ಬ್ರೇಕಿಂಗ್ ನ್ಯೂಸ್
28-06-22 05:34 pm HK News Desk ದೇಶ - ವಿದೇಶ
ಕೊಲಂಬೋ, ಜೂ 27: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಹೊಸ ಸಮಸ್ಯೆ ಉಂಟಾಗಿದೆ.
ತೈಲ ಸಂಗ್ರಹ ಖಾಲಿಯಾಗಿದೆ, ವಾಹನ ಸಂಚಾರಕ್ಕೆ ಸರ್ಕಾರ ಹೊಸ ನಿಯಮಗಳನ್ನು ಘೋಷಣೆ ಮಾಡಿದೆ.
ಶ್ರೀಲಂಕಾದ ಆಡಳಿತ ಜುಲೈ 10ರ ತನಕ ತುರ್ತು ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಿದೆ. ಸೋಮವಾರ ಮಧ್ಯರಾತ್ರಿಯಿಂದಲೇ ಈ ನಿಯಮ ಜಾರಿಗೆ ಬರಲಿದೆ. ದೇಶದಲ್ಲಿನ ತೈಲ ಸಂಗ್ರಹ ಸಂಪೂರ್ಣ ಖಾಲಿಯಾಗಿದ್ದು, ದೇಶದ 22 ಮಿಲಿಯನ್ ಜನರಿಗೆ ಹೊಸ ಸಂಕಷ್ಟ ಎದುರಾಗಿದೆ.

ಸರ್ಕಾರದ ಆದೇಶದ ಪ್ರಕಾರ ತುರ್ತು ವಾಹನಗಳ ಪಟ್ಟಿಯಲ್ಲಿ ಆರೋಗ್ಯ, ಕಾನೂನು & ಸುವ್ಯವಸ್ಥೆ, ಬಂದರು, ವಿಮಾನ ನಿಲ್ದಾಣ, ಆಹಾರ ಸರಬರಾಜು ಮತ್ತು ಕೃಷಿ ಸಂಬಂಧಿತ ವಾಹನಗಳು ಮಾತ್ರ ಸೇರಿವೆ. ಈ ವಾಹನಗಳು ಮಾತ್ರ ಸಂಚಾರ ನಡೆಸಬಹುದಾಗಿದೆ.

ಸೋಮವಾರ ಮಧ್ಯರಾತ್ರಿಯಿಂದ ಜುಲೈ 10ರ ತನಕ ತುರ್ತು ವಾಹನಗಳನ್ನು ಬಿಟ್ಟು ಇತರ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ದ್ವೀಪ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.
ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿರುವ ಕಾರಣ ಶಾಲೆಗಳನ್ನು ಮುಚ್ಚಲಾಗಿದೆ. ಖಾಸಗಿ ಕಂಪನಿಗಳ ಸಿಬ್ಭಂದಿಗಳು ಮನೆಯಿಂದ ಕಾರ್ಯ ನಿರ್ವಹಣೆ ಮಾಡುವಂತೆ ಸೂಚನೆ ನೀಡಲಾಗಿದೆ.

ಇದೇ ಮೊದಲ ಬಾರಿಗೆ ದ್ವೀಪ ರಾಷ್ಟ್ರ ತೈಲ ಸಂಗ್ರಹ ಕೊರತೆ ಎದುರಿಸುತ್ತಿದೆ. ಸರ್ಕಾರಿ ಕಚೇರಿಗಳ ಸಿಬ್ಬಂದಿಗಳಿಗೆ ಸಹ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಉಪಯೋಗಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಶ್ರೀಲಂಕಾ ಕ್ರೆಡಿಟ್ ಲೈನ್ ಆಧಾರದಲ್ಲಿ ಭಾರತದಿಂದ ಹೊಸದಾಗಿ ಪೆಟ್ರೋಲ್ ಪೂರೈಕೆಗಾಗಿ ಎದುರು ನೋಡುತ್ತಿದೆ. ಮೂರು ದಿನಗಳಲ್ಲಿ ಪೆಟ್ರೋಲ್ ಲಭ್ಯವಾಗಲಿದೆ ಎಂದು ದೇಶದ ಜನರಿಗೆ ಭರವಸೆ ನೀಡಲಾಗಿತ್ತು.

ಮಿತಿ ಮೀರಿ ಬಾಕಿ ಉಳಿಸಿಕೊಂಡಿರುವ ಪರಿಣಾಮ ತೈಲ ಪೂರೈಕೆದಾರರು ಶ್ರೀಲಂಕಾಕ್ಕೆ ತೈಲ ಸರಬರಾಜು ಮಾಡಲು ಮುಂದೆ ಬರುತ್ತಿಲ್ಲ. ಆದ ಕಾರಣ ದೇಶದಲ್ಲಿ ಸಂಗ್ರಹವಿದ್ದ ಎಲ್ಲಾ ತೈಲ ಖಾಲಿಯಾಗಿದೆ.

ಭಾರತ ಸರ್ಕಾರ ಕ್ರೆಡಿಟ್ ಲೈನ್ ಆಧಾರದಲ್ಲಿ ಇದುವರೆಗೂ ಎರಡು ಬಾರಿ ಶ್ರೀಲಂಕಾಗೆ ತೈಲ ಸರಬರಾಜು ಮಾಡಿದೆ. ಆದರೂ ಸಹ ಶ್ರೀಲಂಕಾಗೆ ಅಗತ್ಯವಿರುಷ್ಟು ತೈಲ ಹೊಂದಿಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.
Cash-strapped Sri Lanka suspended nationwide fuel sales, except for essential services, for nearly a fortnight as the island faces a rapidly worsening economic crisis.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm