ಬ್ರೇಕಿಂಗ್ ನ್ಯೂಸ್
            
                        12-07-22 05:18 pm HK News Desk ದೇಶ - ವಿದೇಶ
            ಭೋಪಾಲ್, ಜುಲೈ 12: ನದಿಯಲ್ಲಿ ಸ್ನಾನ ಮಾಡುತ್ತಿದ್ದ ಹತ್ತು ವರ್ಷದ ಬಾಲಕನನ್ನು ಮೊಸಳೆ ನುಂಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶಿಯೋಪುರ್ ಜಿಲ್ಲೆಯ ಚಂಬಲ್ ನದಿಯಲ್ಲಿ ಘಟನೆ ನಡೆದಿದೆ.
ಸ್ನಾನ ಮಾಡುತ್ತಿದ್ದ ಹುಡುಗನನ್ನು ಬೃಹತ್ ಮೊಸಳೆ ಎಳೆದೊಯ್ದಿದ್ದನ್ನು ನೋಡಿದ ಸ್ಥಳೀಯರು ಗ್ರಾಮಸ್ಥರ ಗಮನಕ್ಕೆ ತಂದಿದ್ದಾರೆ. ಆನಂತರ, ಮೊಸಳೆಯನ್ನು ಬಲೆ ಹಾಕಿ ಹಿಡಿದು ಹಗ್ಗದಿಂದ ಕಟ್ಟಿ ನೀರಿನಿಂದ ಮೇಲಕ್ಕೆ ಎಳೆದಿದ್ದಾರೆ. ಅಷ್ಟರಲ್ಲಿ ಪೊಲೀಸರಿಗೆ ಮಾಹಿತಿ ಹೋಗಿದ್ದು, ವನ್ಯಜೀವಿ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಪೊಲೀಸರು ಗ್ರಾಮಸ್ಥರ ಕೈಯಿಂದ ಮೊಸಳೆಯನ್ನು ಬಿಡಿಸಿದ್ದಾರೆ.

ಆದರೆ ಬಾಲಕನ ಹೆತ್ತವರು ಮೊಸಳೆಯನ್ನು ಬಿಡುವುದಕ್ಕೆ ಕೇಳಲಿಲ್ಲ. ಮೊಸಳೆಯ ಹೊಟ್ಟೆಯಲ್ಲಿ ಬಾಲಕ ಜೀವಂತ ಇರಬಹುದು. ಸಿಗಿದು ನೋಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಪೊಲೀಸರು ಮತ್ತು ವನ್ಯಜೀವಿ ಅಧಿಕಾರಿಗಳು ಮೊಸಳೆಯ ಹೊಟ್ಟೆ ಬಗೆಯಲು ಬಿಡಲಿಲ್ಲ. ರಘುನಾಥ ಪುರ ಪೊಲೀಸ್ ಠಾಣಾಧಿಕಾರಿ ಶ್ಯಾಮ್ ವೀರ್ ಸಿಂಗ್ ತೋಮರ್, ಬಾಲಕ ನದಿ ಆಳ ಇರುವ ಜಾಗಕ್ಕೆ ಹೋಗಿದ್ದ. ಅಲ್ಲಿಗೆ ಬಂದಿದ್ದ ಮೊಸಳೆ ಬಾಲಕನನ್ನು ಹಿಡಿದು ನುಂಗಿತ್ತು. ಆನಂತರ ಸ್ಥಳೀಯರು ಸೇರಿ ಮೊಸಳೆಯನ್ನು ಹಿಡಿದು ಕಟ್ಟಿ ಹಾಕಿದ್ದಾರೆ. ಬಾಲಕನನ್ನು ಹಿಡಿದು ನೀರಿನಾಳಕ್ಕೆ ಎಳೆದೊಯ್ದು ನುಂಗಿದ್ದರಿಂದ ಬದುಕುಳಿಯುವ ಸಾಧ್ಯತೆ ಇರುವುದಿಲ್ಲ ಎಂದು ಹೆತ್ತವರಿಗೆ ಮನವರಿಕೆ ಮಾಡಿದ್ದಾರೆ.

ಕೊನೆಗೆ ಮೊಸಳೆಯನ್ನು ಗ್ರಾಮಸ್ಥರು ಬಿಟ್ಟು ಕೊಟ್ಟಿದ್ದಾರೆ. ವನ್ಯಜೀವಿ ವಿಭಾಗದ ಅಧಿಕಾರಿಗಳು ಮೊಸಳೆಯನ್ನು ವಶಕ್ಕೆ ಪಡೆದು ಬೇರೆ ಕಡೆಗೆ ಒಯ್ದಿದ್ದಾರೆ.
            
            
            An 10-year-old boy was swallowed by a crocodile in Sheopur of Madhya Pradesh. The crocodile attacked the boy when he was taking a bath in the Chambal river on Monday morning. The crocodile dragged the boy into the river.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm