ಬ್ರೇಕಿಂಗ್ ನ್ಯೂಸ್
28-06-22 05:34 pm HK News Desk ದೇಶ - ವಿದೇಶ
ಕೊಲಂಬೋ, ಜೂ 27: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಹೊಸ ಸಮಸ್ಯೆ ಉಂಟಾಗಿದೆ.
ತೈಲ ಸಂಗ್ರಹ ಖಾಲಿಯಾಗಿದೆ, ವಾಹನ ಸಂಚಾರಕ್ಕೆ ಸರ್ಕಾರ ಹೊಸ ನಿಯಮಗಳನ್ನು ಘೋಷಣೆ ಮಾಡಿದೆ.
ಶ್ರೀಲಂಕಾದ ಆಡಳಿತ ಜುಲೈ 10ರ ತನಕ ತುರ್ತು ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಿದೆ. ಸೋಮವಾರ ಮಧ್ಯರಾತ್ರಿಯಿಂದಲೇ ಈ ನಿಯಮ ಜಾರಿಗೆ ಬರಲಿದೆ. ದೇಶದಲ್ಲಿನ ತೈಲ ಸಂಗ್ರಹ ಸಂಪೂರ್ಣ ಖಾಲಿಯಾಗಿದ್ದು, ದೇಶದ 22 ಮಿಲಿಯನ್ ಜನರಿಗೆ ಹೊಸ ಸಂಕಷ್ಟ ಎದುರಾಗಿದೆ.

ಸರ್ಕಾರದ ಆದೇಶದ ಪ್ರಕಾರ ತುರ್ತು ವಾಹನಗಳ ಪಟ್ಟಿಯಲ್ಲಿ ಆರೋಗ್ಯ, ಕಾನೂನು & ಸುವ್ಯವಸ್ಥೆ, ಬಂದರು, ವಿಮಾನ ನಿಲ್ದಾಣ, ಆಹಾರ ಸರಬರಾಜು ಮತ್ತು ಕೃಷಿ ಸಂಬಂಧಿತ ವಾಹನಗಳು ಮಾತ್ರ ಸೇರಿವೆ. ಈ ವಾಹನಗಳು ಮಾತ್ರ ಸಂಚಾರ ನಡೆಸಬಹುದಾಗಿದೆ.

ಸೋಮವಾರ ಮಧ್ಯರಾತ್ರಿಯಿಂದ ಜುಲೈ 10ರ ತನಕ ತುರ್ತು ವಾಹನಗಳನ್ನು ಬಿಟ್ಟು ಇತರ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ದ್ವೀಪ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.
ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿರುವ ಕಾರಣ ಶಾಲೆಗಳನ್ನು ಮುಚ್ಚಲಾಗಿದೆ. ಖಾಸಗಿ ಕಂಪನಿಗಳ ಸಿಬ್ಭಂದಿಗಳು ಮನೆಯಿಂದ ಕಾರ್ಯ ನಿರ್ವಹಣೆ ಮಾಡುವಂತೆ ಸೂಚನೆ ನೀಡಲಾಗಿದೆ.

ಇದೇ ಮೊದಲ ಬಾರಿಗೆ ದ್ವೀಪ ರಾಷ್ಟ್ರ ತೈಲ ಸಂಗ್ರಹ ಕೊರತೆ ಎದುರಿಸುತ್ತಿದೆ. ಸರ್ಕಾರಿ ಕಚೇರಿಗಳ ಸಿಬ್ಬಂದಿಗಳಿಗೆ ಸಹ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಉಪಯೋಗಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಶ್ರೀಲಂಕಾ ಕ್ರೆಡಿಟ್ ಲೈನ್ ಆಧಾರದಲ್ಲಿ ಭಾರತದಿಂದ ಹೊಸದಾಗಿ ಪೆಟ್ರೋಲ್ ಪೂರೈಕೆಗಾಗಿ ಎದುರು ನೋಡುತ್ತಿದೆ. ಮೂರು ದಿನಗಳಲ್ಲಿ ಪೆಟ್ರೋಲ್ ಲಭ್ಯವಾಗಲಿದೆ ಎಂದು ದೇಶದ ಜನರಿಗೆ ಭರವಸೆ ನೀಡಲಾಗಿತ್ತು.

ಮಿತಿ ಮೀರಿ ಬಾಕಿ ಉಳಿಸಿಕೊಂಡಿರುವ ಪರಿಣಾಮ ತೈಲ ಪೂರೈಕೆದಾರರು ಶ್ರೀಲಂಕಾಕ್ಕೆ ತೈಲ ಸರಬರಾಜು ಮಾಡಲು ಮುಂದೆ ಬರುತ್ತಿಲ್ಲ. ಆದ ಕಾರಣ ದೇಶದಲ್ಲಿ ಸಂಗ್ರಹವಿದ್ದ ಎಲ್ಲಾ ತೈಲ ಖಾಲಿಯಾಗಿದೆ.

ಭಾರತ ಸರ್ಕಾರ ಕ್ರೆಡಿಟ್ ಲೈನ್ ಆಧಾರದಲ್ಲಿ ಇದುವರೆಗೂ ಎರಡು ಬಾರಿ ಶ್ರೀಲಂಕಾಗೆ ತೈಲ ಸರಬರಾಜು ಮಾಡಿದೆ. ಆದರೂ ಸಹ ಶ್ರೀಲಂಕಾಗೆ ಅಗತ್ಯವಿರುಷ್ಟು ತೈಲ ಹೊಂದಿಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.
Cash-strapped Sri Lanka suspended nationwide fuel sales, except for essential services, for nearly a fortnight as the island faces a rapidly worsening economic crisis.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm