ಬ್ರೇಕಿಂಗ್ ನ್ಯೂಸ್
12-07-22 10:48 pm HK News Desk ದೇಶ - ವಿದೇಶ
ಚೆನ್ನೈ, ಜುಲೈ 12 : ಪ್ರೀತಿ ನಿರಾಕರಿಸಿದ ಕಾರಣಕ್ಕೆ 21 ವರ್ಷದ ಯುವತಿಗೆ ಆಕೆಯ ಪ್ರಿಯಕರನೇ ಚೂರಿಯಿಂದ ಇರಿದ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.
ದಕ್ಷಿಣ ಕೊಯಮತ್ತೂರಿನ ನಿವಾಸಿ 21 ವರ್ಷದ ಶುಭಶ್ರೀ ಇರಿತಕ್ಕೊಳಗಾದ ಯುವತಿ. ಸೇಲಂ ಮೂಲದ ಆರೋಪಿ ದಿನೇಶ್ ಇನ್ಸ್ಟಾಗ್ರಾಮ್ ಮೂಲಕ ಯುವತಿಗೆ ಪರಿಚಯವಾಗಿದ್ದ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಯುವಕ, ಎರಡು ವರ್ಷಗಳಿಂದ ಯುವತಿಯೊಂದಿಗೆ ಸ್ನೇಹದಲ್ಲಿದ್ದ. ಈ ನಡುವೆ, ಯುವತಿಯನ್ನು ಭೇಟಿಯಾಗಲು ದಿನೇಶ್ ಆಗಾಗ ಕೊಯಮತ್ತೂರಿಗೆ ತೆರಳುತ್ತಿದ್ದ. ಇತ್ತೀಚೆಗೆ ಇವರ ನಡುವೆ ವೈಮನಸ್ಸು ಉಂಟಾಗಿತ್ತು. ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಕ್ಕೆ ನಿರಾಕರಿಸಿದ್ದ ಯುವತಿ, ಆತನ ಮೊಬೈಲ್ ನಂಬರ್ ಅನ್ನು ಬ್ಲಾಕ್ ಮಾಡಿದ್ದಳು.
ಆದರೆ ಸೋಮವಾರ ಬೆಳಗ್ಗೆ ಶುಭಶ್ರೀ ಕೆಲಸ ಮಾಡುತ್ತಿದ್ದ ಕಾರು ಶೋರೂಂಗೆ ಆಗಮಿಸಿದ್ದ ದಿನೇಶ್ ಆಕೆಯೊಂದಿಗೆ ಜಗಳವಾಡಿದ್ದಾನೆ. ನಂತರ ಏಕಾಏಕಿ ಜೇಬಿನಿಂದ ಚಾಕುವನ್ನು ತೆಗೆದು ಯುವತಿಯ ಕುತ್ತಿಗೆ, ಭುಜ ಮತ್ತು ಮುಖಕ್ಕೆ ಇರಿದಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದು ಶೋರೂಂನಲ್ಲಿದ್ದ ಇತರ ಸಿಬ್ಬಂದಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದೀಗ ಆರೋಪಿ ವಿರುದ್ಧ ಪೊಲೀಸರು ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಶೋರೂಂನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯುವತಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾಳೆ.
A 21-year-old woman was stabbed by her jilted lover, inside the car showroom in Coimbatore where she worked, on Monday, July 11. The victim is stable and the accused has been arrested.According to a report by The Times of India, the victim, Subasri (21), hails from Kuniyamuthur in South Coimbatore. She had met the accused, Dinesh, from Salem, through Instagaram, and they became friends two years ago. Dinesh reportedly worked as a photographer.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm