ಬ್ರೇಕಿಂಗ್ ನ್ಯೂಸ್
13-07-22 10:08 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 13 : ರಾಮಾಯಣದಲ್ಲಿ ಸೀತೆಯನ್ನು ಲಂಕಾದಿಂದ ಕರೆತರಲು ವಾನರಸೇನೆ ಸಮುದ್ರಕ್ಕೆ ಸೇತುವೆ ಕಟ್ಟಿದ್ದು ಅದೇ ರಾಮಸೇತು ಎನ್ನುವುದು ಭಾರತೀಯ ಹಿಂದು ಪರಂಪರೆ ನಂಬಿಕೊಂಡು ಬಂದ ಪ್ರತೀತಿ. ಆದರೆ ಈ ರಾಮಸೇತುವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕೆಂಬ ಒತ್ತಾಯದ ಕೂಗು ಮೊದಲಿನಿಂದಲೂ ಇತ್ತು. ಈ ಬಗ್ಗೆ ಯುಪಿಎ ಸರಕಾರ ಇದ್ದಾಗ ಪರ- ವಿರೋಧ ಚರ್ಚೆ, ಕೋರ್ಟಿನಲ್ಲಿ ಜಟಾಪಟಿಯೂ ನಡೆದಿತ್ತು. ಇದೀಗ ಈ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು ಜುಲೈ 26ರಂದು ವಿಚಾರಣೆ ಕೈಗೆತ್ತಿಕೊಳ್ಳಲಿದೆ ಎನ್ನುವ ಸುದ್ದಿ ಹೊರಬಿದ್ದಿದೆ. ಹೀಗಾಗಿ ರಾಮಸೇತು ಕುರಿತ ನಿರೀಕ್ಷೆ ಮತ್ತೆ ಗರಿಗೆದರಿದೆ.
ಈ ಹಿಂದೆ ಯುಪಿಎ ಸರ್ಕಾರದ ಮೊದಲ ಅವಧಿಯಲ್ಲಿ ವಿವಾದಾತ್ಮಕ 'ಸೇತುಸಮುದ್ರಂ ಶಿಪ್ ಚಾನೆಲ್ ಪ್ರಾಜೆಕ್ಟ್' ಅಂದರೆ ಸೇತುಸಮುದ್ರಂ ನೌಕಾ ಕಾಲುವೆ ಯೋಜನೆ ಘೋಷಿಸಲಾಗಿತ್ತು. ಅದರ ಪ್ರಕಾರ ಆ ದಾರಿಯಲ್ಲಿ ಹಡಗು ತೆರಳುವುದಕ್ಕಾಗಿ ಲಂಕಾ ಮತ್ತು ಕನ್ಯಾಕುಮಾರಿ ನಡುವಿನ ರಾಮಸೇತು ಒಡೆಯಲು ಭಾರತ ಸರಕಾರ ಮುಂದಾಗಿತ್ತು. ಅಡ್ಡಲಾಗಿ ಸೇತುವೆ ಇರುವುದರಿಂದ ಅಲ್ಲಿಂದ ಹಡಗು ತೆರಳಲು ಸಾಧ್ಯವಾಗುತ್ತಿಲ್ಲ.

ಆದರೆ ಆಗಿನ ಕೇಂದ್ರ ಸರಕಾರದ ನಡೆಯ ವಿರುದ್ದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸುಪ್ರೀಂ ಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದ್ದರು. ರಾಮಸೇತುವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು, ಅದನ್ನು ಒಡೆಯಲು ಅವಕಾಶ ನೀಡಬಾರದು ಎಂದು ಸುಬ್ರಮಣ್ಯನ್ ಸ್ವಾಮಿ ಅರ್ಜಿಯಲ್ಲಿ ಒತ್ತಾಯಿಸಿದ್ದರು. ಅಲ್ಲದೆ, 'ರಾಮಸೇತು'ವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅರ್ಜಿಯನ್ನು ಈವರೆಗೂ ವಿಚಾರಣೆಗೆ ಪರಿಗಣಿಸದೆ ಉಳಿಸಿಕೊಂಡಿದ್ದ ಸುಪ್ರೀಂ ಕೋರ್ಟ್ ಇದೀಗ ಜುಲೈ 26 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ. ಈ ಸಮಸ್ಯೆಯು ದೀರ್ಘಕಾಲದಿಂದ ಬಾಕಿ ಉಳಿದಿದೆ ಮತ್ತು ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಸುಬ್ರಹ್ಮಣ್ಯನ್ ಸ್ವಾಮಿ ಇತ್ತೀಚೆಗೆ ಮತ್ತೆ ಅರ್ಜಿ ಸಲ್ಲಿಸಿದ ನಂತರ, ಪೀಠವು ಜುಲೈ 26 ರಂದು ವಿಚಾರಣೆ ಆರಂಭಿಸುವುದಾಗಿ ಹೇಳಿದೆ.

ರಾಮಸೇತುವಿನ ಅಸ್ತಿತ್ವದ ಕುರಿತು ಕೇಂದ್ರ ಒಪ್ಪಿರುವುದರಿಂದ ಮೊಕದ್ದಮೆಯ ಮೊದಲ ಸುತ್ತಿನಲ್ಲಿ ನಾನು ಗೆದ್ದಿದ್ದೇನೆ. ರಾಷ್ಟ್ರೀಯ ಸ್ಮಾರಕವೆಂದು ರಾಮಸೇತುವನ್ನು ಘೋಷಿಸುವ ಸಲುವಾಗಿ ಮತ್ತು ನನ್ನ ಬೇಡಿಕೆಯನ್ನು ಪರಿಶೀಲಿಸುವ ಸಲುವಾಗಿ ಕೇಂದ್ರ ಸಚಿವರು 2017 ರಲ್ಲಿ ಸಭೆ ಕರೆದಿದ್ದರು. ಆದರೆ ಆಬಳಿಕ ಈ ಕುರಿತು ಯಾವುದೇ ಪ್ರಗತಿಯಾಗಿರಲಿಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಮಾನವ ನಿರ್ಮಿತ ಎನ್ನುವುದಕ್ಕೆ ಪುರಾವೆ !

ಭಾರತ ಮತ್ತು ಶ್ರೀಲಂಕಾ ನಡುವೆ ಇರುವ ರಾಮಸೇತು ನೈಸರ್ಗಿಕವಲ್ಲ. ಅದು ಮಾನವ ನಿರ್ಮಿತ ಎನ್ನುವುದಕ್ಕೆ ಸಾಕಷ್ಟು ವೈಜ್ಞಾನಿಕ ಪುರಾವೆಗಳಿವೆ ಎಂದು ಡಿಸ್ಕವರಿ ಚಾನೆಲ್ ಈ ಹಿಂದೆ ವರದಿ ಮಾಡಿತ್ತು. ಎರಡು ಭೂಭಾಗಗಳ ನಡುವೆ ನೈಸರ್ಗಿಕವಾದ ಮರಳು ಮತ್ತು ಸೀಮೆ ಸುಣ್ಣದ ದಿಬ್ಬ ಇದೆ. ಈ ಮರಳು ದಿಬ್ಬದ ಮೇಲೆ ಅದಕ್ಕೂ ಹಳೆಯದಾದ ಬಂಡೆಗಳಿವೆ ಎಂದು ಅಮೆರಿಕದ ವಿಜ್ಞಾನಿಗಳು ಹೇಳಿದ್ದರು. ಈ ಬಂಡೆಗಳು ಸುಮಾರು 7 ಸಾವಿರ ವರ್ಷದಷ್ಟು ಹಳೆಯವು. ಆದರೆ, ಅದರ ಅಡಿಯಲ್ಲಿರುವ ಮರಳ ರಾಶಿ 4 ಸಾವಿರ ವರ್ಷಗಳಷ್ಟು ಹಿಂದಿನದ್ದು ಎಂದು ಅಮೆರಿಕದ ವಿಜ್ಞಾನಿಗಳು ಹೇಳಿದ್ದರು. ಹೀಗಾಗಿ ರಾಮಾಯಣ, ರಾಮಸೇತು ಬಗ್ಗೆ ಭಾರೀ ಕುತೂಹಲ ಉಂಟಾಗಿತ್ತು.
The SC will consider the question of recognising the Ram Setu as India's national heritage. It's a chain of shoals between Pamban Island (Rameswaram Island), off the south-eastern coast of India, and Mannar Island, off the north-western coast of Sri Lanka.The apex court will hear the petition seeking a direction to the Centre to declare the "Ram Setu" as a national heritage monument.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm