ಬ್ರೇಕಿಂಗ್ ನ್ಯೂಸ್
12-07-22 10:48 pm HK News Desk ದೇಶ - ವಿದೇಶ
ಚೆನ್ನೈ, ಜುಲೈ 12 : ಪ್ರೀತಿ ನಿರಾಕರಿಸಿದ ಕಾರಣಕ್ಕೆ 21 ವರ್ಷದ ಯುವತಿಗೆ ಆಕೆಯ ಪ್ರಿಯಕರನೇ ಚೂರಿಯಿಂದ ಇರಿದ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.
ದಕ್ಷಿಣ ಕೊಯಮತ್ತೂರಿನ ನಿವಾಸಿ 21 ವರ್ಷದ ಶುಭಶ್ರೀ ಇರಿತಕ್ಕೊಳಗಾದ ಯುವತಿ. ಸೇಲಂ ಮೂಲದ ಆರೋಪಿ ದಿನೇಶ್ ಇನ್ಸ್ಟಾಗ್ರಾಮ್ ಮೂಲಕ ಯುವತಿಗೆ ಪರಿಚಯವಾಗಿದ್ದ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಯುವಕ, ಎರಡು ವರ್ಷಗಳಿಂದ ಯುವತಿಯೊಂದಿಗೆ ಸ್ನೇಹದಲ್ಲಿದ್ದ. ಈ ನಡುವೆ, ಯುವತಿಯನ್ನು ಭೇಟಿಯಾಗಲು ದಿನೇಶ್ ಆಗಾಗ ಕೊಯಮತ್ತೂರಿಗೆ ತೆರಳುತ್ತಿದ್ದ. ಇತ್ತೀಚೆಗೆ ಇವರ ನಡುವೆ ವೈಮನಸ್ಸು ಉಂಟಾಗಿತ್ತು. ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಕ್ಕೆ ನಿರಾಕರಿಸಿದ್ದ ಯುವತಿ, ಆತನ ಮೊಬೈಲ್ ನಂಬರ್ ಅನ್ನು ಬ್ಲಾಕ್ ಮಾಡಿದ್ದಳು.
ಆದರೆ ಸೋಮವಾರ ಬೆಳಗ್ಗೆ ಶುಭಶ್ರೀ ಕೆಲಸ ಮಾಡುತ್ತಿದ್ದ ಕಾರು ಶೋರೂಂಗೆ ಆಗಮಿಸಿದ್ದ ದಿನೇಶ್ ಆಕೆಯೊಂದಿಗೆ ಜಗಳವಾಡಿದ್ದಾನೆ. ನಂತರ ಏಕಾಏಕಿ ಜೇಬಿನಿಂದ ಚಾಕುವನ್ನು ತೆಗೆದು ಯುವತಿಯ ಕುತ್ತಿಗೆ, ಭುಜ ಮತ್ತು ಮುಖಕ್ಕೆ ಇರಿದಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದು ಶೋರೂಂನಲ್ಲಿದ್ದ ಇತರ ಸಿಬ್ಬಂದಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದೀಗ ಆರೋಪಿ ವಿರುದ್ಧ ಪೊಲೀಸರು ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಶೋರೂಂನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯುವತಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾಳೆ.
A 21-year-old woman was stabbed by her jilted lover, inside the car showroom in Coimbatore where she worked, on Monday, July 11. The victim is stable and the accused has been arrested.According to a report by The Times of India, the victim, Subasri (21), hails from Kuniyamuthur in South Coimbatore. She had met the accused, Dinesh, from Salem, through Instagaram, and they became friends two years ago. Dinesh reportedly worked as a photographer.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm