ಬ್ರೇಕಿಂಗ್ ನ್ಯೂಸ್
04-10-20 10:21 am Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್. 04 : ಹತ್ರಾಸ್ ಅತ್ಯಾಚಾರ ಪ್ರಕರಣವನ್ನು ಉತ್ತರ ಪ್ರದೇಶ ಸರಕಾರ ಸಿಬಿಐ ತನಿಖೆಗೆ ವಹಿಸಿದೆ.
ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶದ ಅಲೆ ಎಬ್ಬಿಸುತ್ತಿರುವಾಗಲೇ ಉತ್ತರ ಪ್ರದೇಶ ಯೋಗಿ ಸರಕಾರ ಇಡೀ ಪ್ರಕರಣದ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಿ ಕೈತೊಳೆದುಕೊಂಡಿದೆ. ಎರಡು ದಿನಗಳ ಹಿಂದೆ ಎಸ್ಐಟಿ ತಂಡ ನೇಮಕ ಮಾಡಿ, ಏಳು ದಿನಗಳಲ್ಲಿ ವರದಿ ನೀಡುವಂತೆ ಆದೇಶ ಮಾಡಿತ್ತು. ಪ್ರಾಥಮಿಕ ವರದಿ ಆಧರಿಸಿ ಹತ್ರಾಸ್ ಜಿಲ್ಲೆಯ ಎಸ್ಪಿ, ಡಿವೈಎಸ್ಪಿ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಸರಕಾರ ಅಮಾನತು ಮಾಡಿತ್ತು. ಪೊಲೀಸರು ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.

ಇದೀಗ ಸಂತ್ರಸ್ತ ಯುವತಿಯ ಕುಟುಂಬಸ್ಥರು ಸಿಬಿಐ, ಎಸ್ಐಟಿ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕೆಂದು ಒತ್ತಾಯ ಮಾಡಿದ ಬೆನ್ನಲ್ಲೇ ಪ್ರಕರಣವನ್ನು ಕೇಂದ್ರೀಯ ತಂಡಕ್ಕೆ ಸರಕಾರ ಒಪ್ಪಿಸಿದೆ. ಈಗ ನಡುವೆ, ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ್ದಾರೆ. ಎರಡು ದಿನಗಳ ಹಿಂದೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ನಿರಾಕರಿಸಲಾಗಿತ್ತು. ಮಾಧ್ಯಮಕ್ಕೂ ಹತ್ರಾಸ್ ಜಿಲ್ಲೆಯ ಭೇಟಿಗೆ ನಿರ್ಬಂಧ ವಿಧಿಸಲಾಗಿತ್ತು. ಈ ವಿಚಾರದಲ್ಲಿ ದೇಶದ ಹಲವೆಡೆ ಪ್ರತಿಭಟನೆ, ಆಕ್ರೋಶಕ್ಕೆ ಈಡಾಗುತ್ತಿದ್ದಂತೆಯೇ ಉತ್ತರ ಪ್ರದೇಶ ಸರಕಾರ ಈ ನಿರ್ಬಂಧ ತೆಗೆದುಹಾಕಿದೆ. ಒಟ್ಟು ಪ್ರಕರಣ ಯೋಗಿ ಆದಿತ್ಯನಾಥ್ ಸರಕಾರವನ್ನು ತೀವ್ರ ಮುಖಭಂಗಕ್ಕೆ ಈಡುಮಾಡಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am