ಬ್ರೇಕಿಂಗ್ ನ್ಯೂಸ್
13-07-22 02:20 pm HK News Desk ದೇಶ - ವಿದೇಶ
ಕೊಲಂಬೋ, ಜುಲೈ 13: ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ದೇಶಾದ್ಯಂತ ಜನರು ಬೀದಿಗಿಳಿದು ಪ್ರತಿಭಟನೆ ಆರಂಭಿಸಿರುವಾಗಲೇ ಅಧ್ಯಕ್ಷ ಗೊಟಬಾಯ ರಾಜಪಕ್ಷ ರಾಜಿನಾಮೆ ನೀಡುವ ಬದಲು ಸದ್ದಿಲ್ಲದೆ ಮಾಲ್ದೀವ್ಸ್ ದೇಶಕ್ಕೆ ಪರಾರಿಯಾಗಿದ್ದಾರೆ. ತನ್ನ ಪತ್ನಿ ಮತ್ತು ಇಬ್ಬರು ಬಾಡಿ ಗಾರ್ಡ್ ಗಳನ್ನು ಇಟ್ಟುಕೊಂಡು ಬುಧವಾರ ಬೆಳಗ್ಗೆ ಮಾಲ್ದೀವ್ಸ್ ರಾಜಧಾನಿ ಮಾಲೆಗೆ ತೆರಳಿದ್ದಾರೆ.
ಇದೇ ವೇಳೆ, ಸಾವಿರಾರು ಉದ್ರಿಕ್ತರು ಪ್ರಧಾನಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಅಧ್ಯಕ್ಷ ಗೊಟಬಾಯ ಮಾಲ್ದೀವ್ಸ್ ಪರಾರಿಯಾಗುತ್ತಲೇ ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿಯನ್ನು ಹಂಗಾಮಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ಘೋಷಿಸಿದ್ದಾರೆ. ಗೊಟಬಾಯ ಪಲಾಯನ ಮಾಡಿರುವುದರಿಂದ ರನಿಲ್ ವಿಕ್ರಮಸಿಂಘೆ ಅವರೇ ಹಂಗಾಮಿ ಅಧ್ಯಕ್ಷರಾಗಲಿದ್ದಾರೆ ಎಂದು ಸಂಸತ್ತಿನ ಸ್ಪೀಕರ್ ನೇಮಕ ಮಾಡಿದ್ದಾರೆ. ಪ್ರಧಾನಿ ಕಚೇರಿಗೆ ಮುತ್ತಿಗೆ ಹಾಕಿರುವ ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಕೂಡ ಅಧ್ಯಕ್ಷರ ಜೊತೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಪೊಲೀಸರು ಜಲಫಿರಂಗಿ, ಅಶ್ರುವಾಯು ಸಿಡಿಸಿ ಜನರನ್ನು ಚದುರಿಸಲು ಯತ್ನಿಸುತ್ತಿದ್ದಾರೆ.
ಇದಕ್ಕೂ ಮುನ್ನ ಕೊಲಂಬೋ ವಿಮಾನ ನಿಲ್ದಾಣದಿಂದ ದುಬೈಗೆ ಹಾರಲು ಅಧ್ಯಕ್ಷ ಗೊಟಬಾಯ ರಾಜಪಕ್ಷ ಯತ್ನಿಸಿದ್ದರು. ಕಮರ್ಶಿಯಲ್ ವಿಮಾನದ ಮೂಲಕ ತೆರಳಲು ಅವಕಾಶ ಸಿಗದ ಕಾರಣ ಇತರೇ ಸಾರ್ವಜನಿಕ ವಿಮಾನದಲ್ಲಿಯೇ ತೆರಳುವಂತೆ ಸೂಚಿಸಲಾಗಿತ್ತು. ಆದರೆ, ಸರದಿಯಲ್ಲಿ ನಿಂತು ವಿಮಾನದ ಟಿಕೆಟ್ ಪಡೆಯಬೇಕಿದ್ದರಿಂದ ಸಾಧ್ಯವಾಗಲಿಲ್ಲ. ಹೀಗಾಗಿ ಮಾಲ್ದೀವ್ಸ್ ತೆರಳುವ ವಿಮಾನದ ಮೂಲಕ ತೆರಳಿದ್ದು, ಅಲ್ಲಿ ಮಾಲೆ ದ್ವೀಪದಲ್ಲಿ ನಿಗೂಢ ಜಾಗಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಮಹಿಂದಾ ರಾಜಪಕ್ಸ, ಗೊಟಬಾಯ ರಾಜಪಕ್ಸ ಸೇರಿದಂತೆ ರಾಜಪಕ್ಸ ಕುಟುಂಬಸ್ಥರು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿ, ದೇಶದ ಸ್ಥಿತಿಯನ್ನು ಅಧೋಗತಿಗೆ ತಂದಿದ್ದಾರೆ ಎನ್ನುವ ಆರೋಪವನ್ನು ಜನರು ಮಾಡುತ್ತಿದ್ದಾರೆ.
#WATCH Sound of gunshots fired in the air heard as protesters gather outside Sri Lankan PM's residence in Colombo pic.twitter.com/mB3oBBCHJQ
— ANI (@ANI) July 13, 2022
Sri Lanka declared a state of emergency Wednesday as thousands of people mobbed the prime minister’s office after the country’s president flew to the Maldives, following months of widespread protests against an economic crisis. President Gotabaya Rajapaksa had promised at the weekend to resign on Wednesday and clear the way for a “peaceful transition of power” after fleeing his official residence in Colombo just before tens of thousands of protesters overran it.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm