ಬ್ರೇಕಿಂಗ್ ನ್ಯೂಸ್
03-10-20 12:11 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 03: 20 ವರ್ಷಗಳ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಕಂಡಿದ್ದ ಕನಸು ಇಂದಿಗೆ ನನಸಾಗಿದೆ. ಈ ಐತಿಹಾಸಿಕ ಕ್ಷಣದೊಂದಿಗೆ ಅಟಲ್ ಕನಸು ನನಸಾಗಿದ್ದು ಮಾತ್ರವಲ್ಲ, ಹಿಮಾಚಲಪ್ರದೇಶದ ಜನರ ಬಹುಕಾಲದ ನಿರೀಕ್ಷೆಯೂ ಅಂತ್ಯಗೊಂಡಿದೆ. ಗಡಿಭಾಗದಲ್ಲಿ ಸೇನೆಯ ಕಾರ್ಯಾಚರಣೆಗೂ ಈ ಸುರಂಗ ಮಾರ್ಗ ಮಹತ್ವದ್ದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು, ಹಿಮಾಚಲಪ್ರದೇಶದ ಮನಾಲಿ ಮತ್ತು ಲೇಹ್ ನಡುವಿನ 9 ಕಿಮೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಹಿಮಾಚಲಪ್ರದೇಶ ಸಿಎಂ ಜೈರಾಮ್ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಬೋರ್ಡರ್ ರೋಡ್ ಆರ್ಗನೈಸೇಶನ್ ಸಂಸ್ಥೆಯ ಡೈರೆಕ್ಟರ್ ಜನರಲ್ ಹರ್ಪಾಲ್ ಸಿಂಗ್ ಉಪಸ್ಥಿತರಿದ್ದರು.
ಲೇಹ್ - ಲಡಾಖ್, ಮನಾಲಿಯ ಜನರಿಗೆ ಈ ಸುರಂಗ ಮಾರ್ಗವು ಜೀವಮಾನದ ಕೊಡುಗೆಯಾಗಲಿದೆ. ಹಿಮಪಾತದಿಂದಾಗಿ ಹಿಂದೆ ಈ ಭಾಗದ ಜನರು ಆರು ತಿಂಗಳ ಕಾಲ ಮನಾಲಿಗೆ ಹೋಗುವುದು ಸಾಧ್ಯವಾಗುತ್ತಿರಲಿಲ್ಲ. ಇನ್ನು ವರ್ಷಪೂರ್ತಿ ಈ ಹೆದ್ದಾರಿಯ ಮೂಲಕ ಮನಾಲಿ - ಲೇಹ್ ಸಂಪರ್ಕ ಮಾಡಬಹುದಾಗಿದೆ. ಗಡಿಯಲ್ಲಿ ರಸ್ತೆ, ಸೇತುವೆ, ಸುರಂಗ ಮಾರ್ಗಗಳ ರಚನೆಯಿಂದ ಈ ಭಾಗದ ಜನರಿಗೆ ಮಾತ್ರ ಉಪಯೋಗ ಆಗುವುದಲ್ಲ. ಇದರ ದೊಡ್ಡ ಲಾಭ ಸೇನಾ ಪಡೆಗೂ ಸಿಗಲಿದೆ ಎಂದು ಮೋದಿ ಹೇಳಿದರು.
9.02 ಕಿಮೀ ಉದ್ದದ ಈ ಸುರಂಗ ಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವೆ 46 ಕಿಮೀ ಅಂತರವನ್ನು ಕಡಿಮೆಗೊಳಿಸಿದೆ. ಅಲ್ಲದೆ, ಐದು ಗಂಟೆಗಳ ಸಮಯವನ್ನು ಉಳಿತಾಯ ಮಾಡಿದೆ. ಸಮುದ್ರ ಮಟ್ಟಕ್ಕಿಂತ 3 ಸಾವಿರ ಮೀಟರ್ ಎತ್ತರದಲ್ಲಿ 9 ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಿಸಿದ್ದು ಜಗತ್ತಿನಲ್ಲಿ ಇದೇ ಮೊದಲು. ಅತ್ಯಾಧುನಿಕ ಸೌಕರ್ಯಗಳೊಂದಿಗೆ ನಿರ್ಮಿಸಲಾಗಿರುವ ಈ ಸುರಂಗ ಮಾರ್ಗಕ್ಕೆ 3300 ಕೋಟಿ ರೂಪಾಯಿ ವೆಚ್ಚವಾಗಿದೆ. ದಿನದಲ್ಲಿ 3 ಸಾವಿರ ಕಾರು ಮತ್ತು 1500 ಟ್ರಕ್ ಗಳು 80 ಕಿಮೀ ವೇಗದಲ್ಲಿ ಸಾಗಬಲ್ಲ ರೀತಿಯಲ್ಲಿ ರಸ್ತೆಯ ಸಾಮರ್ಥ್ಯವನ್ನು ಮಾರ್ಪಡಿಸಲಾಗಿದೆ. ವಿಶೇಷ ಅಂದ್ರೆ, ಈ ಸುರಂಗ ಮಾರ್ಗ ಅತ್ಯಂತ ಕಡಿದಾದ ಕಣಿವೆಗಳು ಮತ್ತು ನದಿಗಳ ಅಡಿಭಾಗದಿಂದ ದಾಟಿಕೊಂಡು ಸಾಗಲಿದೆ.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm