ಮೋದಿ, ಅಮಿತ್ ಷಾ, ಯೋಗಿಗೆ ಕೊಲೆ ಬೆದರಿಕೆ ಪೋಸ್ಟ್ ; ಆರೋಪಿ ಬಂಧಿಸಿ ಬಿಟ್ಟು ಕಳುಹಿಸಿದ ಪೊಲೀಸರು !

01-07-22 02:16 pm       HK News Desk   ದೇಶ - ವಿದೇಶ

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗ ಜೀವ ಬೆದರಿಕೆ ಪೋಸ್ಟ್‌ ಹಾಕಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಪೊಲೀಸರು ವಿಚಾರಣೆ ಬಳಿಕ ಬಿಟ್ಟು ಕಳುಹಿಸಿದ್ದಾರೆ.

ನವದೆಹಲಿ, ಜುಲೈ 1: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗ ಜೀವ ಬೆದರಿಕೆ ಪೋಸ್ಟ್‌ ಹಾಕಿದ್ದ ವ್ಯಕ್ತಿಯನ್ನು ಬಂಧಿಸಿದ್ದ ಪೊಲೀಸರು ವಿಚಾರಣೆ ಬಳಿಕ ಬಿಟ್ಟು ಕಳುಹಿಸಿದ್ದಾರೆ.

ಅಬ್ದುಲ್‌ ಮಜೀದ್‌ ಬಂಧಿತ ಆರೋಪಿ. ಈತನನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿತ್ತು. ಪ್ರಭಾವಿ ನಾಯಕರನ್ನು ಕೊಲೆ ಮಾಡುವುದಾಗಿ ಸೋಷಿಯಲ್‌ ಮೀಡಿಯಾದಲ್ಲಿ ಬೆದರಿಕೆ ಪೋಸ್ಟ್‌ ಹಾಕಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು.

ಪ್ರವಾದಿ ಮೊಹಮ್ಮದ್‌ ಅವರ ಬಗ್ಗೆ ಉಚ್ಚಾಟಿತ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ನಾಯಕರು ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಆರೋಪಿ ಪೋಸ್ಟ್‌ ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹೈದರಾಬಾದ್‌ನ ಮೊಘಲ್‌ಪುರ ಪೊಲೀಸರು, ಪ್ರಚೋದನಕಾರಿ ಪೋಸ್ಟ್‌ಗಾಗಿ ಅಬ್ದುಲ್ ಮಜೀದ್ ವಿರುದ್ಧ ಪ್ರಕರಣ ದಾಖಲಿಸಿ ಬುಧವಾರ ಬಂಧಿಸಿದ್ದಾರೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಿಆರ್‌ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ನೋಟಿಸ್ ನೀಡುವಂತೆ ಕೋರ್ಟ್ ಸೂಚಿಸಿದ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್ ಕೊಟ್ಟು ಕಳಿಸಿದ್ದಾರೆ.

A man, who allegedly put up a social media post threatening Prime Minister Narendra Modi, Union Home Minister Amit Shah and Uttar Pradesh Chief Minister Yogi Adityanath, was arrested in Hyderabad, police said today.