ಬ್ರೇಕಿಂಗ್ ನ್ಯೂಸ್
            
                        17-07-22 11:10 pm HK News Desk ದೇಶ - ವಿದೇಶ
            ನವದೆಹಲಿ, ಜುಲೈ 17 : ಜುಲೈ 18 ರಿಂದ ದಿನಬಳಕೆಯ ವಿವಿಧ ವಸ್ತಗಳು ಮತ್ತು ಹಲವು ಅವಶ್ಯಕ ಸೇವೆಗಳ ಮೇಲೆ ಜಿ ಎಸ್ಟಿ ತೆರಿಗೆ ವಿಧಿಸಲು ಕೇಂದ್ರ ಸರಕಾರ ಮುಂದಾಗಿದೆ. ಆಹಾರ ಪದಾರ್ಥಗಳಿಂದ ಹಿಡಿದು ಬಟ್ಟೆ ಬರೆಗಳ ಮೇಲೂ ಹೆಚ್ಚುವರಿ ಜಿ ಎಸ್ ಟಿ ವಿಧಿಸಲಾಗ್ತದೆ. ಹೀಗಾಗಿ ಜನಸಾಮಾನ್ಯರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ.
ಪ್ಯಾಕ್ ಮಾಡಿದ ಮೀನು, ಮಾಂಸ, ಮೊಸರು, ಜೇನುತುಪ್ಪ, ಬೆಲ್ಲ, ಒಣಗಿಸಿದ ತರಕಾರಿ, ಗೋಧಿ, ಇತರೆ ಧಾನ್ಯಗಳು, ಮಂಡಕ್ಕಿ, ಸಾವಯವ ಗೊಬ್ಬರ, ಪ್ಯಾಕ್ ಮಾಡಿದ ಬ್ರಾಂಡೆಡ್ ಭೂಪಟ, ಚಾರ್ಟ್ , ಅಟ್ಲಾಸ್ , ಸೋಲಾರ್ ವಾಟರ್ ಹೀಟರ್, ಮುದ್ರಣ, ಬರ ಚಿತ್ರಕಲೆಯ ಇಂಕ್, ಎಲ್ ಇಡಿ ಬಲ್ಬ್, ಎಲ್ ಇಡಿ ಲ್ಯಾಪ್ ಟಾಪ್ ದರ ಹೆಚ್ಚಲಿದೆ.
ಚರ್ಮದ ಸಿದ್ಧ ಉತ್ಪನ್ನಗಳು, ಟೈಲರಿಂಗ್ , ಜವಳಿ ಸೇವೆಗಳು, ಅಂಚೆ ಇಲಾಖೆ, ಬುಕ್ ಪೋಸ್ಟ್, 10 ಗ್ರಾಂಗಿಂತ ಕಡಿಮೆ ಇರುವ ಲಕೋಟೆ, ಚೆಕ್ ಬುಕ್, ನಿತ್ಯದ ಬಾಡಿಗೆ 1000 ರೂ.ಗಿಂತ ಕಡಿಮೆ ಇರುವ ಹೋಟೆಲ್ ಕೊಠಡಿಗಳಿಗೂ ಇನ್ನು ಶೇ.12ರಷ್ಟು ತೆರಿಗೆ ಜಾರಿ.
- ದಿನಕ್ಕೆ 5000 ರು.ಗಿಂತ ಹೆಚ್ಚಿನ ಬಾಡಿಗೆ ವಿಧಿಸುವ ಸಾರ್ವಜನಿಕ ಧಾರ್ಮಿಕ ಕೇಂದ್ರಗಳು, ಮಾಸಿಕ 2500 ರು.ಗಿಂತ ಹೆಚ್ಚಿನ ಬಾಡಿಗೆ ಇರುವ ವಾಣಿಜ್ಯ ಮಳಿಗೆಗಳಿಗೂ ಜಿ ಎಸ್ ಟಿ ಜಾರಿಯಾಗಲಿದೆ. ವಸತಿ ಉದ್ದೇಶಕ್ಕಾಗಿ ಉದ್ಯಮ ಸಂಸ್ಥೆಗಳು, ವಸತಿ ಕಟ್ಟಡಗಳನ್ನು ಬಾಡಿಗೆಗಾಗಿ ನೀಡಿದ್ದರೆ ಅದಕ್ಕೆ ಈವರೆಗೆ ಇದ್ದ ವಿನಾಯಿತಿ ರದ್ದಾಗಲಿದೆ.
ಬ್ಲಡ್ ಬ್ಯಾಂಕ್ಗಳಿಗೆ ನೀಡಲಾಗಿದ್ದ ತೆರಿಗೆ ವಿನಾಯ್ತಿಯೂ ರದ್ದುಪಡಿಸಲಾಗಿದೆ. ಈಗಾಗಲೇ ಪ್ರತಿ ವಸ್ತುವಿನ ಬೆಲೆ ದುಬಾರಿಯಾಗಿದೆ. ಇನ್ನು ಸೋಮವಾರದಿಂದ ಎಲ್ಲ ವಸ್ತುಗಳ ಬೆಲೆ ಇನ್ನಷ್ಟು ಗಗನಕ್ಕೇರಲಿದೆ. ಹೀಗಾಗಿ ಜನರು ಕಂಗಾಲಾಗಿದ್ದು, ಅಸಾಮಾಧಾನ ಹೊರಹಾಕ್ತಿದ್ದಾರೆ.
            
            
            From next week, several household items including hotels and bank services among other things, will get costlier after the GST rates were hiked for several items in the 47th Goods and Services Tax meeting in Chandigarh last month. The GST rate hike on these items will be implemented from Monday, July 18, after which the common man will have to pay extra to buy day to day items, further increasing their kitchen budget. Products like curd, lassi, buttermilk, paneer, wheat, rice etc which are pre-packaged and labelled, will attract a GST of 5% from 18 July.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm