ಬ್ರೇಕಿಂಗ್ ನ್ಯೂಸ್
01-10-20 03:50 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ,ಅ.1: ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಉತ್ತರಪ್ರದೇಶದ ಹಾಥರಸ್ ಜಿಲ್ಲೆಯತ್ತ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ಪಡೆಯನ್ನು ಪೊಲೀಸರು ತಡೆಹಿಡಿದರು. ಹೀಗಾಗಿ ಇವರಿಬ್ಬರು ದಿಲ್ಲಿ ಹಾಗೂ ಉತ್ತರಪ್ರದೇಶ ನಡುವಿನ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ತಮ್ಮ ಪ್ರಯಾಣ ಮುಂದುವರಿಸಿದರು.
ದಿಲ್ಲಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಮಂಗಳವಾರ ರಾತ್ರಿ ಸಾವನ್ನಪ್ಪಿದ್ದ ದಲಿತ ಯುವತಿಯನ್ನು ಉತ್ತರಪ್ರದೇಶ ಪೊಲೀಸರು ಬುಧವಾರ ರಾತ್ರಿ 2:30ರ ಸುಮಾರಿಗೆ ಅಂತ್ಯಕ್ರಿಯೆ ನಡೆಸಿದ್ದು ಇದು ಭಾರೀ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ನಾಯಕರ ಭೇಟಿಗೆ ಮೊದಲು ಸೆಕ್ಷನ್ 144ನ್ನು ಜಾರಿಗೊಳಿಸಿ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿರುವ ಉತ್ತರಪ್ರದೇಶದ ಆಡಳಿತವು ಕೊರೋನ ವೈರಸ್ಕಾರಣವನ್ನು ಮುಂದಿಟ್ಟುಕೊಂಡು ಗಡಿಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿದೆ.

ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಳನ್ನು ತಡೆದು ಘೋಷಣೆಗಳನ್ನು ಕೂಗುತ್ತಿರುವ ನಡುವೆ ರಾಹುಲ್ ಹಾಗೂ ಪ್ರಿಯಾಂಕಾ ಅವರಿದ್ದ ವಾಹನವು ಗಡಿಯನ್ನು ದಾಟಿತು.ಆದರೆ, ಹಥ್ರಾಸ್ನಿಂದ 142 ಕಿ.ಮೀ.ದೂರದಲ್ಲಿರುವ ಗ್ರೇಟರ್ನೊಯ್ಡಾದಲ್ಲಿ ರಾಹುಲ್-ಪ್ರಿಯಾಂಕಾ ಅವರ ಬೆಂಗಾವಲು ಪಡೆ ವಾಹನವನ್ನು ತಡೆಯಲಾಯಿತು. ರಾಹುಲ್ ಹಾಗೂ ಪ್ರಿಯಾಂಕಾ ವಾಹನದಿಂದ ಕೆಳಗಿಳಿದು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸುತ್ತಾ ಹಥ್ರಾಸ್ನತ್ತ ಹೆಜ್ಜೆ ಹಾಕುತ್ತಿದ್ದಾರೆ.
ಸೆಪ್ಟಂಬರ್ 1ರಿಂದ ನಿರ್ಬಂಧಗಳು ಜಾರಿಯಾಗಿದ್ದು, ಅದು ಅಕ್ಟೋಬರ್ 31ರ ತನಕ ವಿಸ್ತರಿಸಲಾಗಿದೆ ಎಂದು ಯು.ಪಿ. ಅಧಿಕಾರಿಗಳು ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am