ಬ್ರೇಕಿಂಗ್ ನ್ಯೂಸ್
01-10-20 03:50 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ,ಅ.1: ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಉತ್ತರಪ್ರದೇಶದ ಹಾಥರಸ್ ಜಿಲ್ಲೆಯತ್ತ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ಪಡೆಯನ್ನು ಪೊಲೀಸರು ತಡೆಹಿಡಿದರು. ಹೀಗಾಗಿ ಇವರಿಬ್ಬರು ದಿಲ್ಲಿ ಹಾಗೂ ಉತ್ತರಪ್ರದೇಶ ನಡುವಿನ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ತಮ್ಮ ಪ್ರಯಾಣ ಮುಂದುವರಿಸಿದರು.
ದಿಲ್ಲಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಮಂಗಳವಾರ ರಾತ್ರಿ ಸಾವನ್ನಪ್ಪಿದ್ದ ದಲಿತ ಯುವತಿಯನ್ನು ಉತ್ತರಪ್ರದೇಶ ಪೊಲೀಸರು ಬುಧವಾರ ರಾತ್ರಿ 2:30ರ ಸುಮಾರಿಗೆ ಅಂತ್ಯಕ್ರಿಯೆ ನಡೆಸಿದ್ದು ಇದು ಭಾರೀ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ನಾಯಕರ ಭೇಟಿಗೆ ಮೊದಲು ಸೆಕ್ಷನ್ 144ನ್ನು ಜಾರಿಗೊಳಿಸಿ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿರುವ ಉತ್ತರಪ್ರದೇಶದ ಆಡಳಿತವು ಕೊರೋನ ವೈರಸ್ಕಾರಣವನ್ನು ಮುಂದಿಟ್ಟುಕೊಂಡು ಗಡಿಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿದೆ.

ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಳನ್ನು ತಡೆದು ಘೋಷಣೆಗಳನ್ನು ಕೂಗುತ್ತಿರುವ ನಡುವೆ ರಾಹುಲ್ ಹಾಗೂ ಪ್ರಿಯಾಂಕಾ ಅವರಿದ್ದ ವಾಹನವು ಗಡಿಯನ್ನು ದಾಟಿತು.ಆದರೆ, ಹಥ್ರಾಸ್ನಿಂದ 142 ಕಿ.ಮೀ.ದೂರದಲ್ಲಿರುವ ಗ್ರೇಟರ್ನೊಯ್ಡಾದಲ್ಲಿ ರಾಹುಲ್-ಪ್ರಿಯಾಂಕಾ ಅವರ ಬೆಂಗಾವಲು ಪಡೆ ವಾಹನವನ್ನು ತಡೆಯಲಾಯಿತು. ರಾಹುಲ್ ಹಾಗೂ ಪ್ರಿಯಾಂಕಾ ವಾಹನದಿಂದ ಕೆಳಗಿಳಿದು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸುತ್ತಾ ಹಥ್ರಾಸ್ನತ್ತ ಹೆಜ್ಜೆ ಹಾಕುತ್ತಿದ್ದಾರೆ.
ಸೆಪ್ಟಂಬರ್ 1ರಿಂದ ನಿರ್ಬಂಧಗಳು ಜಾರಿಯಾಗಿದ್ದು, ಅದು ಅಕ್ಟೋಬರ್ 31ರ ತನಕ ವಿಸ್ತರಿಸಲಾಗಿದೆ ಎಂದು ಯು.ಪಿ. ಅಧಿಕಾರಿಗಳು ತಿಳಿಸಿದ್ದಾರೆ.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am