ಬ್ರೇಕಿಂಗ್ ನ್ಯೂಸ್
29-06-22 10:25 pm HK News Desk ದೇಶ - ವಿದೇಶ
ಮುಂಬೈ, ಜೂನ್ 29: ಅಂತೂ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರಕಾರ ಪತನಗೊಂಡಿದೆ. ವಿಶ್ವಾಸ ಮತ ಸಾಬೀತು ಪಡಿಸುವ ರಾಜ್ಯಪಾಲರ ಸೂಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸುತ್ತಿದ್ದಂತೆಯೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಜೂನ್ 30ರಂದು ವಿಶ್ವಾಸ ಮತ ಸಾಬೀತು ಮಾಡುವಂತೆ ರಾಜ್ಯಪಾಲರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸೂಚಿಸಿದ್ದರು. ಆದರೆ, ರಾಜ್ಯಪಾಲರ ಈ ನಡೆಗೆ ಶಿವಸೇನೆ ಮುಖಂಡ ಸಂಜಯ ರಾವುತ್, ಸಿಎಂ ಠಾಕ್ರೆ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಸುಪ್ರೀಂ ಕೋರ್ಟ್ನಲ್ಲಿ ಈ ಬಗ್ಗೆ ಪ್ರಶ್ನಿಸುವುದಾಗಿ ಹೇಳಿದ್ದರು. ಅದರಂತೆ, ಇಂದು ಇಡೀ ದಿನ ಸುಪ್ರೀಂ ಕೋರ್ಟಿನಲ್ಲಿ ಹಿರಿಯ ವಕೀಲರಿಂದ ಜಟಾಪಟಿ ನಡೆದಿತ್ತು. ರಾತ್ರಿಯೇ ತೀರ್ಪು ನೀಡುವುದಾಗಿ ಸುಪ್ರೀ ಕೋರ್ಟ್ ಹೇಳಿದ್ದರಿಂದ ಕುತೂಹಲ ಉಂಟಾಗಿತ್ತು.

ಇದೀಗ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಪರ- ವಿರೋಧ ವಕೀಲರ ವಾದ ಆಲಿಸಿದ ಬಳಿಕ ರಾಜ್ಯಪಾಲರ ನಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ್ದಾರೆ. ಶಿವಸೇನೆಯ 40ಕ್ಕೂ ಹೆಚ್ಚು ಶಾಸಕರು ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವುದರಿಂದ ಠಾಕ್ರೆ ಸರಕಾರ ಬಹುಮತ ಕಳಕೊಂಡಿತ್ತು. ವಾರ ಕಾಲ ಗುವಾಹಟಿಯಲ್ಲಿ ಬಂಡಾಯ ಶಾಸಕರು ಬೀಡು ಬಿಟ್ಟಿದ್ದರು. ಕಾಂಗ್ರೆಸ್, ಎನ್ ಸಿಪಿ ಜೊತೆಗಿನ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದರು. ಇದೀಗ ಠಾಕ್ರೆ ರಾಜಿನಾಮೆ ನೀಡಿರುವುದರಿಂದ

ಶಿವಸೇನೆಯ ಬಂಡಾಯ ಶಾಸಕರು ಬಿಜೆಪಿ ಜೊತೆ ಸೇರಿ ಹೊಸ ಸರಕಾರ ಸ್ಥಾಪನೆ ಮಾಡಲಿದ್ದಾರೆ. ಬಂಡಾಯ ಶಾಸಕರ ಜೊತೆ ಶಿವಸೇನೆಯ ಎಂಟು ಮಂದಿ ಸಚಿವರೂ ಸೇರಿಕೊಂಡಿದ್ದರು. ಉದ್ಧವ್ ಠಾಕ್ರೆ ಮತ್ತು ಅವರ ಮಗ ಆದಿತ್ಯ ಠಾಕ್ರೆ ಮಾತ್ರ ಉಳಿದುಕೊಂಡಿದ್ದರು. ಏನೇ ಮನವಿ ಮಾಡಿಕೊಂಡರೂ, ಬಂಡಾಯ ಶಾಸಕರು ಪಟ್ಟು ಸಡಿಲ ಮಾಡದೇ ಇದ್ದುದರಿಂದ ಸರಕಾರ ಅಂತೂ ಪತನಗೊಂಡಿದೆ.
Uddhav Thackeray resigned as Maharashtra Chief Minister on Wednesday, June 29. Uddhav Thackeray’s announcement followed soon after the Supreme Court rejected MVA government’s plea seeking a stay on floor test in the Maharashtra Assembly.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am