ಬ್ರೇಕಿಂಗ್ ನ್ಯೂಸ್
22-07-22 09:09 pm HK News Desk ದೇಶ - ವಿದೇಶ
ತಿರುವನಂತಪುರಂ, ಜುಲೈ 22: ಕೇರಳದಲ್ಲಿ ಮೂರನೇ ಮಂಕಿ ಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಜುಲೈ 6ರಂದು ದುಬೈನಿಂದ ಮಲಪ್ಪುರಂ ಜಿಲ್ಲೆಗೆ ಬಂದಿದ್ದ ವ್ಯಕ್ತಿಗೆ ಮಂಕಿ ಪಾಕ್ಸ್ ಲಕ್ಷಣ ಕಾಣಿಸಿಕೊಂಡಿದ್ದು, ಶಂಕೆಯ ಮೇರೆಗೆ ತಪಾಸಣೆ ನಡೆಸಿದಾಗ ರೋಗ ಇರುವುದು ದೃಢಪಟ್ಟಿದೆ.
ಜುಲೈ 6ರಂದು ಮಲಪ್ಪುರಂಗೆ ಬಂದಿದ್ದ 35 ವರ್ಷದ ವ್ಯಕ್ತಿಯಲ್ಲಿ ಜುಲೈ 13ರಂದು ಜ್ವರದ ಲಕ್ಷಣಗಳಿದ್ದವು. ಜುಲೈ 15ರಂದು ಮಂಕಿ ಪಾಕ್ಸ್ ಲಕ್ಷಣ ಕಾಣಿಸಿಕೊಂಡಿತ್ತು. ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ಮಂಜೇರಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ವ್ಯಕ್ತಿಯ ಪ್ರಾಥಮಿಕ ಸೋಂಕಿತರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಕಳೆದ ವಾರ ಕೇರಳದಲ್ಲಿ ಇಬ್ಬರಿಗೆ ಮಂಕಿ ಪಾಕ್ಸ್ ಕಂಡುಬಂದಿತ್ತು. ಅವರ ಸ್ಥಿತಿಯೂ ಸ್ಥಿರವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎನ್ನುವ ಮಾಹಿತಿಗಳಿವೆ. ಜುಲೈ 14ರಂದು ದೇಶದಲ್ಲಿ ಮೊದಲ ಬಾರಿಗೆ ಕೇರಳದಲ್ಲಿ ಮಂಕಿ ಪಾಕ್ಸ್ ಕಂಡುಬಂದಿತ್ತು. ಕೇರಳದಲ್ಲಿ ಮೂರನೇ ಪ್ರಕರಣ ಪತ್ತೆಯಾಗಿರುವುದರಿಂದ 14 ಜಿಲ್ಲೆಗಳಲ್ಲಿಯೂ ಆರೋಗ್ಯ ಇಲಾಖೆಯಿಂದ ಹೈ ಎಲರ್ಟ್ ಮಾಡಲಾಗಿದೆ. ಇದೇ ವೇಳೆ, ಕೇಂದ್ರದಿಂದ ಉನ್ನತ ಮಟ್ಟದ ಆರೋಗ್ಯ ತಂಡವನ್ನು ರಾಜ್ಯಕ್ಕೆ ಕಳುಹಿಸಲಾಗಿದ್ದು, ರೋಗ ಎದುರಿಸಲು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸೂಚನೆ ನೀಡಲಾಗಿದೆ.
ಸೋಂಕಿತ ಮನುಷ್ಯ ಅಥವಾ ಪ್ರಾಣಿಯಿಂದ ಹರಡುವ ವೈರಸ್ ಇದಾಗಿದ್ದು, ಸೋಂಕು ಆದ 10 ದಿನಗಳ ಬಳಿಕ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಸೋಂಕಿತನ ಬಾಯಿ ನೀರು, ಆತನ ಜೊತೆಗೆ ಇರುವುದು, ಜೊತೆಗೆ ಮಲಗುವುದು, ಮೈಕೈ ಮುಟ್ಟಿದಂತೆ ಇರುವುದರಿಂದ ವೈರಸ್ ಹರಡುತ್ತದೆ. ಜ್ವರ, ತಲೆನೋವು, ಬೆನ್ನುನೋವು, ಸ್ನಾಯು ನೋವು, ದಣಿವಾಗುವುದು, ಮೈಯಲ್ಲಿ ಬೊಕ್ಕೆಗಳಂತೆ ಕಾಣಿಸಿಕೊಳ್ಳುವುದು ಇತ್ಯಾದಿ ಈ ರೋಗದ ಲಕ್ಷಣಗಳು. ಮುಖದಲ್ಲಿ ಮೊಡವೆಗಳಂತೆ ಗುಳ್ಳೆ ಏಳುವುದು, ಬಾಯಿ ಒಳಗೆ ಕಜ್ಜಿಗಳಾಗುವುದು ಕೂಡ ಇರುತ್ತದೆ. ಆರಂಭದಲ್ಲಿ ಪತ್ತೆ ಮಾಡಿ ಚಿಕಿತ್ಸೆ ನೀಡಿದರೆ, ರೋಗ ನಿವಾರಣೆಯಾಗುತ್ತದೆ.
A 35 year-old man, who came to Kerala from UAE earlier this month, has tested positive for monkeypox, making him the third case of the virus from the country as well as the state.Kerala Health Minister Veena George said the Malappuram native arrived in the state on July 6 and was undergoing treatment at the Manjeri Medical College there.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am