ಬ್ರೇಕಿಂಗ್ ನ್ಯೂಸ್
30-07-22 09:07 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 30 : ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ಶಾಂತಿ, ಸಾಮರಸ್ಯ ಕದಡುವವರ ಬಗ್ಗೆ ಎಚ್ಚರದಿಂದಿರಬೇಕು. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಶಕ್ತಿಗಳ ಬಗ್ಗೆ ಜಾಗರೂಕತೆ ಅಗತ್ಯ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ.
ದೆಹಲಿಯಲ್ಲಿ ಅಖಿಲ ಭಾರತ ಸೂಫಿ ಕೌನ್ಸಿಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಪ್ರಗತಿಯನ್ನು ಮತ್ತು ಹೆಸರನ್ನು ಹಾಳು ಮಾಡಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿವೆ. ಅಂತಹ ವಾತಾವರಣ ಸೃಷ್ಟಿ ಮಾಡುವವರ ವಿರುದ್ದ ಸದಾ ಎಚ್ಚರದಿಂದಿರಬೇಕು. ಧರ್ಮ, ಸಿದ್ಧಾಂತದ ಹೆಸರಿನಲ್ಲಿ ದ್ವೇಷ, ಸಂಘರ್ಷ ಉಂಟು ಮಾಡುತ್ತಿರುವುದು ಸರಿಯಲ್ಲ. ದೇಶದಿಂದಾಚೆಗೂ ಇದು ಹರಡುತ್ತಿದ್ದು, ಇಡೀ ದೇಶದ ಅಭಿವೃದ್ದಿಯ ಮೇಲೆ ಇದು ಕೆಟ್ಟ ಪರಿಣಾಮ ಬೀರುತ್ತಿದೆ ಎಂದವರು ಆತಂಕ ವ್ಯಕ್ತಪಡಿಸಿದರು.
ಕೆಲವು ಸಂಘಟನೆಗಳು ದೇಶದಲ್ಲಿ ಸಂಘರ್ಷ ಉಂಟು ಮಾಡಲೆಂದೇ ಹುಟ್ಟಿಕೊಂಡಿವೆ. ಇವು ಧರ್ಮದ ಹೆಸರಿನಲ್ಲಿ ನಿರಂತರವಾಗಿ ಸಂಘರ್ಷಗಳನ್ನು ಹುಟ್ಟುಹಾಕಿ ದೇಶದ ಶಾಂತಿ ಕೆಡಿಸುವಲ್ಲಿ ಕಾರಣವಾಗುತ್ತಿವೆ. ಏಕತೆಯಿಂದ ಮಾತ್ರ ದೇಶ ಮುನ್ನಡೆಯಲು ಸಾಧ್ಯ. ಅದನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳಬೇಕು. ದೇಶ ಪ್ರಗತಿ ಹೊಂದಿದರೆ ಎಲ್ಲಾ ಧರ್ಮದವರಿಗೂ ಅದರ ಪ್ರಯೋಜನ ಸಿಗುತ್ತದೆ ಎಂದರು.
ಧಾರ್ಮಿಕ ಮುಖ್ಯಸ್ಥರು ಶಾಂತಿ ಮತ್ತು ಏಕತೆಗಾಗಿ ಚರ್ಚಿಸಲು ಮತ್ತು ನಿರ್ಣಯವನ್ನು ಅಂಗೀಕರಿಸುವ ಸಂಬಂಧ ನಡೆದ ಸಭೆ ಇದಾಗಿತ್ತು.
National Security Adviser Ajit Doval today warned the nation to be on guard against forces conspiring to disturb harmony and create unrest in the name of religion and ideology.Mr Doval made the comment at an event organised by the All India Sufi Sajjadanashin Council in Delhi, where religious heads attended to discuss and pass a resolution for peace and unity. A resolution after the meeting called for banning organisations like the Popular Front of India, or PFI, "who have been pursuing a divisive agenda."
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am