ಬ್ರೇಕಿಂಗ್ ನ್ಯೂಸ್
03-10-20 12:11 pm Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್ 03: 20 ವರ್ಷಗಳ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಕಂಡಿದ್ದ ಕನಸು ಇಂದಿಗೆ ನನಸಾಗಿದೆ. ಈ ಐತಿಹಾಸಿಕ ಕ್ಷಣದೊಂದಿಗೆ ಅಟಲ್ ಕನಸು ನನಸಾಗಿದ್ದು ಮಾತ್ರವಲ್ಲ, ಹಿಮಾಚಲಪ್ರದೇಶದ ಜನರ ಬಹುಕಾಲದ ನಿರೀಕ್ಷೆಯೂ ಅಂತ್ಯಗೊಂಡಿದೆ. ಗಡಿಭಾಗದಲ್ಲಿ ಸೇನೆಯ ಕಾರ್ಯಾಚರಣೆಗೂ ಈ ಸುರಂಗ ಮಾರ್ಗ ಮಹತ್ವದ್ದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು, ಹಿಮಾಚಲಪ್ರದೇಶದ ಮನಾಲಿ ಮತ್ತು ಲೇಹ್ ನಡುವಿನ 9 ಕಿಮೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಹಿಮಾಚಲಪ್ರದೇಶ ಸಿಎಂ ಜೈರಾಮ್ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಬೋರ್ಡರ್ ರೋಡ್ ಆರ್ಗನೈಸೇಶನ್ ಸಂಸ್ಥೆಯ ಡೈರೆಕ್ಟರ್ ಜನರಲ್ ಹರ್ಪಾಲ್ ಸಿಂಗ್ ಉಪಸ್ಥಿತರಿದ್ದರು.
ಲೇಹ್ - ಲಡಾಖ್, ಮನಾಲಿಯ ಜನರಿಗೆ ಈ ಸುರಂಗ ಮಾರ್ಗವು ಜೀವಮಾನದ ಕೊಡುಗೆಯಾಗಲಿದೆ. ಹಿಮಪಾತದಿಂದಾಗಿ ಹಿಂದೆ ಈ ಭಾಗದ ಜನರು ಆರು ತಿಂಗಳ ಕಾಲ ಮನಾಲಿಗೆ ಹೋಗುವುದು ಸಾಧ್ಯವಾಗುತ್ತಿರಲಿಲ್ಲ. ಇನ್ನು ವರ್ಷಪೂರ್ತಿ ಈ ಹೆದ್ದಾರಿಯ ಮೂಲಕ ಮನಾಲಿ - ಲೇಹ್ ಸಂಪರ್ಕ ಮಾಡಬಹುದಾಗಿದೆ. ಗಡಿಯಲ್ಲಿ ರಸ್ತೆ, ಸೇತುವೆ, ಸುರಂಗ ಮಾರ್ಗಗಳ ರಚನೆಯಿಂದ ಈ ಭಾಗದ ಜನರಿಗೆ ಮಾತ್ರ ಉಪಯೋಗ ಆಗುವುದಲ್ಲ. ಇದರ ದೊಡ್ಡ ಲಾಭ ಸೇನಾ ಪಡೆಗೂ ಸಿಗಲಿದೆ ಎಂದು ಮೋದಿ ಹೇಳಿದರು.

9.02 ಕಿಮೀ ಉದ್ದದ ಈ ಸುರಂಗ ಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವೆ 46 ಕಿಮೀ ಅಂತರವನ್ನು ಕಡಿಮೆಗೊಳಿಸಿದೆ. ಅಲ್ಲದೆ, ಐದು ಗಂಟೆಗಳ ಸಮಯವನ್ನು ಉಳಿತಾಯ ಮಾಡಿದೆ. ಸಮುದ್ರ ಮಟ್ಟಕ್ಕಿಂತ 3 ಸಾವಿರ ಮೀಟರ್ ಎತ್ತರದಲ್ಲಿ 9 ಕಿಮೀ ಉದ್ದದ ಸುರಂಗ ಮಾರ್ಗ ನಿರ್ಮಿಸಿದ್ದು ಜಗತ್ತಿನಲ್ಲಿ ಇದೇ ಮೊದಲು. ಅತ್ಯಾಧುನಿಕ ಸೌಕರ್ಯಗಳೊಂದಿಗೆ ನಿರ್ಮಿಸಲಾಗಿರುವ ಈ ಸುರಂಗ ಮಾರ್ಗಕ್ಕೆ 3300 ಕೋಟಿ ರೂಪಾಯಿ ವೆಚ್ಚವಾಗಿದೆ. ದಿನದಲ್ಲಿ 3 ಸಾವಿರ ಕಾರು ಮತ್ತು 1500 ಟ್ರಕ್ ಗಳು 80 ಕಿಮೀ ವೇಗದಲ್ಲಿ ಸಾಗಬಲ್ಲ ರೀತಿಯಲ್ಲಿ ರಸ್ತೆಯ ಸಾಮರ್ಥ್ಯವನ್ನು ಮಾರ್ಪಡಿಸಲಾಗಿದೆ. ವಿಶೇಷ ಅಂದ್ರೆ, ಈ ಸುರಂಗ ಮಾರ್ಗ ಅತ್ಯಂತ ಕಡಿದಾದ ಕಣಿವೆಗಳು ಮತ್ತು ನದಿಗಳ ಅಡಿಭಾಗದಿಂದ ದಾಟಿಕೊಂಡು ಸಾಗಲಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am