ಬ್ರೇಕಿಂಗ್ ನ್ಯೂಸ್
22-07-22 09:47 pm HK News Desk ದೇಶ - ವಿದೇಶ
ವಯನಾಡ್, ಜುಲೈ 22: ಕೇರಳದಲ್ಲಿ ಒಂದೆಡೆ ಮಂಕಿ ಪಾಕ್ಸ್ ಭೀತಿ ಮೂಡಿಸಿದ್ದರೆ, ಮತ್ತೊಂದೆಡೆ ವಯನಾಡ್ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರವೂ ಕಾಣಿಸಿಕೊಂಡಿದೆ. ರೋಗದ ಬಗ್ಗೆ ಸ್ಯಾಂಪಲನ್ನು ಭೋಪಾಲದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿಂದ ಆಫ್ರಿಕನ್ ಹಂದಿ ಜ್ವರ ಖಚಿತವಾಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ.
ಕಳೆದ ವಾರ ಹಂದಿ ಫಾರ್ಮ್ ನಲ್ಲಿ ಐದು ಹಂದಿಗಳು ದಿಢೀರ್ ಆಗಿ ಸಾವು ಕಂಡಿದ್ದರಿಂದ ಪಶು ಚಿಕಿತ್ಸಾಲಯದ ವೈದ್ಯರು ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಿದ್ದರು. ಇದೀಗ ಹಂದಿ ಜ್ವರ ಖಚಿತವಾಗುತ್ತಲೇ ಎರಡು ಕಿಮೀ ಸುತ್ತಲಿನ ಹಂದಿ ಫಾರ್ಮ್ ಗಳಲ್ಲಿರುವ ಎಲ್ಲ ಹಂದಿಗಳನ್ನು ಕೊಲ್ಲಲು ಆರೋಗ್ಯ ಇಲಾಖೆ ಸೂಚಿಸಿದೆ. ಆಸುಪಾಸಿನಲ್ಲಿ ಮೂರು ಫಾರ್ಮ್ ಗಳಿದ್ದು ಅದರಲ್ಲಿ 300ರಷ್ಟು ಹಂದಿಗಳಿದ್ದು ಅವನ್ನು ಶುಕ್ರವಾರವೇ ಕೊಂದು ಮುಗಿಸಲು ಆದೇಶ ಮಾಡಲಾಗಿದೆ.
ಹಂದಿ ಜ್ವರ ಮಾನವನಿಗೆ ಹರಡುವುದು ಅಪರೂಪ. ಆದರೆ, ಕೆಲವು ಸಂದರ್ಭಗಳಲ್ಲಿ ಜ್ವರ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ ವಯನಾಡ್ ಮತ್ತು ಕೋಝಿಕ್ಕೋಡ್ ಜಿಲ್ಲೆಯಲ್ಲಿ ಎಲರ್ಟ್ ಮಾಡಲಾಗಿದೆ. ರೋಗದ ಶಂಕೆಯಲ್ಲಿ ಎರಡು ವಾರಗಳ ಹಿಂದೆಯೇ ಹಂದಿ ಮಾಂಸ ಹೊರ ರಾಜ್ಯಗಳಿಗೆ ಸಾಗಾಟ ಮಾಡುವುದಕ್ಕೆ ರಾಜ್ಯ ಸರಕಾರ ನಿಷೇಧ ವಿಧಿಸಿತ್ತು. ಆರೋಗ್ಯ ಇಲಾಖೆ ಅಧಿಕಾರಿಗಳು ಹಂದಿ ಮತ್ತು ಬೀಫ್ ಮಾಂಸವನ್ನು ಆಹಾರವಾಗಿ ಬಳಸುವ ಮೊದಲು ಚೆನ್ನಾಗಿ ಬೇಯಿಸಬೇಕು ಎಂದು ಜನರಿಗೆ ಸೂಚನೆ ನೀಡಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಹಂದಿ ಜ್ವರವು ಪ್ರಾಣಿಗಳಲ್ಲಿ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಮನುಷ್ಯನಿಗೆ ಹರಡಿ ಸಮಸ್ಯೆ ಆಗುವುದಕ್ಕಿಂತಲೂ ಹಂದಿಯಿಂದ ಇತರ ಪ್ರಾಣಿಗಳಿಗೆ ಹರಡಿ ದೊಡ್ಡ ಮಟ್ಟದಲ್ಲಿ ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಹಂದಿ ಫಾರ್ಮ್ ಗಳಿಗೆ ಇದರಿಂದ ದೊಡ್ಡ ಹೊಡೆತ ಬೀಳುತ್ತದೆ ಎಂದು ಹೇಳಿದೆ.
African swine fever found in Kerala’s Wayanad, mass culling of pigs soonTwo districts of north Kerala have been put on high alert after African swine fever was detected in pigs in Wayanad on Friday, health officials said.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm