ಬ್ರೇಕಿಂಗ್ ನ್ಯೂಸ್
14-07-22 09:59 pm HK News Desk ದೇಶ - ವಿದೇಶ
ಪಟಿಯಾಲ, ಜುಲೈ 14: ಪಂಜಾಬಿ ಗಾಯಕ ದಲೇರ್ ಮೆಹಂದಿಗೆ ಪಟಿಯಾಲ ನ್ಯಾಯಾಲಯ ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಾನವ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ದಲೇರ್ ಮೆಹಂದಿ ದೋಷಿ ಎಂದು ಸಾಬೀತಾಗಿದ್ದು, ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ.
2003ರಲ್ಲಿ ದಲೇರ್ ಮೆಹಂದಿ ಮತ್ತು ಆತನ ಸಹೋದರ ಶಂಷೇರ್ ಸಿಂಗ್ ವಿರುದ್ಧ ಒಟ್ಟು 31 ಪ್ರಕರಣಗಳು ದಾಖಲಾಗಿತ್ತು.ನ್ಯಾಯಾಲಯದಲ್ಲಿ ಹಾಜರಾಗಿದ್ದ ಮೆಹಂದಿಯನ್ನು ಅಲ್ಲಿಂದಲೇ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ದಲೇರ್ ಮೆಹಂದಿ ಮತ್ತು ಆತನ ಸಹೋದರ ಶಂಷೇರ್ ಸಿಂಗ್ ತಮ್ಮ ತಂಡದ ಜನರು ಎಂದು ಹೇಳಿ ಅಕ್ರಮವಾಗಿ ಜನರನ್ನು ವಿದೇಶಕ್ಕೆ ಕರೆದೊಯ್ಯುತ್ತಿದ್ದರು. ಇದಕ್ಕಾಗಿ ಅವರು ಭಾರೀ ಹಣವನ್ನೂ ಪಡೆಯುತ್ತಿದ್ದರು. 2018ರಲ್ಲಿ ಜ್ಯುಡಿಷಿಯಲ್ ಮೆಜಿಸ್ಟ್ರೇಟ್ ಫಸ್ಟ್ ಕ್ಲಾಸ್ ಕೋರ್ಟ್ ಇವರಿಬ್ಬರನ್ನು ದೋಷಿ ಎಂದು ಹೇಳಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಾದ ನಂತರ ಜಾಮೀನು ಪಡೆದು ಹೊರಬಂದ ಇವರು ಸೆಷನ್ಸ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಗುರುವಾರ ಅಡಿಷನಲ್ ಸೆಷನ್ಸ್ ನ್ಯಾಯಮೂರ್ತಿ ಎಚ್ಎಸ್ ಗ್ರೆವಾಲ್ ಜಾಮೀನು ಅರ್ಜಿಯನ್ನು ತಳ್ಳಿದ್ದು ಮೆಹಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

2003ರಲ್ಲಿ ಸರ್ದಾರ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಪ್ರಕಾರ ಮೆಹಂದಿ ಸಹೋದರರು 1998 ಮತ್ತು 1999ರಲ್ಲಿ ಎರಡು ತಂಡವನ್ನು ವಿದೇಶಕ್ಕೆ ಕರೆದುಕೊಂಡು ಹೋಗಿದ್ದು, ಅದರಲ್ಲಿ 10 ಮಂದಿಯನ್ನು ಅಮೆರಿಕದಲ್ಲಿ ಅಕ್ರಮವಾಗಿ ಬಿಟ್ಟು ಬಂದಿದ್ದಾರೆ.ಈ ಎಫ್ಐಆರ್ ದಾಖಲಾದ ನಂತರ ಇಬ್ಬರು ಸಹೋದರರ ಮೇಲೆ 35ಕ್ಕಿಂತಲೂ ಹೆಚ್ಚು ದೂರುಗಳು ದಾಖಲಾಗಿತ್ತು.

ಮೂರು ವರ್ಷಗಳ ನಂತರ ಸ್ಥಳೀಯ ಪೊಲೀಸರು ಸ್ಥಳೀಯ ನ್ಯಾಯಾಲಯದಲ್ಲಿ ದಲೇರ್ ಮೆಹಂದಿ ನಿರ್ದೋಷಿ ಎಂದು ಅರ್ಜಿ ಸಲ್ಲಿಸಿದ್ದರು. ಆದರೆ ದಲೇರ್ ವಿರುದ್ದ ಸಾಕಷ್ಟು ಸಾಕ್ಷ್ಯಗಳಿವೆ, ಅವರನ್ನು ಬಿಡುಗಡೆ ಮಾಡಲು ಆಗಲ್ಲ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಬೇಕು ಎಂದು ಆದೇಶಿಸಿತ್ತು.
Popular Punjabi singer Daler Mehndi was sent to jail on Thursday evening after the Patiala district court upheld a lower court’s order of jail term for him in a 2003 case of human trafficking.The singer was sent to Patiala Central Jail after the additional district and session judge H S Grewal dismissed the singer’s appeal against conviction and upheld the decision of the lower court that had held him guilty of cheating (section 420) and criminal conspiracy (section 120 B) of the Indian penal code (IPC) in 2018 in the 2003 case of human trafficking.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am