ಬ್ರೇಕಿಂಗ್ ನ್ಯೂಸ್
03-10-20 12:11 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 03: 20 ವರ್ಷಗಳ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಕಂಡಿದ್ದ ಕನಸು ಇಂದಿಗೆ ನನಸಾಗಿದೆ. ಈ ಐತಿಹಾಸಿಕ ಕ್ಷಣದೊಂದಿಗೆ ಅಟಲ್ ಕನಸು ನನಸಾಗಿದ್ದು ಮಾತ್ರವಲ್ಲ, ಹಿಮಾಚಲಪ್ರದೇಶದ ಜನರ ಬಹುಕಾಲದ ನಿರೀಕ್ಷೆಯೂ ಅಂತ್ಯಗೊಂಡಿದೆ. ಗಡಿಭಾಗದಲ್ಲಿ ಸೇನೆಯ ಕಾರ್ಯಾಚರಣೆಗೂ ಈ ಸುರಂಗ ಮಾರ್ಗ ಮಹತ್ವದ್ದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು, ಹಿಮಾಚಲಪ್ರದೇಶದ ಮನಾಲಿ ಮತ್ತು ಲೇಹ್ ನಡುವಿನ 9 ಕಿಮೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಹಿಮಾಚಲಪ್ರದೇಶ ಸಿಎಂ ಜೈರಾಮ್ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಬೋರ್ಡರ್ ರೋಡ್ ಆರ್ಗನೈಸೇಶನ್ ಸಂಸ್ಥೆಯ ಡೈರೆಕ್ಟರ್ ಜನರಲ್ ಹರ್ಪಾಲ್ ಸಿಂಗ್ ಉಪಸ್ಥಿತರಿದ್ದರು.
ಲೇಹ್ - ಲಡಾಖ್, ಮನಾಲಿಯ ಜನರಿಗೆ ಈ ಸುರಂಗ ಮಾರ್ಗವು ಜೀವಮಾನದ ಕೊಡುಗೆಯಾಗಲಿದೆ. ಹಿಮಪಾತದಿಂದಾಗಿ ಹಿಂದೆ ಈ ಭಾಗದ ಜನರು ಆರು ತಿಂಗಳ ಕಾಲ ಮನಾಲಿಗೆ ಹೋಗುವುದು ಸಾಧ್ಯವಾಗುತ್ತಿರಲಿಲ್ಲ. ಇನ್ನು ವರ್ಷಪೂರ್ತಿ ಈ ಹೆದ್ದಾರಿಯ ಮೂಲಕ ಮನಾಲಿ - ಲೇಹ್ ಸಂಪರ್ಕ ಮಾಡಬಹುದಾಗಿದೆ. ಗಡಿಯಲ್ಲಿ ರಸ್ತೆ, ಸೇತುವೆ, ಸುರಂಗ ಮಾರ್ಗಗಳ ರಚನೆಯಿಂದ ಈ ಭಾಗದ ಜನರಿಗೆ ಮಾತ್ರ ಉಪಯೋಗ ಆಗುವುದಲ್ಲ. ಇದರ ದೊಡ್ಡ ಲಾಭ ಸೇನಾ ಪಡೆಗೂ ಸಿಗಲಿದೆ ಎಂದು ಮೋದಿ ಹೇಳಿದರು.

9.02 ಕಿಮೀ ಉದ್ದದ ಈ ಸುರಂಗ ಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವೆ 46 ಕಿಮೀ ಅಂತರವನ್ನು ಕಡಿಮೆಗೊಳಿಸಿದೆ. ಅಲ್ಲದೆ, ಐದು ಗಂಟೆಗಳ ಸಮಯವನ್ನು ಉಳಿತಾಯ ಮಾಡಿದೆ. ಸಮುದ್ರ ಮಟ್ಟಕ್ಕಿಂತ 3 ಸಾವಿರ ಮೀಟರ್ ಎತ್ತರದಲ್ಲಿ 9 ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಿಸಿದ್ದು ಜಗತ್ತಿನಲ್ಲಿ ಇದೇ ಮೊದಲು. ಅತ್ಯಾಧುನಿಕ ಸೌಕರ್ಯಗಳೊಂದಿಗೆ ನಿರ್ಮಿಸಲಾಗಿರುವ ಈ ಸುರಂಗ ಮಾರ್ಗಕ್ಕೆ 3300 ಕೋಟಿ ರೂಪಾಯಿ ವೆಚ್ಚವಾಗಿದೆ. ದಿನದಲ್ಲಿ 3 ಸಾವಿರ ಕಾರು ಮತ್ತು 1500 ಟ್ರಕ್ ಗಳು 80 ಕಿಮೀ ವೇಗದಲ್ಲಿ ಸಾಗಬಲ್ಲ ರೀತಿಯಲ್ಲಿ ರಸ್ತೆಯ ಸಾಮರ್ಥ್ಯವನ್ನು ಮಾರ್ಪಡಿಸಲಾಗಿದೆ. ವಿಶೇಷ ಅಂದ್ರೆ, ಈ ಸುರಂಗ ಮಾರ್ಗ ಅತ್ಯಂತ ಕಡಿದಾದ ಕಣಿವೆಗಳು ಮತ್ತು ನದಿಗಳ ಅಡಿಭಾಗದಿಂದ ದಾಟಿಕೊಂಡು ಸಾಗಲಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm