ಬ್ರೇಕಿಂಗ್ ನ್ಯೂಸ್
28-06-22 05:34 pm HK News Desk ದೇಶ - ವಿದೇಶ
ಕೊಲಂಬೋ, ಜೂ 27: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಹೊಸ ಸಮಸ್ಯೆ ಉಂಟಾಗಿದೆ.
ತೈಲ ಸಂಗ್ರಹ ಖಾಲಿಯಾಗಿದೆ, ವಾಹನ ಸಂಚಾರಕ್ಕೆ ಸರ್ಕಾರ ಹೊಸ ನಿಯಮಗಳನ್ನು ಘೋಷಣೆ ಮಾಡಿದೆ.
ಶ್ರೀಲಂಕಾದ ಆಡಳಿತ ಜುಲೈ 10ರ ತನಕ ತುರ್ತು ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಿದೆ. ಸೋಮವಾರ ಮಧ್ಯರಾತ್ರಿಯಿಂದಲೇ ಈ ನಿಯಮ ಜಾರಿಗೆ ಬರಲಿದೆ. ದೇಶದಲ್ಲಿನ ತೈಲ ಸಂಗ್ರಹ ಸಂಪೂರ್ಣ ಖಾಲಿಯಾಗಿದ್ದು, ದೇಶದ 22 ಮಿಲಿಯನ್ ಜನರಿಗೆ ಹೊಸ ಸಂಕಷ್ಟ ಎದುರಾಗಿದೆ.
ಸರ್ಕಾರದ ಆದೇಶದ ಪ್ರಕಾರ ತುರ್ತು ವಾಹನಗಳ ಪಟ್ಟಿಯಲ್ಲಿ ಆರೋಗ್ಯ, ಕಾನೂನು & ಸುವ್ಯವಸ್ಥೆ, ಬಂದರು, ವಿಮಾನ ನಿಲ್ದಾಣ, ಆಹಾರ ಸರಬರಾಜು ಮತ್ತು ಕೃಷಿ ಸಂಬಂಧಿತ ವಾಹನಗಳು ಮಾತ್ರ ಸೇರಿವೆ. ಈ ವಾಹನಗಳು ಮಾತ್ರ ಸಂಚಾರ ನಡೆಸಬಹುದಾಗಿದೆ.
ಸೋಮವಾರ ಮಧ್ಯರಾತ್ರಿಯಿಂದ ಜುಲೈ 10ರ ತನಕ ತುರ್ತು ವಾಹನಗಳನ್ನು ಬಿಟ್ಟು ಇತರ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ದ್ವೀಪ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.
ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿರುವ ಕಾರಣ ಶಾಲೆಗಳನ್ನು ಮುಚ್ಚಲಾಗಿದೆ. ಖಾಸಗಿ ಕಂಪನಿಗಳ ಸಿಬ್ಭಂದಿಗಳು ಮನೆಯಿಂದ ಕಾರ್ಯ ನಿರ್ವಹಣೆ ಮಾಡುವಂತೆ ಸೂಚನೆ ನೀಡಲಾಗಿದೆ.
ಇದೇ ಮೊದಲ ಬಾರಿಗೆ ದ್ವೀಪ ರಾಷ್ಟ್ರ ತೈಲ ಸಂಗ್ರಹ ಕೊರತೆ ಎದುರಿಸುತ್ತಿದೆ. ಸರ್ಕಾರಿ ಕಚೇರಿಗಳ ಸಿಬ್ಬಂದಿಗಳಿಗೆ ಸಹ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಉಪಯೋಗಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಶ್ರೀಲಂಕಾ ಕ್ರೆಡಿಟ್ ಲೈನ್ ಆಧಾರದಲ್ಲಿ ಭಾರತದಿಂದ ಹೊಸದಾಗಿ ಪೆಟ್ರೋಲ್ ಪೂರೈಕೆಗಾಗಿ ಎದುರು ನೋಡುತ್ತಿದೆ. ಮೂರು ದಿನಗಳಲ್ಲಿ ಪೆಟ್ರೋಲ್ ಲಭ್ಯವಾಗಲಿದೆ ಎಂದು ದೇಶದ ಜನರಿಗೆ ಭರವಸೆ ನೀಡಲಾಗಿತ್ತು.
ಮಿತಿ ಮೀರಿ ಬಾಕಿ ಉಳಿಸಿಕೊಂಡಿರುವ ಪರಿಣಾಮ ತೈಲ ಪೂರೈಕೆದಾರರು ಶ್ರೀಲಂಕಾಕ್ಕೆ ತೈಲ ಸರಬರಾಜು ಮಾಡಲು ಮುಂದೆ ಬರುತ್ತಿಲ್ಲ. ಆದ ಕಾರಣ ದೇಶದಲ್ಲಿ ಸಂಗ್ರಹವಿದ್ದ ಎಲ್ಲಾ ತೈಲ ಖಾಲಿಯಾಗಿದೆ.
ಭಾರತ ಸರ್ಕಾರ ಕ್ರೆಡಿಟ್ ಲೈನ್ ಆಧಾರದಲ್ಲಿ ಇದುವರೆಗೂ ಎರಡು ಬಾರಿ ಶ್ರೀಲಂಕಾಗೆ ತೈಲ ಸರಬರಾಜು ಮಾಡಿದೆ. ಆದರೂ ಸಹ ಶ್ರೀಲಂಕಾಗೆ ಅಗತ್ಯವಿರುಷ್ಟು ತೈಲ ಹೊಂದಿಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.
Cash-strapped Sri Lanka suspended nationwide fuel sales, except for essential services, for nearly a fortnight as the island faces a rapidly worsening economic crisis.
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 08:15 pm
HK News Desk
Ebrahim Raisi dead in helicopter crash: ಹೆಲಿಕ...
20-05-24 11:35 am
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
20-05-24 10:43 pm
Mangalore Correspondent
Mangalore Rain News: ಮಂಗಳೂರಿನಲ್ಲಿ ದಿಢೀರ್ ಬಿರು...
20-05-24 10:34 pm
Mangalore crime, CCB Police, Talapady: ಗಡಿಭಾಗ...
20-05-24 10:17 pm
Mangalore News, Rain, Harekala girl death: ಹ...
20-05-24 09:56 pm
Dr Dhananjaya Sarji campaigns in Bantwal, Man...
20-05-24 09:39 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm