ಬ್ರೇಕಿಂಗ್ ನ್ಯೂಸ್
01-10-20 03:50 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ,ಅ.1: ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಉತ್ತರಪ್ರದೇಶದ ಹಾಥರಸ್ ಜಿಲ್ಲೆಯತ್ತ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ಪಡೆಯನ್ನು ಪೊಲೀಸರು ತಡೆಹಿಡಿದರು. ಹೀಗಾಗಿ ಇವರಿಬ್ಬರು ದಿಲ್ಲಿ ಹಾಗೂ ಉತ್ತರಪ್ರದೇಶ ನಡುವಿನ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ತಮ್ಮ ಪ್ರಯಾಣ ಮುಂದುವರಿಸಿದರು.
ದಿಲ್ಲಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಮಂಗಳವಾರ ರಾತ್ರಿ ಸಾವನ್ನಪ್ಪಿದ್ದ ದಲಿತ ಯುವತಿಯನ್ನು ಉತ್ತರಪ್ರದೇಶ ಪೊಲೀಸರು ಬುಧವಾರ ರಾತ್ರಿ 2:30ರ ಸುಮಾರಿಗೆ ಅಂತ್ಯಕ್ರಿಯೆ ನಡೆಸಿದ್ದು ಇದು ಭಾರೀ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ನಾಯಕರ ಭೇಟಿಗೆ ಮೊದಲು ಸೆಕ್ಷನ್ 144ನ್ನು ಜಾರಿಗೊಳಿಸಿ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿರುವ ಉತ್ತರಪ್ರದೇಶದ ಆಡಳಿತವು ಕೊರೋನ ವೈರಸ್ಕಾರಣವನ್ನು ಮುಂದಿಟ್ಟುಕೊಂಡು ಗಡಿಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿದೆ.

ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಳನ್ನು ತಡೆದು ಘೋಷಣೆಗಳನ್ನು ಕೂಗುತ್ತಿರುವ ನಡುವೆ ರಾಹುಲ್ ಹಾಗೂ ಪ್ರಿಯಾಂಕಾ ಅವರಿದ್ದ ವಾಹನವು ಗಡಿಯನ್ನು ದಾಟಿತು.ಆದರೆ, ಹಥ್ರಾಸ್ನಿಂದ 142 ಕಿ.ಮೀ.ದೂರದಲ್ಲಿರುವ ಗ್ರೇಟರ್ನೊಯ್ಡಾದಲ್ಲಿ ರಾಹುಲ್-ಪ್ರಿಯಾಂಕಾ ಅವರ ಬೆಂಗಾವಲು ಪಡೆ ವಾಹನವನ್ನು ತಡೆಯಲಾಯಿತು. ರಾಹುಲ್ ಹಾಗೂ ಪ್ರಿಯಾಂಕಾ ವಾಹನದಿಂದ ಕೆಳಗಿಳಿದು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸುತ್ತಾ ಹಥ್ರಾಸ್ನತ್ತ ಹೆಜ್ಜೆ ಹಾಕುತ್ತಿದ್ದಾರೆ.
ಸೆಪ್ಟಂಬರ್ 1ರಿಂದ ನಿರ್ಬಂಧಗಳು ಜಾರಿಯಾಗಿದ್ದು, ಅದು ಅಕ್ಟೋಬರ್ 31ರ ತನಕ ವಿಸ್ತರಿಸಲಾಗಿದೆ ಎಂದು ಯು.ಪಿ. ಅಧಿಕಾರಿಗಳು ತಿಳಿಸಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm