ಬ್ರೇಕಿಂಗ್ ನ್ಯೂಸ್
02-10-20 09:57 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 02: ವಿಶ್ವದ ಅತೀ ಉದ್ದದ ಸುರಂಗ ಹೆದ್ದಾರಿ ಎನಿಸಿಕೊಂಡ 9 ಕಿಮೀ ಉದ್ದದ ಅಟಲ್ ರೋಹ್ಟಾಂಗ್ ಸುರಂಗ ಮಾರ್ಗವನ್ನು ಅಕ್ಟೋಬರ್ 3 ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.
ಹಿಮಾಚಲಪ್ರದೇಶದ ರೋಹ್ಟಂಗ್ನಲ್ಲಿರುವ ಈ ಸರ್ವಋತು ಸುರಂಗವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಿದ ಬಳಿಕ ಸೋಲನ್ ಕಣಿವೆ ಹಾಗೂ ಲಹೌಲ್ ಸ್ಪಿಟಿ ಜಿಲ್ಲೆಯ ಸಿಸ್ಸುವಿನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಲ್ಲಿನ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಮಾಹಿತಿ ನೀಡಿದ್ದಾರೆ. ಎರಡೂ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಪಾಲನೆ ಆಗಲಿದ್ದು ಕೇವಲ 200 ಜನ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಸುಮಾರು 10 ಸಾವಿರ ಅಡಿ ಎತ್ತರದಲ್ಲಿ ನಿರ್ಮಿಸಲ್ಪಟ್ಟಿರುವ ವಿಶ್ವದ ಅತಿ ಉದ್ದವಾದ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಅಟಲ್ ಸುರಂಗ ಮಾರ್ಗ ಪಾತ್ರವಾಗಿದೆ. ಈ ಸುರಂಗದಿಂದಾಗಿ ಮನಾಲಿ- ಲೇಹ್ ನಡುವಿನ ಪ್ರಯಾಣದ ಅಂತರ 46 ಕಿ.ಮೀನಷ್ಟು ಕಡಿಮೆಯಾಗಲಿದ್ದು 4 ಗಂಟೆಗಳ ಉಳಿತಾಯವಾಗಲಿದೆ.
ಮನಾಲಿಯಲ್ಲಿ ಭಾರೀ ಹಿಮಪಾತವಾಗುವ ಕಾರಣ ಇಲ್ಲಿ ರಸ್ತೆ ಸಂಚಾರ ಕೇವಲ ಆರು ತಿಂಗಳು ಮಾತ್ರ ಸಾಧ್ಯವಿತ್ತು. ಆದರೆ ಇದೀಗ ಸುರಂಗ ಮಾರ್ಗದಿಂದಾಗಿ ಮನಾಲಿಯಿಂದ ಲಹೌಲ್ ಸ್ಪಿಟಿ ಕಣಿವೆಯನ್ನು ವರ್ಷವಿಡಿ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ. ಈ ಸುರಂಗ ಮಾರ್ಗದಲ್ಲಿ ಪ್ರತಿ 60 ಮೀಟರಿಗೆ ಸಿಸಿಟಿವಿ ಕ್ಯಾಮೆರಾಗಳಿದ್ದು, ಸುರಂಗದ ಒಳಗೆ ಪ್ರತಿ 500 ಮೀಟರ್ ಅಂತರದಲ್ಲಿ ತುರ್ತು ನಿರ್ಗಮನ ದ್ವಾರಗಳನ್ನು ನಿರ್ಮಿಸಲಾಗಿದೆ.

ವಾಜಪೇಯಿ ಪ್ರಧಾನಿ ಆಗಿದ್ದಾಗ ಈ ಸುರಂಗ ಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದರು. ಅಟಲ್ ಕನಸಿನ ಯೋಜನೆ ಆಗಿದ್ದರಿಂದ ಸುರಂಗ ಮಾರ್ಗಕ್ಕೆ ಅಟಲ್ ಹೆಸರನ್ನೇ ಇಡಲಾಗಿದೆ. ಇದಲ್ಲದೆ, ಈ ಸುರಂಗ ಮಾರ್ಗದಿಂದಾಗಿ ಚೀನಾ ಗಡಿಭಾಗದಲ್ಲಿ ಲಡಾಖ್ ಪ್ರಾಂತ್ಯದ ಮೇಲೆ ಭಾರತ ತನ್ನ ಹಿಡಿತವನ್ನು ಇನ್ನಷ್ಟು ಬಲಪಡಿಸಲು ಸಾಧ್ಯವಾಗಲಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am