ಬ್ರೇಕಿಂಗ್ ನ್ಯೂಸ್
12-07-22 10:48 pm HK News Desk ದೇಶ - ವಿದೇಶ
ಚೆನ್ನೈ, ಜುಲೈ 12 : ಪ್ರೀತಿ ನಿರಾಕರಿಸಿದ ಕಾರಣಕ್ಕೆ 21 ವರ್ಷದ ಯುವತಿಗೆ ಆಕೆಯ ಪ್ರಿಯಕರನೇ ಚೂರಿಯಿಂದ ಇರಿದ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.
ದಕ್ಷಿಣ ಕೊಯಮತ್ತೂರಿನ ನಿವಾಸಿ 21 ವರ್ಷದ ಶುಭಶ್ರೀ ಇರಿತಕ್ಕೊಳಗಾದ ಯುವತಿ. ಸೇಲಂ ಮೂಲದ ಆರೋಪಿ ದಿನೇಶ್ ಇನ್ಸ್ಟಾಗ್ರಾಮ್ ಮೂಲಕ ಯುವತಿಗೆ ಪರಿಚಯವಾಗಿದ್ದ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಯುವಕ, ಎರಡು ವರ್ಷಗಳಿಂದ ಯುವತಿಯೊಂದಿಗೆ ಸ್ನೇಹದಲ್ಲಿದ್ದ. ಈ ನಡುವೆ, ಯುವತಿಯನ್ನು ಭೇಟಿಯಾಗಲು ದಿನೇಶ್ ಆಗಾಗ ಕೊಯಮತ್ತೂರಿಗೆ ತೆರಳುತ್ತಿದ್ದ. ಇತ್ತೀಚೆಗೆ ಇವರ ನಡುವೆ ವೈಮನಸ್ಸು ಉಂಟಾಗಿತ್ತು. ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಕ್ಕೆ ನಿರಾಕರಿಸಿದ್ದ ಯುವತಿ, ಆತನ ಮೊಬೈಲ್ ನಂಬರ್ ಅನ್ನು ಬ್ಲಾಕ್ ಮಾಡಿದ್ದಳು.
ಆದರೆ ಸೋಮವಾರ ಬೆಳಗ್ಗೆ ಶುಭಶ್ರೀ ಕೆಲಸ ಮಾಡುತ್ತಿದ್ದ ಕಾರು ಶೋರೂಂಗೆ ಆಗಮಿಸಿದ್ದ ದಿನೇಶ್ ಆಕೆಯೊಂದಿಗೆ ಜಗಳವಾಡಿದ್ದಾನೆ. ನಂತರ ಏಕಾಏಕಿ ಜೇಬಿನಿಂದ ಚಾಕುವನ್ನು ತೆಗೆದು ಯುವತಿಯ ಕುತ್ತಿಗೆ, ಭುಜ ಮತ್ತು ಮುಖಕ್ಕೆ ಇರಿದಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದು ಶೋರೂಂನಲ್ಲಿದ್ದ ಇತರ ಸಿಬ್ಬಂದಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದೀಗ ಆರೋಪಿ ವಿರುದ್ಧ ಪೊಲೀಸರು ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಶೋರೂಂನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯುವತಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾಳೆ.
A 21-year-old woman was stabbed by her jilted lover, inside the car showroom in Coimbatore where she worked, on Monday, July 11. The victim is stable and the accused has been arrested.According to a report by The Times of India, the victim, Subasri (21), hails from Kuniyamuthur in South Coimbatore. She had met the accused, Dinesh, from Salem, through Instagaram, and they became friends two years ago. Dinesh reportedly worked as a photographer.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm