ಬ್ರೇಕಿಂಗ್ ನ್ಯೂಸ್
06-08-22 09:37 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 6: ದೇಶದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಆಯ್ಕೆಯಾಗಿದ್ದಾರೆ. ಶನಿವಾರ ಬೆಳಗ್ಗಿನಿಂದ ಮತದಾನ ನಡೆದಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟಿಸಲಾಗಿದೆ. ನಿರೀಕ್ಷೆಯಂತೆ ಜಗದೀಪ್ ಧನ್ಕರ್ ಭಾರೀ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
ರಾಜ್ಯಸಭೆ ಸದಸ್ಯರು ಮತ್ತು ಸಂಸದರು ಮತ ಚಲಾಯಿಸಿದ್ದು, ಒಟ್ಟು 725 ಮತಗಳು ಚಲಾವಣೆ ಆಗಿದ್ದವು. ಈ ಪೈಕಿ 528 ಮತಗಳನ್ನು ಜಗದೀಪ್ ಧನ್ಕರ್ ಪಡೆದಿದ್ದರೆ, ವಿರೋಧಿ ಒಕ್ಕೂಟದ ಅಭ್ಯರ್ಥಿ ಮಾರ್ಗರೆಟ್ ಆಳ್ವಾ 182 ಮತಗಳನ್ನಷ್ಟೇ ಪಡೆದಿದ್ದಾರೆ. ಲೋಕಸಭೆಯ ಜನರಲ್ ಸೆಕ್ರಟರಿ ಉತ್ಪಾಲ್ ಸಿಂಗ್ ಮತದಾನದ ಬಳಿಕ ಫಲಿತಾಂಶ ಪ್ರಕಟಿಸಿದ್ದಾರೆ. ಒಟ್ಟು 780 ಸಂಸತ್ ಪ್ರತಿನಿಧಿಗಳ ಪೈಕಿ 725 ಮಂದಿ ಮತ ಚಲಾಯಿಸಿದ್ದರು. ಈ ಪೈಕಿ 15 ಮತಗಳು ಅಸಿಂಧು ಆಗಿದ್ದು, 92.94 ಶೇ. ಮತ ಚಲಾವಣೆಯಾಗಿತ್ತು ಎಂದು ಹೇಳಿದ್ದಾರೆ. ಧನ್ಕರ್, ಪ್ರತಿಸ್ಪರ್ಧಿ ಮಾರ್ಗರೆಟ್ ಆಳ್ವಾ ವಿರುದ್ಧ 346 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ಬೆಳಗ್ಗೆ ಮೊದಲಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೊಟ್ಟಮೊದಲಿಗೆ ಮತ ಚಲಾವಣೆ ಮಾಡಿದ್ದರು. ಧನ್ಕರ್ ಗೆಲುವು ಘೋಷಣೆ ಆಗುತ್ತಲೇ ಅವರ ನಿವಾಸಕ್ಕೆ ತೆರಳಿ ಶುಭ ಹಾರೈಕೆ ಮಾಡಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಪ್ರಮುಖ ನಾಯಕರು ಧನ್ಕರ್ ನಿವಾಸಕ್ಕೆ ತೆರಳಿ ಗೌರವ ಸಲ್ಲಿಸಿದ್ದಾರೆ. ಬಿಜೆಪಿ ವಿರೋಧಿ ಟಿಎಂಸಿ ಸೇರಿದಂತೆ ಉತ್ತರ ಭಾರತದ ಬಹುತೇಕ ಪಕ್ಷಗಳು ಜಗದೀಪ್ ಧನ್ಕರ್ ಪರವಾಗಿ ಮತ ಚಲಾಯಿಸಿದ್ದವು.

ಫಲಿತಾಂಶ ಪ್ರಕಟವಾದ ಬಳಿಕ ಪ್ರತಿಕ್ರಿಯೆ ನೀಡಿದ ವಿಪಕ್ಷಗಳ ಅಭ್ಯರ್ಥಿ ಮಾರ್ಗರೆಟ್ ಆಳ್ವಾ, ದುರಾದೃಷ್ಟ ಎಂದರೆ ವಿಪಕ್ಷಗಳ ಸಾಲಿನಲ್ಲಿರುವ ಕೆಲವು ಪಕ್ಷಗಳು ಕೂಡ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿದವು. ಆಮೂಲಕ ವಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯನ್ನು ಸೋಲುವಂತೆ ಮಾಡಿತ್ತು. ಆಮೂಲಕ ತಮ್ಮ ಘನತೆಯನ್ನು ಕುಂದಿಸಿವೆ ಎಂದು ಹೇಳಿದರು.
NDA candidate Jagdeep Dhankhar was declared elected as the Vice President of India on Saturday after he bagged 528 votes against his rival candidate Margaret Alva’s 182. Dhankhar, 71, will succeed M Venkaiah Naidu who demits office August 10. Prime Minister Narendra Modi met the vice president-elect to congratulate him soon after his win.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 08:37 pm
Mangalore Correspondent
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm