ಬ್ರೇಕಿಂಗ್ ನ್ಯೂಸ್
18-07-22 12:31 pm HK News Desk ದೇಶ - ವಿದೇಶ
ಭೂಪಾಲ್, ಜುಲೈ 18: ಮಹಾರಾಷ್ಟ್ರ ಸರ್ಕಾರದ ರಾಜ್ಯ ರಸ್ತೆ ಸಾರಿಗೆ ಬಸ್ಸು ಮಧ್ಯಪ್ರದೇಶದ ಧರ್ ಎಂಬಲ್ಲಿ ನರ್ಮದಾ ನದಿಗೆ ಉರುಳಿ, 13 ಮಂದಿ ಮೃತಪಟ್ಟ ಘಟನೆ ನಡೆದಿದೆ.
ಮಧ್ಯಪ್ರದೇಶದ ಧರ್ ಜಿಲ್ಲೆಯಲ್ಲಿ ನರ್ಮದಾ ನದಿಯ ಸೇತುವೆ ಮೇಲೆ ಬಸ್ ಸಂಚರಿಸುತ್ತಿದ್ದಾಗ ನದಿಗೆ ಉರುಳಿತು. ಸುಮಾರು 100 ಅಡಿ ಎತ್ತರದಿಂದ ಬಸ್ಸು ನದಿಗೆ ಬಿದ್ದಿದೆ. ನದಿಯಲ್ಲಿ ಪ್ರವಾಹದ ಸೆಳೆತ ಹೆಚ್ಚಾಗಿದ್ದ ಕಾರಣ 9 ಶವಗಳು ಕೊಚ್ಚಿ ಹೋಗಿವೆ. ಧಮ್ನೊದ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 15 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.

![]()
ಅಪಘಾತದಲ್ಲಿ ಮೃತಪಟ್ಟಿರುವವರ ನಿಖರ ಸಂಖ್ಯೆ ನಮಗೆ ತಿಳಿದಿಲ್ಲ. ಬಸ್ಸು ಪೂರ್ಣ ಪ್ರಮಾಣದಲ್ಲಿ ನದಿಯಲ್ಲಿ ಮುಳುಗಿತ್ತು. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಸೆಳೆತ ತೀವ್ರವಾಗಿದೆ. ಬಹುತೇಕ ಪ್ರಯಾಣಿಕರು ಮೃತಪಟ್ಟಿರಬಹುದು ಎಂದು ಪೊಲೀಸ್ ಅಧಿಕಾರಿ ರಾಜ್ಕುಮಾರ್ ಯಾದವ್ ತಿಳಿಸಿದ್ದಾರೆ.

ಈ ಬಸ್ಸು ಮಹಾರಾಷ್ಟ್ರದ ಇಂದೋರ್ನಿಂದ ಪುಣೆಗೆ ತೆರಳುತ್ತಿತ್ತು. ಈ ವೇಳೆ ಸೇತುವೆಯ ತಡೆಗೋಡೆಗೆ ಗುದ್ದಿ ನದಿಗೆ ಉರುಳಿದೆ. ಬಸ್ಸನ್ನು ಮೇಲೆತ್ತಲು ಕ್ರೇನ್ ಸೇರಿದಂತೆ ಅಗತ್ಯ ಯಂತ್ರೋಪಕರಣಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ಧಾವಿಸಿದೆ. ಸ್ಥಳೀಯ ಮೀನುಗಾರರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಇಂದೋರ್ ಮತ್ತು ಧರ್ ನಗರಗಳಿಂದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
Thirteen people have died after a Maharashtra government bus plunged into river Narmada in Madhya Pradesh today. 15 have been rescued. The bus, which was headed to Pune from Indore, skidded off a slippery road and fell into the river after breaking the railing off a bridge in Khalghat area of Madhya Pradesh's Dhar district on the Agra-Mumbai Highway.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm