ಬ್ರೇಕಿಂಗ್ ನ್ಯೂಸ್
            
                        16-07-22 12:31 pm HK News Desk ದೇಶ - ವಿದೇಶ
            ಸಿನಾಲೋವಾ ಜು.16: ಬ್ಲ್ಯಾಕ್ ಹಾಕ್ ಮಿಲಿಟರಿ ಹೆಲಿಕಾಪ್ಟರ್ ಪತನಗೊಂಡು 14 ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡ ಘಟನೆ ಮೆಕ್ಸಿಕೋದ ಸಿನಾಲೋವಾದಲ್ಲಿ ನಡೆದಿದೆ.
ಅಪಘಾತದ ಕಾರಣವನ್ನು ತನಿಖೆ ಮಾಡಲಾಗುತ್ತಿದೆ. ಆದರೆ ಈ ಘಟನೆಗೂ ಶುಕ್ರವಾರ ಸಿನಾಲೋವಾದ ಮತ್ತೊಂದು ಭಾಗದಲ್ಲಿ ಡ್ರಗ್ ಲಾರ್ಡ್ ರಾಫೆಲ್ ಕ್ಯಾರೊ ಕ್ವಿಂಟೆರೊನನ್ನು ಬಂಧಿಸಿದ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.


1985 ರಲ್ಲಿ ಆಂಟಿ-ನಾರ್ಕೋಟಿಕ್ ಏಜೆಂಟ್ನ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಕುಖ್ಯಾತ ಡ್ರಗ್ ಲಾರ್ಡ್ ರಾಫೆಲ್ ಕ್ಯಾರೊ ಕ್ವಿಂಟೆರೊನನ್ನು ನೌಕಾಪಡೆಯು ಶುಕ್ರವಾರ ಬಂಧಿಸಿತ್ತು.

1980 ರ ದಶಕದಲ್ಲಿ ಲ್ಯಾಟಿನ್ ಅಮೆರಿಕದ ಅತ್ಯಂತ ಶಕ್ತಿಶಾಲಿ ಮಾದಕವಸ್ತು ಕಳ್ಳಸಾಗಣೆ ಸಂಸ್ಥೆಗಳಲ್ಲಿ ಒಂದಾದ ಗ್ವಾಡಲಜರಾ ಕಾರ್ಟೆಲ್ನ ಸಹ-ಸಂಸ್ಥಾಪಕನಾಗಿದ್ದ ರಾಫೆಲ್ ಕ್ಯಾರೋ ಕ್ವಿಂಟೊರೊ ಅಮೆರಿಕದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿದ್ದ.


ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿರುವ ನೌಕಾಪಡೆ, ವಿಮಾನ ಅಪಘಾತಕ್ಕೂ ಮಾದಕವಸ್ತು ಕಳ್ಳಸಾಗಣೆದಾರನ ಬಂಧನಕ್ಕೂ ಸಂಬಂಧ ಇರುವ ಬಗ್ಗೆ ಈವರೆಗೆ ಮಾಹಿತಿ ಸಿಕ್ಕಿಲ್ಲ ಎಂದು ಹೇಳಿದೆ.

ಹಲವು ವರ್ಷಗಳಿಂದ ಪರಾರಿಯಾಗಿದ್ದ ಡ್ರಗ್ಸ್ ಸಾಗಣೆದಾರ ಕ್ಯಾರೊ ಕ್ವಿಂಟೆರೊ, ಸಿನಾಲೋವಾದ ಚೊಯಿಕ್ಸ್ ಪಟ್ಟಣದಲ್ಲಿ ಅಡಗಿಕೊಂಡಿದ್ದ. ಸ್ನಿಫರ್ ನಾಯಿಯಿಂದ ಆತನನ್ನು ಪತ್ತೆಮಾಡಲಾಯಿತು ಎಂದು ನೌಕಾಪಡೆ ತಿಳಿಸಿದೆ.
            
            
            Fourteen people were killed when a military helicopter crashed on Friday in northwestern Mexico, the navy said. "A Black Hawk helicopter was involved in an accident, the cause of which is unknown at this time," a statement said.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm