ಬ್ರೇಕಿಂಗ್ ನ್ಯೂಸ್
02-10-20 09:57 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 02: ವಿಶ್ವದ ಅತೀ ಉದ್ದದ ಸುರಂಗ ಹೆದ್ದಾರಿ ಎನಿಸಿಕೊಂಡ 9 ಕಿಮೀ ಉದ್ದದ ಅಟಲ್ ರೋಹ್ಟಾಂಗ್ ಸುರಂಗ ಮಾರ್ಗವನ್ನು ಅಕ್ಟೋಬರ್ 3 ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.
ಹಿಮಾಚಲಪ್ರದೇಶದ ರೋಹ್ಟಂಗ್ನಲ್ಲಿರುವ ಈ ಸರ್ವಋತು ಸುರಂಗವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಿದ ಬಳಿಕ ಸೋಲನ್ ಕಣಿವೆ ಹಾಗೂ ಲಹೌಲ್ ಸ್ಪಿಟಿ ಜಿಲ್ಲೆಯ ಸಿಸ್ಸುವಿನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಲ್ಲಿನ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಮಾಹಿತಿ ನೀಡಿದ್ದಾರೆ. ಎರಡೂ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಪಾಲನೆ ಆಗಲಿದ್ದು ಕೇವಲ 200 ಜನ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಸುಮಾರು 10 ಸಾವಿರ ಅಡಿ ಎತ್ತರದಲ್ಲಿ ನಿರ್ಮಿಸಲ್ಪಟ್ಟಿರುವ ವಿಶ್ವದ ಅತಿ ಉದ್ದವಾದ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಅಟಲ್ ಸುರಂಗ ಮಾರ್ಗ ಪಾತ್ರವಾಗಿದೆ. ಈ ಸುರಂಗದಿಂದಾಗಿ ಮನಾಲಿ- ಲೇಹ್ ನಡುವಿನ ಪ್ರಯಾಣದ ಅಂತರ 46 ಕಿ.ಮೀನಷ್ಟು ಕಡಿಮೆಯಾಗಲಿದ್ದು 4 ಗಂಟೆಗಳ ಉಳಿತಾಯವಾಗಲಿದೆ.
ಮನಾಲಿಯಲ್ಲಿ ಭಾರೀ ಹಿಮಪಾತವಾಗುವ ಕಾರಣ ಇಲ್ಲಿ ರಸ್ತೆ ಸಂಚಾರ ಕೇವಲ ಆರು ತಿಂಗಳು ಮಾತ್ರ ಸಾಧ್ಯವಿತ್ತು. ಆದರೆ ಇದೀಗ ಸುರಂಗ ಮಾರ್ಗದಿಂದಾಗಿ ಮನಾಲಿಯಿಂದ ಲಹೌಲ್ ಸ್ಪಿಟಿ ಕಣಿವೆಯನ್ನು ವರ್ಷವಿಡಿ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ. ಈ ಸುರಂಗ ಮಾರ್ಗದಲ್ಲಿ ಪ್ರತಿ 60 ಮೀಟರಿಗೆ ಸಿಸಿಟಿವಿ ಕ್ಯಾಮೆರಾಗಳಿದ್ದು, ಸುರಂಗದ ಒಳಗೆ ಪ್ರತಿ 500 ಮೀಟರ್ ಅಂತರದಲ್ಲಿ ತುರ್ತು ನಿರ್ಗಮನ ದ್ವಾರಗಳನ್ನು ನಿರ್ಮಿಸಲಾಗಿದೆ.

ವಾಜಪೇಯಿ ಪ್ರಧಾನಿ ಆಗಿದ್ದಾಗ ಈ ಸುರಂಗ ಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದರು. ಅಟಲ್ ಕನಸಿನ ಯೋಜನೆ ಆಗಿದ್ದರಿಂದ ಸುರಂಗ ಮಾರ್ಗಕ್ಕೆ ಅಟಲ್ ಹೆಸರನ್ನೇ ಇಡಲಾಗಿದೆ. ಇದಲ್ಲದೆ, ಈ ಸುರಂಗ ಮಾರ್ಗದಿಂದಾಗಿ ಚೀನಾ ಗಡಿಭಾಗದಲ್ಲಿ ಲಡಾಖ್ ಪ್ರಾಂತ್ಯದ ಮೇಲೆ ಭಾರತ ತನ್ನ ಹಿಡಿತವನ್ನು ಇನ್ನಷ್ಟು ಬಲಪಡಿಸಲು ಸಾಧ್ಯವಾಗಲಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm