ಬ್ರೇಕಿಂಗ್ ನ್ಯೂಸ್
12-07-22 05:18 pm HK News Desk ದೇಶ - ವಿದೇಶ
ಭೋಪಾಲ್, ಜುಲೈ 12: ನದಿಯಲ್ಲಿ ಸ್ನಾನ ಮಾಡುತ್ತಿದ್ದ ಹತ್ತು ವರ್ಷದ ಬಾಲಕನನ್ನು ಮೊಸಳೆ ನುಂಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶಿಯೋಪುರ್ ಜಿಲ್ಲೆಯ ಚಂಬಲ್ ನದಿಯಲ್ಲಿ ಘಟನೆ ನಡೆದಿದೆ.
ಸ್ನಾನ ಮಾಡುತ್ತಿದ್ದ ಹುಡುಗನನ್ನು ಬೃಹತ್ ಮೊಸಳೆ ಎಳೆದೊಯ್ದಿದ್ದನ್ನು ನೋಡಿದ ಸ್ಥಳೀಯರು ಗ್ರಾಮಸ್ಥರ ಗಮನಕ್ಕೆ ತಂದಿದ್ದಾರೆ. ಆನಂತರ, ಮೊಸಳೆಯನ್ನು ಬಲೆ ಹಾಕಿ ಹಿಡಿದು ಹಗ್ಗದಿಂದ ಕಟ್ಟಿ ನೀರಿನಿಂದ ಮೇಲಕ್ಕೆ ಎಳೆದಿದ್ದಾರೆ. ಅಷ್ಟರಲ್ಲಿ ಪೊಲೀಸರಿಗೆ ಮಾಹಿತಿ ಹೋಗಿದ್ದು, ವನ್ಯಜೀವಿ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಪೊಲೀಸರು ಗ್ರಾಮಸ್ಥರ ಕೈಯಿಂದ ಮೊಸಳೆಯನ್ನು ಬಿಡಿಸಿದ್ದಾರೆ.

ಆದರೆ ಬಾಲಕನ ಹೆತ್ತವರು ಮೊಸಳೆಯನ್ನು ಬಿಡುವುದಕ್ಕೆ ಕೇಳಲಿಲ್ಲ. ಮೊಸಳೆಯ ಹೊಟ್ಟೆಯಲ್ಲಿ ಬಾಲಕ ಜೀವಂತ ಇರಬಹುದು. ಸಿಗಿದು ನೋಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಪೊಲೀಸರು ಮತ್ತು ವನ್ಯಜೀವಿ ಅಧಿಕಾರಿಗಳು ಮೊಸಳೆಯ ಹೊಟ್ಟೆ ಬಗೆಯಲು ಬಿಡಲಿಲ್ಲ. ರಘುನಾಥ ಪುರ ಪೊಲೀಸ್ ಠಾಣಾಧಿಕಾರಿ ಶ್ಯಾಮ್ ವೀರ್ ಸಿಂಗ್ ತೋಮರ್, ಬಾಲಕ ನದಿ ಆಳ ಇರುವ ಜಾಗಕ್ಕೆ ಹೋಗಿದ್ದ. ಅಲ್ಲಿಗೆ ಬಂದಿದ್ದ ಮೊಸಳೆ ಬಾಲಕನನ್ನು ಹಿಡಿದು ನುಂಗಿತ್ತು. ಆನಂತರ ಸ್ಥಳೀಯರು ಸೇರಿ ಮೊಸಳೆಯನ್ನು ಹಿಡಿದು ಕಟ್ಟಿ ಹಾಕಿದ್ದಾರೆ. ಬಾಲಕನನ್ನು ಹಿಡಿದು ನೀರಿನಾಳಕ್ಕೆ ಎಳೆದೊಯ್ದು ನುಂಗಿದ್ದರಿಂದ ಬದುಕುಳಿಯುವ ಸಾಧ್ಯತೆ ಇರುವುದಿಲ್ಲ ಎಂದು ಹೆತ್ತವರಿಗೆ ಮನವರಿಕೆ ಮಾಡಿದ್ದಾರೆ.

ಕೊನೆಗೆ ಮೊಸಳೆಯನ್ನು ಗ್ರಾಮಸ್ಥರು ಬಿಟ್ಟು ಕೊಟ್ಟಿದ್ದಾರೆ. ವನ್ಯಜೀವಿ ವಿಭಾಗದ ಅಧಿಕಾರಿಗಳು ಮೊಸಳೆಯನ್ನು ವಶಕ್ಕೆ ಪಡೆದು ಬೇರೆ ಕಡೆಗೆ ಒಯ್ದಿದ್ದಾರೆ.
An 10-year-old boy was swallowed by a crocodile in Sheopur of Madhya Pradesh. The crocodile attacked the boy when he was taking a bath in the Chambal river on Monday morning. The crocodile dragged the boy into the river.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm