ಬ್ರೇಕಿಂಗ್ ನ್ಯೂಸ್
12-07-22 10:02 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 12 : ದುಬೈನಿಂದ ಮಧುರೈಗೆ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಮತ್ತೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ವಿಮಾನದ ಮುಂದಿನ ಚಕ್ರ ಅಸಮರ್ಪಕ ಕಾರ್ಯ ನಿರ್ವಹಿಸುತ್ತಿದ್ದ ಕಾರಣ ವಿಮಾನ ವಿಳಂಬವಾಗಿ ತಲುಪಿದೆ. ಕಳೆದ 24 ದಿನಗಳಲ್ಲಿ ಸ್ಪೈಸ್ ಜೆಟ್ ಕಂಪನಿಯ ವಿಮಾನಗಳು ತಾಂತ್ರಿಕ ದೋಷವನ್ನು ಎದುರಿಸುತ್ತಿರುವ 9ನೇ ಘಟನೆ ಇದಾಗಿದೆ.
ವಿಟಿ-ಎಸ್ಝಡ್ಕೆ ನೋಂದಣಿ ಸಂಖ್ಯೆಯ ಬೋಯಿಂಗ್ ಬಿ 737 ಮ್ಯಾಕ್ಸ್ ವಿಮಾನ ಸೋಮವಾರ ಮಂಗಳೂರಿನಿಂದ ದುಬೈಗೆ ತೆರಳಿತ್ತು. ವಿಮಾನ ಲ್ಯಾಂಡ್ ಆದ ತಕ್ಷಣ ತಂತ್ರಜ್ಞರು ಪರಿಶೀಲನೆ ನಡೆಸಿದಾಗ ಅದರ ಮುಂದಿನ ಚಕ್ರದಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ಅಧಿಕಾರಿಗಳು ತಿಳಿಸಿದ್ದಾರೆ.
ತಾಂತ್ರಿಕ ದೋಷ ಪತ್ತೆಯಾದ ಬಳಿಕ ಸ್ಪೈಸ್ಜೆಟ್ ಕಂಪನಿ ಪ್ರತಿನಿಧಿಗಳು, ಆ ವಿಮಾನವನ್ನು ಅಲ್ಲಿಯೇ ಬಿಟ್ಟು ಮಧುರೈಗೆ ಬರಲು ಮುಂಬೈನಿಂದ ದುಬೈಗೆ ಇನ್ನೊಂದು ವಿಮಾನವನ್ನು ಕಳುಹಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಳಿಕ ವಿಮಾನಯಾನ ಸಂಸ್ಥೆ ಕೊನೇ ಕ್ಷಣದ ತಾಂತ್ರಿಕ ಸಮಸ್ಯೆಯಿಂದ ವಿಮಾನ ವಿಳಂಬವಾಗಿದೆ ಎಂದು ಪ್ರಯಾಣಿಕರಿಗೆ ಸ್ಪಷ್ಟೀಕರಣ ನೀಡಿತ್ತು.
ಜುಲೈ 2 ರಂದು ಜಬ್ಬಲ್ಪುರಕ್ಕೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನ 5,000 ಅಡಿ ಎತ್ತರದಲ್ಲಿರುವಾಗ ಹೊಗೆ ಕಂಡುಬಂದಿತ್ತು. ಬಳಿಕ ಅದನ್ನು ದೆಹಲಿಯಲ್ಲಿ ಇಳಿಸಲಾಗಿತ್ತು.
ಸ್ಪೈಸ್ಜೆಟ್ ವಿಮಾನಗಳಲ್ಲಿ ಪದೇ ಪದೇ ತಾಂತ್ರಿಕ ದೋಷ ಕಂಡುಬರುತ್ತಿರುವುದರಿಂದ ಭಾರತೀಯ ವಿಮಾನ ಪ್ರಾಧಿಕಾರದಿಂದ ಕಂಪನಿಗೆ ಶೋಕಾಸ್ ನೀಡಲಾಗಿತ್ತು. ಇದು 24 ದಿನಗಳಲ್ಲಿ ವರದಿಯಾಗಿರುವ ಸ್ಪೈಸ್ಜೆಟ್ನ ತಾಂತ್ರಿಕ ದೋಷದ 9ನೇ ಘಟನೆಯಾಗಿದ್ದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.
SpiceJet’s Dubai-Madurai flight was delayed on Monday after the nose wheel of the Boeing B737 Max aircraft malfunctioned, marking the ninth such incident in 24 days.On July 6, the Directorate General of Civil Aviation (DGCA) had issued a show-cause notice to the airlines after it repeated eight incidents since June 19 where flights were affected due to malfunctioning of aircraft.The aviation regulator said that the budget carrier had “failed” to establish safe, efficient and reliable air services.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm