ಬ್ರೇಕಿಂಗ್ ನ್ಯೂಸ್
12-07-22 05:18 pm HK News Desk ದೇಶ - ವಿದೇಶ
ಭೋಪಾಲ್, ಜುಲೈ 12: ನದಿಯಲ್ಲಿ ಸ್ನಾನ ಮಾಡುತ್ತಿದ್ದ ಹತ್ತು ವರ್ಷದ ಬಾಲಕನನ್ನು ಮೊಸಳೆ ನುಂಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶಿಯೋಪುರ್ ಜಿಲ್ಲೆಯ ಚಂಬಲ್ ನದಿಯಲ್ಲಿ ಘಟನೆ ನಡೆದಿದೆ.
ಸ್ನಾನ ಮಾಡುತ್ತಿದ್ದ ಹುಡುಗನನ್ನು ಬೃಹತ್ ಮೊಸಳೆ ಎಳೆದೊಯ್ದಿದ್ದನ್ನು ನೋಡಿದ ಸ್ಥಳೀಯರು ಗ್ರಾಮಸ್ಥರ ಗಮನಕ್ಕೆ ತಂದಿದ್ದಾರೆ. ಆನಂತರ, ಮೊಸಳೆಯನ್ನು ಬಲೆ ಹಾಕಿ ಹಿಡಿದು ಹಗ್ಗದಿಂದ ಕಟ್ಟಿ ನೀರಿನಿಂದ ಮೇಲಕ್ಕೆ ಎಳೆದಿದ್ದಾರೆ. ಅಷ್ಟರಲ್ಲಿ ಪೊಲೀಸರಿಗೆ ಮಾಹಿತಿ ಹೋಗಿದ್ದು, ವನ್ಯಜೀವಿ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಪೊಲೀಸರು ಗ್ರಾಮಸ್ಥರ ಕೈಯಿಂದ ಮೊಸಳೆಯನ್ನು ಬಿಡಿಸಿದ್ದಾರೆ.
ಆದರೆ ಬಾಲಕನ ಹೆತ್ತವರು ಮೊಸಳೆಯನ್ನು ಬಿಡುವುದಕ್ಕೆ ಕೇಳಲಿಲ್ಲ. ಮೊಸಳೆಯ ಹೊಟ್ಟೆಯಲ್ಲಿ ಬಾಲಕ ಜೀವಂತ ಇರಬಹುದು. ಸಿಗಿದು ನೋಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಪೊಲೀಸರು ಮತ್ತು ವನ್ಯಜೀವಿ ಅಧಿಕಾರಿಗಳು ಮೊಸಳೆಯ ಹೊಟ್ಟೆ ಬಗೆಯಲು ಬಿಡಲಿಲ್ಲ. ರಘುನಾಥ ಪುರ ಪೊಲೀಸ್ ಠಾಣಾಧಿಕಾರಿ ಶ್ಯಾಮ್ ವೀರ್ ಸಿಂಗ್ ತೋಮರ್, ಬಾಲಕ ನದಿ ಆಳ ಇರುವ ಜಾಗಕ್ಕೆ ಹೋಗಿದ್ದ. ಅಲ್ಲಿಗೆ ಬಂದಿದ್ದ ಮೊಸಳೆ ಬಾಲಕನನ್ನು ಹಿಡಿದು ನುಂಗಿತ್ತು. ಆನಂತರ ಸ್ಥಳೀಯರು ಸೇರಿ ಮೊಸಳೆಯನ್ನು ಹಿಡಿದು ಕಟ್ಟಿ ಹಾಕಿದ್ದಾರೆ. ಬಾಲಕನನ್ನು ಹಿಡಿದು ನೀರಿನಾಳಕ್ಕೆ ಎಳೆದೊಯ್ದು ನುಂಗಿದ್ದರಿಂದ ಬದುಕುಳಿಯುವ ಸಾಧ್ಯತೆ ಇರುವುದಿಲ್ಲ ಎಂದು ಹೆತ್ತವರಿಗೆ ಮನವರಿಕೆ ಮಾಡಿದ್ದಾರೆ.
ಕೊನೆಗೆ ಮೊಸಳೆಯನ್ನು ಗ್ರಾಮಸ್ಥರು ಬಿಟ್ಟು ಕೊಟ್ಟಿದ್ದಾರೆ. ವನ್ಯಜೀವಿ ವಿಭಾಗದ ಅಧಿಕಾರಿಗಳು ಮೊಸಳೆಯನ್ನು ವಶಕ್ಕೆ ಪಡೆದು ಬೇರೆ ಕಡೆಗೆ ಒಯ್ದಿದ್ದಾರೆ.
An 10-year-old boy was swallowed by a crocodile in Sheopur of Madhya Pradesh. The crocodile attacked the boy when he was taking a bath in the Chambal river on Monday morning. The crocodile dragged the boy into the river.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm