ಬ್ರೇಕಿಂಗ್ ನ್ಯೂಸ್
29-06-22 10:25 pm HK News Desk ದೇಶ - ವಿದೇಶ
ಮುಂಬೈ, ಜೂನ್ 29: ಅಂತೂ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರಕಾರ ಪತನಗೊಂಡಿದೆ. ವಿಶ್ವಾಸ ಮತ ಸಾಬೀತು ಪಡಿಸುವ ರಾಜ್ಯಪಾಲರ ಸೂಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸುತ್ತಿದ್ದಂತೆಯೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಜೂನ್ 30ರಂದು ವಿಶ್ವಾಸ ಮತ ಸಾಬೀತು ಮಾಡುವಂತೆ ರಾಜ್ಯಪಾಲರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಸೂಚಿಸಿದ್ದರು. ಆದರೆ, ರಾಜ್ಯಪಾಲರ ಈ ನಡೆಗೆ ಶಿವಸೇನೆ ಮುಖಂಡ ಸಂಜಯ ರಾವುತ್, ಸಿಎಂ ಠಾಕ್ರೆ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಸುಪ್ರೀಂ ಕೋರ್ಟ್ನಲ್ಲಿ ಈ ಬಗ್ಗೆ ಪ್ರಶ್ನಿಸುವುದಾಗಿ ಹೇಳಿದ್ದರು. ಅದರಂತೆ, ಇಂದು ಇಡೀ ದಿನ ಸುಪ್ರೀಂ ಕೋರ್ಟಿನಲ್ಲಿ ಹಿರಿಯ ವಕೀಲರಿಂದ ಜಟಾಪಟಿ ನಡೆದಿತ್ತು. ರಾತ್ರಿಯೇ ತೀರ್ಪು ನೀಡುವುದಾಗಿ ಸುಪ್ರೀ ಕೋರ್ಟ್ ಹೇಳಿದ್ದರಿಂದ ಕುತೂಹಲ ಉಂಟಾಗಿತ್ತು.

ಇದೀಗ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಪರ- ವಿರೋಧ ವಕೀಲರ ವಾದ ಆಲಿಸಿದ ಬಳಿಕ ರಾಜ್ಯಪಾಲರ ನಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ್ದಾರೆ. ಶಿವಸೇನೆಯ 40ಕ್ಕೂ ಹೆಚ್ಚು ಶಾಸಕರು ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವುದರಿಂದ ಠಾಕ್ರೆ ಸರಕಾರ ಬಹುಮತ ಕಳಕೊಂಡಿತ್ತು. ವಾರ ಕಾಲ ಗುವಾಹಟಿಯಲ್ಲಿ ಬಂಡಾಯ ಶಾಸಕರು ಬೀಡು ಬಿಟ್ಟಿದ್ದರು. ಕಾಂಗ್ರೆಸ್, ಎನ್ ಸಿಪಿ ಜೊತೆಗಿನ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದರು. ಇದೀಗ ಠಾಕ್ರೆ ರಾಜಿನಾಮೆ ನೀಡಿರುವುದರಿಂದ

ಶಿವಸೇನೆಯ ಬಂಡಾಯ ಶಾಸಕರು ಬಿಜೆಪಿ ಜೊತೆ ಸೇರಿ ಹೊಸ ಸರಕಾರ ಸ್ಥಾಪನೆ ಮಾಡಲಿದ್ದಾರೆ. ಬಂಡಾಯ ಶಾಸಕರ ಜೊತೆ ಶಿವಸೇನೆಯ ಎಂಟು ಮಂದಿ ಸಚಿವರೂ ಸೇರಿಕೊಂಡಿದ್ದರು. ಉದ್ಧವ್ ಠಾಕ್ರೆ ಮತ್ತು ಅವರ ಮಗ ಆದಿತ್ಯ ಠಾಕ್ರೆ ಮಾತ್ರ ಉಳಿದುಕೊಂಡಿದ್ದರು. ಏನೇ ಮನವಿ ಮಾಡಿಕೊಂಡರೂ, ಬಂಡಾಯ ಶಾಸಕರು ಪಟ್ಟು ಸಡಿಲ ಮಾಡದೇ ಇದ್ದುದರಿಂದ ಸರಕಾರ ಅಂತೂ ಪತನಗೊಂಡಿದೆ.
Uddhav Thackeray resigned as Maharashtra Chief Minister on Wednesday, June 29. Uddhav Thackeray’s announcement followed soon after the Supreme Court rejected MVA government’s plea seeking a stay on floor test in the Maharashtra Assembly.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm