದಿಂದ ವ್ಯವಹಾರದ ಉದ್ದೇಶಕ್ಕಾಗಿ ನಡೆಯುವ ಪ್ರದರ್ಶನಕ್ಕೂ ಅವಕಾಶ ಕಲ್ಪಿಸಿದ್ದು, ಇವೆಲ್ಲಾ ಮಾರ್ಗಸೂಚಿಗಳ ಪಾಲನೆ ಮಾಡುವುದು ಅಗತ್ಯ ಎಂದು ತಿಳಿಸಿದೆ. ಈ ಕುರಿತು ವಾಣಿಜ್ಯ ಇಲಾಖೆ ನಿರ್ದೇಶನ ನೀಡಲಿದೆ.

ಕ್ರೀಡಾಪಟುಗಳ ತರಬೇತಿಗಾಗಿ ಬಳಸುವ ಈಜುಕೊಳಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಇದಕ್ಕಾಗಿ ಕ್ರೀಡಾ ಸಚಿವಾಲಯದ ಮಾರ್ಗದರ್ಶನದಂತೆ ಕಾರ್ಯಚರಣೆ ನಡೆಸಬೇಕು ಎಂದು ತಿಳಿಸಿದೆ.
ಇದೇ ವೇಳೆ ಸಭೆ ಸಮಾರಂಭಗಳಲ್ಲಿ 100 ಜನರಿಗಿಂತ ಹೆಚ್ಚಿನ ಜನ ಭಾಗಿಯಾಗಲು ಅನುಮತಿ ನೀಡಲಾಗಿದೆ. ಇನ್ನು ಕಂಟೈನ್ಮೆಟ್ ಪ್ರದೇಶದಲ್ಲಿ ಅಕ್ಟೋಬರ್ 15ರ ಬಳಿಕ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳುವ ಬಗ್ಗೆ ಚಿಂತಿಸಲಾಗುವುದು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm